ಬುದ್ಧನ ವಿಚಾರಧಾರೆಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಂಡರೆ ಸಮಾಜದಲ್ಲಿ ಸಹಬಾಳ್ವೆಯ ಜೀವನ ನಡೆಸಲು ಸಾಧ್ಯ ಡಾ. ಬಿ ರಾಜಶೇಖರಪ್ಪ 

by | 19/05/24 | ಪುಸ್ತಕ

ಚಳ್ಳಕೆರೆ: ಬುದ್ಧನು ದೊಡ್ಡದಾಗಿ ಉಪದೇಶವನ್ನು ಮಾಡದೆ ಸಣ್ಣ ಸಣ್ಣ ವಿಚಾರಗಳನ್ನು ಜನರಿಗೆ ಮನಮುಟ್ಟುವಂತೆ ತಿಳಿಸಿ ಸಮಾಜದಲ್ಲಿ ಶಾಂತಿ ಸಹ ಬಾಳ್ವೆಯ ಜೀವನ ನಡೆಸಲು ತನ್ನ ಬೋಧನೆಗಳ ಮೂಲಕ ಕರೆ ನೀಡಿದ ಮಾನವತವಾದಿ ಎಂದು ಹಿರಿಯ ಸಂಶೋಧಕ ಡಾ ಬಿ ರಾಜಶೇಖರಪ್ಪ ಅಭಿಪ್ರಾಯ ಪಟ್ಟರು. 

ತಾಲೂಕಿನ ತ್ಯಾಗರಾಜ ನಗರದಲ್ಲಿ ಹುಣ್ಣಿಮೆ ಪ್ರಕಾಶನ ಮತ್ತು ಪ್ರೀತಿ ಪುಸ್ತಕ ಪ್ರಕಾಶನ ಸಹಯೋಗದಲ್ಲಿ ಜಿ ವಿ ಆನಂದಮೂರ್ತಿರವರ ಬುದ್ಧನ ಕಥೆಗಳು ಎಂಬ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು ಗೌತಮ ಬುದ್ಧನು ತನ್ನ ವಿಚಾರಧಾರೆಗಳಿಂದ ಸರ್ವಧರ್ಮದ ಪ್ರತಿನಿಧಿಯಾಗಿ ಹೊರಹೊಮ್ಮಿದ ವ್ಯಕ್ತಿಯಾಗಿದ್ದಾರೆ ಯಾವುದೇ ಜಾತಿ ಮತ ಧರ್ಮದ ಭೇದ ಭಾವ ಇರಬಾರದು ದ್ವೇಷ ಭಾವನೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ಸಾರಿದ್ದಾರೆ ಆನಂದ ಮೂರ್ತಿಯವರು ತಮ್ಮ ಕೃತಿಯಾದ ಬುದ್ಧನ ಕಥೆಗಳು ಪುಸ್ತಕದಲ್ಲಿ ಬುದ್ಧನು ಬೋಧಿಸಿದ ತತ್ವಗಳನ್ನು ನಾವೆಲ್ಲರೂ ತಿಳಿದುಕೊಂಡಿದ್ದರು ಸಹ ಓದುಗರಿಗೆ ಸರಳವಾಗಿ ಬುದ್ಧನ ವ್ಯಕ್ತಿತ್ವವನ್ನು ಪರಿಚಯಿಸಿದ್ದಾರೆ ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿನಿಮಾ ಇತಿಹಾಸಕಾರ ಹಾಗೂ ಪತ್ರಕರ್ತ ದೊಡ್ಡ ಹುಲ್ಲೂರು ರುಕ್ಕೋಜಿ ಮಾತನಾಡಿ ಗಾಂಧಿ ಬುದ್ಧ ಅಂಬೇಡ್ಕರ್ ರವರು ತಮ್ಮ ಸರಳ ವ್ಯಕ್ತಿತ್ವದ ಮೂಲಕ ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ಸಾರಿದ್ದಾರೆ ನಮ್ಮ ನಡವಳಿಕೆಗಳಿಂದ ಬೇರೆಯವರಿಗೆ ತೊಂದರೆ ಆಗದಂತೆ ನಡೆದುಕೊಂಡಾಗ ಮಾತ್ರ ವ್ಯಕ್ತಿಗೆ ಉತ್ತಮವಾದ ಗೌರವ ದೊರೆಯುತ್ತದೆ ಎಂದು ತಿಳಿಸಿದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ವಿಚಾರವಾದಿ ಮತ್ತು ಪರಿಸರ ಕಾರ್ಯಕರ್ತರಾದ ಡಾ. ಎಚ್ ಆರ್ ಸ್ವಾಮಿ ಮಾತನಾಡಿ ಗೌತಮ ಬುದ್ಧರು ಯಾವುದೇ ವಿಚಾರವನ್ನು ತಿಳಿಸುವ ಮುನ್ನ ಪರಿಶೀಲಿಸಿ, ಪರಾಮರ್ಶಿಸಿ ಅವಲೋಕಿಸಿ ಜನರಿಗೆ ಸರಳ ರೀತಿಯಲ್ಲಿ ತಿಳಿಸುತ್ತಿದ್ದರು ಇತ್ತೀಚಿನ ದಿನಗಳಲ್ಲಿ ಕೊಳ್ಳುಬಾಕ ಸಂಸ್ಕೃತಿ ಹೆಚ್ಚಾಗುತ್ತಿದ್ದು ಇದರಿಂದ ಸಮಾಜದ ಸ್ವಾಸ್ಥ್ಯ ಕದಡುತ್ತಿದೆ ಗೌತಮ ಬುದ್ಧರು ತಮ್ಮ ಶಾಂತಚಿತ್ತದಿಂದ ಸಮಸ್ಯೆಗಳನ್ನು ಬಗೆಹರಿಸಿದ ಕಥೆಗಳನ್ನು ನಾವು ಓದಿದ್ದೇವೆ ಒಬ್ಬ ವ್ಯಕ್ತಿ ತನಗೆ ಎದುರಾದ ಯಾವುದೇ ಕಷ್ಟಗಳನ್ನು ಹೇಗೆ ಪರಿಹರಿಸಿಕೊಳ್ಳಬೇಕು ಎಂಬುದನ್ನು ತಿಳಿಯಲು ಬುದ್ಧನ ವಿಚಾರಧಾರೆಗಳನ್ನು ತಿಳಿದಾಗ ಮಾತ್ರ ಆ ವ್ಯಕ್ತಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. 

