ಬೆಳೆ ನಷ್ಟ ಬೆಳೆವಿಮೆ ನೀಡುವಂತೆ ರೈತರ ಸಂಘದಿಂದ ಪ್ರತಿಭಟನೆ

by | 31/10/22 | ಸಾಮಾಜಿಕ

ಚಳ್ಳಕೆರೆ 31 ಶೇಂಗಾ ಬೆಳೆ ನಷ್ಟ ಪರಿಹಾರ ನೀಡಲು ವಿಧಿಸಿರುವ ಅವೈಜ್ಞಾನಿಕ ಮಾನದಂಡಗಳನ್ನು ಕೈಬಿಟ್ಟು ಹಾನಿಗೊಳಗಾದ ಶೇಂಗಾ ಬೆಳೆಗೆ ಶೀಘ್ರವೇ ಬೆಳೆ ನಷ್ಟ ಪರಿಹಾರ ನೀಡುವಂತೆ ತಾ.ಕಚೇರಿ ಬಳಿ ರಾಜ್ಯ ಸಂಘ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನಲ್ಲಿ ಸತತವಾಗಿ ಸುರಿದ ಮಳೆಗೆ ಶೇಂಗಾ ಬೆಳೆಯು ಉತ್ತಮವಾಗಿ ಬೆಳೆದರು, ಇಳುವರಿಯಿಲ್ಲದೆ ಶೇಂಗಾ ಬೆಳೆಯು ಹಾನಿಗೊಳಗಾಗಿದೆ. ಕೂಡಲೇ ಸರ್ಕಾರ ರೈತರ ಶೇಂಗಾ ಬೆಳೆಗೆ ಬೆಳೆ ನಷ್ಟ ಪರಿಹಾರವನ್ನು ರೈತರ ಖಾತೆಗೆಗಳಿಗೆ ಜಮಾ ಮಾಡಬೇಕು ಎಂದು ರೈತರ ಸಂಘದ ಪದಾಧಿಕಾರಿಗಳು ಒತ್ತಾಯ ಮಾಡಿದರು.
ರೈತರು ಪಾವತಿ ಮಾಡಿರುವ ಬೆಳೆ ವಿಮೆಗೆ ವಾರ್ಷಿಕ ಮಳೆ ವರದಿ ಆಧರಿಸಿ ವಿಮೆ ಕಂಪನಿಯನ್ನು ಬೆಳೆ ವಿಮೆ ಅಂದಾಜು ಮಾಡುವುದು ಅವೈಜ್ಙಾನಿಕ ಮಾನದಂಡವಾಗಿದ್ದು, ಇಂತಹ ಮಾನದಂಡಗಳನ್ನು ರದ್ದುಪಡಿಸಿ ಬೆಳೆ ನಷ್ಟ ವಿಮೆಯನ್ನು ಬಿಡುಗೊಳಿಸಬೇಕು. ಕಳೆದ ಬಾರಿ ಕೆಲವು ಪಂಚಾಯಿತಿಗಳ ರೈತರಿಗೆ ಬೆಳೆ ವಿಮೆ ಪಾವತಿ ಮಾಡಿ, ಉಳಿದ ರೈತರಿಗೆ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದರು.
ಕಳೆದ 15 ವರ್ಷಗಳಿಂದ ರೈತರ ಬೆಳೆಗಳು ಅತಿವೃಷ್ಟಿ, ಅನಾವೃಷ್ಟಿಗೆ ಸಿಲುಕಿ ಹಾನಿಗೊಳಗಾಗಿವೆ. ರೈತರು ಸರ್ಕಾರಿ ಮತ್ತು ಸಹಕಾರಿ ಬ್ಯಾಂಕ್ ಗಳಲ್ಲಿ ಮಾಡಿರುವ ಎಲ್ಲಾ ಸಾಲಗಳನ್ನು ಮನ್ನಾ ಮಾಡಬೇಕು. ಸರ್ಕಾರ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸಿಲು ಮುಂದಾಗಿರುವುದನ್ನು ಕೈಬಿಡಬೇಕು ಎಂದು ಒತ್ತಾಯ ಮಾಡಿದರು.
ತಹಶೀಲ್ದಾರ್ ಎನ್.ರಘುಮೂರ್ತಿ ಮನವಿ ಸ್ವೀಕರಿಸಿ ಮಾತನಾಡಿ ಗ್ರಾಮಲೆಕ್ಕಾಧಿಕಾರಿಗಳ ಸಂಖ್ಯೆ ಕಡಿಮೆ ಇದ್ದು ಒಬ್ಬೊರ ಎರಡು ಮೂರು ಪಿರ್ಕಗಳನ್ನುನೋಡಿಕೊಳ್ಳುತ್ತಿದ್ದಾರೆ ಕೂಡಲೆ ತುರ್ತಾಗಿ ತಂತ್ರAಶಾದಲ್ಲಿ ಬೆಳೆನಷ್ಟದ ವರದಿಯನ್ನು ನೋಂದಾಸುವ ವ್ಯವಸ್ಥೆ ಮಾಡಲಾಗುವುದು ನಿಮ್ಮಮನವಿಯನ್ನು ಜಿಲ್ಲಾಧಿಕಾರಿಗಳಮೂಲಕ ಸರಕಾರಕ್ಕೆ ಕಳಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ತಾಲ್ಲೂಕು ಅಧ್ಯಕ್ಷ ಡಿ.ಚಂದ್ರಶೇಖರ್, ಕಾರ್ಯದರ್ಶಿ ಹನುಮಂತರೆಡ್ಡಿ, ರೈತ ಮುಖಂಡರಾದ ಬಿ.ವಿ.ತಿಪ್ಪೇಸ್ವಾಮಿ, ನವೀನ್, ಎಸ್. ಮಂಜುನಾಥ, ನಾಗರಾಜ್ ಸೇರಿದಂತೆ ಮುಂತಾದವರು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page