ಮಹಿಳೆಯರು ಒಡೆವೆಗಳನ್ನು ಹಾಕಿಕೊಂಡು ಪ್ರದರ್ಶನ ಮಾಡದೆ ಅವುಗಳನ್ನು ಸೆರಗಿನಿಂದ ಮರೆ ಮಾಡಿಕೊಳ್ಳ ಬೇಕು ಪಿ ಐ ದೇಸಾಯಿ .

by | 27/08/23 | ಅಭಿಪ್ರಾಯ

‌‌‌ ಚಳ್ಳಕೆರೆ ಆ.27.ಮಹಿಳೆಯರು ಬೆಲೆ ಬಾಳುವ ಒಡವೆ ಧರಿಸಿ ಒಬ್ಬಂಟಿಯಾಗಿ ಓಡಾಡಬಾರದು, ಸೀರೆ ಸೆರಗು ಮತ್ತು ವೇಲ್‍ನಿಂದ ಕುತ್ತಿಗೆಯನ್ನು ಮುಚ್ಚಿಕೊಳ್ಳಬೇಕು ಎಂದು ಚಳ್ಳಕೆರೆ ಠಾಣೆಯ ಪಿ ಐ ಆರ್ .ಎಫ್ .ದೇಸಾಯಿ ಕಿವಿಮಾತು ಹೇಳಿದರು. ಚಳ್ಳಕೆರೆ ನಗರದ ಪಾವಗಡ ರಸ್ತೆಯ ಬಟ್ಟೆಅಂಡಿಯ ಮಸಲಿಕನ ಚಿನ್ನದ ಸರ ಕಳವು ಸ್ಥಳಕ್ಕೆ ತನಿಖೆ ಮಾಡುವ ಸಂದರ್ಭದಲ್ಲಿ ಅದೇ ಅಂಗಡಿ ಮುಂಭಾಗದಲ್ಲಿ ಹಾದು ಹೋಗುವ ಮಹಿಳೆಯರು ಕೊರಳಲ್ಲಿನ ಒಡವೆಗಳನ್ನು ಕಾಣುವಂತೆ ಹಾಕಿಕೊಂಡಿರುವುದನ್ನು ಕಂಡು ನಿಮ್ಮ ಒಡೆವೆಗಳನ್ನು ಕಾಣದಂತೆ ಸೀರೆಯ ಸೆರಿಗಿನಿಂದ ಮುಚ್ಚಿಕೊಂಡು ಹುಷಾರಾಗಿ ಹೋಗುವಂತೆ ಮಹಿಳೆಯರಿಗೆ ಜಾಗೃತಿ ಮೂಡಿಸಿದರು. ಸರಗಳ್ಳರ ಬಗ್ಗೆ ನಗರದ ಸಾರ್ವಜನಿಕ ಸ್ಥಳ ಪಾರ್ಕ್, ರಸ್ತೆ ಬದಿ ವಾಕಿಂಗ್ ಮಾಡುವಾಗ ಅಕ್ಕಪಕ್ಕದಲ್ಲಿ ಓಡಾಡುವ ಅಪರಿಚಿತರ ಬಗ್ಗೆ ಎಚ್ಚರದಿಂದಿರಿ ನಿಮ್ಮ ಒಡೆವೆಗಳ ಬಗ್ಗೆ ಜಾಗೃತರಾಗಿರುವಂತೆ ಪೋಲಿಸ್ ಇಲಾಖೆ ಅನೇಕ ಬಾರಿ ಜಾಗೃತಿ ಮೂಡಿಸಲಾಗಿದೆ ಆದರೂ ಒಡವೆಗಳನ್ನು ಮೈ ಮೇಲೆ ಕೊರಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಹಾಕಿಕೊಂಡು ಓಡಾಡಿತ್ತಾರೆ ಬಡಾವಣೆಗಳಲ್ಲಿ ಅನುಮಾನಾಸ್ಪದ ವಾಗಿ ಓಡಾಡುವವರ ಬಗ್ಗೆ ನಿಗಾವಹಿಸಿ ಅನುಮಾನ ಬಂದಲ್ಲಿ ಪೋಲಿಸರಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.
ಉದ್ಯಾನ, ದೇವಸ್ಥಾನ ಮತ್ತು ಜನವಸತಿ ಪ್ರದೇಶಗಳಿಗೆ ಪೊಲೀಸರು ಭೇಟಿ ನೀಡಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ.