ಇತ್ತೀಚಿನ ದಿನಗಳಲ್ಲಿ ಜೈಲಿಗೆ ಹೋಗಿ ಬಂದವರನ್ನು ಸಹ ಸನ್ಮಾನ ಮಾಡುತ್ತಿರುವುದನ್ನು ನೋಡಿದರೆ ಮುಂದಿನ ಪೀಳಿಗೆಗೆ ಯಾವ ರೀತಿಯ ಸಂದೇಶ ನೀಡುತ್ತಿದ್ದೇವೆ ಎಂಬುದು ಕಳವಳಕಾರಿಯಾದ ವಿಷಯವಾಗಿದೆ ಇಂದಿನ ಸಮಾಜದಲ್ಲಿ ಆದರ್ಶಗಳು ಮೌಲ್ಯಗಳು ಕುಸಿಯುತ್ತಿರುವುದರಿಂದ ನಮ್ಮಲ್ಲಿ ಮೊದಲು ಬುದ್ಧನ ಸಣ್ಣ ಸಣ್ಣ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಆದರ್ಶಪ್ರಾಯವಾದ ಬದುಕನ್ನು ಕಟ್ಟಿಕೊಳ್ಳಲು ಪ್ರಯತ್ನಿಸಬೇಕಿದೆ ಎಂದು ಕರೆ ನೀಡಿದರು. 

ಈ ಸಂದರ್ಭದಲ್ಲಿ ಲೇಖಕರಾದ ಜಿವಿ ಆನಂದಮೂರ್ತಿ ಕಾರ್ಯಕ್ರಮದ ಸಂಯೋಜಕರಾದ ಎನ್ಆರ್ ತಿಪ್ಪೇಸ್ವಾಮಿ ನಿಸರ್ಗ ಗೋವಿಂದರಾಜು ಸೇರಿದಂತೆ ಹಲವು ಸಾಹಿತ್ಯಾಸಕ್ತರು ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page