ಇತ್ತೀಚೆಗೆ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ಕಳ್ಳರು ಒಂಟಿ ಮಹಿಳೆಯರನ್ನು ವಿಳಾಸ ಕೇಳುವ ನೆಪದಲ್ಲಿ ಸರಗಳನ್ನು ಎಗರಸುತ್ತಿದ್ದು. ನಿಮ್ಮ ಮನೆ , ಬಡಾವಣೆಗಳಲ್ಲಿ ಯಾರಾದರೂ ಅಪರಿಚಿತರ ಕಂಡರೆ ಯಾರು ? ಯಾವ ಊರು ? ಏಕೆ ಬಂದಿದ್ದೀರಿ ಎಂದು ಪ್ರಶ್ನಿಸ ಬೇಕು ಅನುಮಾನ ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡ ಬೇಕು.
ಒಟ್ಟ ಮಹಿಳೆಯರು ಒಡೆವೆಗಳನ್ನು ಹಾಕಿಕೊಂಡು ಪ್ರದರ್ಶನ ಮಾಡದೆ ಅವುಗಳನ್ನು ಸೆರಗಿನಿಂದ ಮರೆ ಮಾಡಿಕೊಳ್ಳ ಬೇಕು, ಒಂಟಿ ಮಹಿಳೆಯರು,ಮನೆಯಲ್ಲಿ ಯಾರು ಇಲ್ಲದೆಇರುವುದನ್ನು ಗಮನಿಸಿ ಕಳ್ಳತ ಮಾಡುತ್ತಿದ್ದಾರೆ.
ವಿಳಾಸ ಕೇಳುವ ನೆಪದಲ್ಲಿ ಕೊರಳಲ್ಲಿರುವ ಮಾಂಗಲ್ಯ, ಚಿನ್ನದ ಸರ ಕಸಿದುಕೊಂಡು ಹೋಗುವಾಗ ಎಚ್ಚರದಿಂದಿರಬೇಕು ಬೆಲೆ ಬಾಳುವ ಒಡೆವೆ, ಹೆಚ್ಚು ಹಣವನ್ನು ಮನೆಯಲ್ಲಿ ಸಂಗ್ರಹಿಸದೆ ಬ್ಯಾಂಕ್ ಲಾಕರ್‌ನಲ್ಲಿಡ ಬೇಕು ಮನೆಗಳು ಸುತ್ತ ಸಿ.ಸಿ. ಕ್ಯಾಮರ ಅಳವಡಿಸಿಕೊಳ್ಳ ಬೇಕು, ಮಹಿಳೆರು ಒಡವೆಗಳನ್ನು ಪ್ರದರ್ಶನ ಮಾಡದೆ ಮರೆ ಮಾಡಿಕೊಳ್ಳಬೇಕು, ಸರಗಳ್ಳರ ಬಗ್ಗೆ ಜನರು ಜಾಗೃತರಾಗ ಬೇಕು .
ಬಡವಾಣೆಯಲ್ಲಿ ದಾನಿಗಳ ಹಾಗೂ ಸಂಘ ಸಂಸ್ಥೆಯವರು ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರ ಅಳವಡಿಸಿಕೊಂಡರೆ ಕಳ್ಳತನಪತ್ತೆ ಮಾಡಲು ಸಾಧ್ಯವಾಗುತ್ತದೆ ಎಂದು ಪಿಎಸ್‌ಐ ಸತೀಶ್ ನಾಯ್ಕ ಸಾರ್ವಜನಿಕರಲ್ಲಿ ಅರಿವು ಮುಡಿಸಿದರು.
ನಾವು ಮಫ್ತಿಯಲ್ಲಿರುವ ಪೊಲೀಸರು ಎಂದು ನಂಬಿಸಿ ಒಡವೆಗಳನ್ನು ತೆಗೆಸಿ ಮೋಸ ಮಾಡುವವರ ಬಗ್ಗೆ ಮತ್ತು ರಸ್ತೆಯಲ್ಲಿ ನಡೆದು ಹೋಗುವಾಗ ಎದುರು ಮತ್ತು ಹಿಂದಿನಿಂದ ದ್ವಿಚಕ್ರ ವಾಹನಗಳಲ್ಲಿ ಬಂದು ಚಿನ್ನದ ಸರ, ಮಾಂಗಲ್ಯ ಅಪಹರಣ ಮಾಡುವವರ ಬಗ್ಗೆ ಎಚ್ಚರದಿಂದಿರಿ ಎಂದು ತಿಳಿಸಿದರು.
ಸರಗಳ್ಳತಗಳ ಕೃತ್ಯ ನಡೆದ ಅಂಗಡಿ ಸ್ಥಳಗಳಿಗೆ ಭೇಟಿ ನೀಡಿ ಜನತಲ್ಲಿ ಜಾಗೃತಿ ಮೂಡಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page