ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

by | 26/07/24 | ಸುದ್ದಿ


ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌ ರಾಜ್‌ಕುಮಾರ್‌ ದರ್ಶನ್‌ನನ್ನು ಭೇಟಿಯಾಗಿದ್ದು, ಇದೀಗ ಕೊಲೆಯಾದ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ್ದಾರೆ.ಈ ವೇಳೆ ಮೃತನ ಕುಟುಂಬಕ್ಕ ವೈಯಕ್ತಿಕ ಧನಸಹಾಯ ಮಾಡಿ ಸಾಂತ್ವನ ಹೇಳಿದ್ದಾರೆ.ಈ ವೇಳೆ ಮೃತನ ಕುಟುಂಬಕ್ಕ ವೈಯಕ್ತಿಕ ಧನಸಹಾಯ ಮಾಡಿ ಸಾಂತ್ವನ ಹೇಳಿದ್ದಾರೆ.

ನಟ ದರ್ಶನ್ ಮತ್ತು ಗ್ಯಾಂಗ್‌ನಿಂದ ಕೊಲೆಯಾಗಿರುವ ಮೃತ ರೇಣುಕಾ ಸ್ವಾಮಿ ಮನೆಗೆ ಹಿರಿಯ ನಟ ವಿನೋದ್ ರಾಜ್ ಭೇಟಿ ನೀಡಿದ್ದು, ಮೃತರ ಪೋಷಕರು ಹಾಗೂ ಪತ್ನಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಅಲ್ಲದೆ, _1 ಲಕ್ಷ ರೂ ವೈಯಕ್ತಿಕ ಧನಸಹಾಯ ಮಾಡಿದರು.

ಇನ್ನು ಇತ್ತೀಚಿಗಷ್ಟೇ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ ಅವರನ್ನು ವಿನೋದ್ ರಾಜ್ ಭೇಟಿ ಮಾಡಿದ್ದರು. ಮೊದಲು ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಎಂದು ನೆಟ್ಟಿಗರು ಆಗ್ರಹಿಸಿದ್ದರು. ಅದರಂತೆಯೇ ಇಂದು ನಟ ವಿನೋದ್ ರಾಜ್ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಮೃತ ರೇಣುಕಾಸ್ವಾಮಿ ಅವರು ಮನೆಗೆ ಆಧಾರವಾಗಿದ್ದರು. ಆದರೆ ಇಂದು ಅವರೇ ಕುಟುಂಬದಲ್ಲಿ ಇಲ್ಲ. ವಯಸ್ಸಾದ ಅಜ್ಜಿ ಇದಾರೆ, ಈಗ ಅವರನ್ನು ನೋಡಿಕೊಳ್ಳುವವರು ಯಾರೂ ಇಲ್ಲ. ಜೀವನ ಇಡೀ ಸಂಪಾದನೆ ಹೆಸರು ಮಾಡೋದು ಅಲ್ಲ. ಜೀವನವಿಡೀ ನಾವು ಒಳ್ಳೆಯದನ್ನೇ ಮಾಡಬೇಕು. ತಂದೆ ರೂಪದಲ್ಲಿ ದೇವರು ಮನುಷ್ಯ ಜೀವಿಯನ್ನು ಸೃಷ್ಟಿ ಮಾಡಿದ್ದಾರೆ. ಕಲಾವಿದರಾದ ನಾವು ಸರಿಯಾಗಿ ನಡೆದುಕೊಳ್ಳಬೇಕು.

ನಾವು ತಪ್ಪು ಮಾಡಿದರೂ, ಅದು ಸರಿನಾ ಅನ್ನೋ ಭಾವನೆ ಜನರಿಗೆ ಬರುತ್ತದೆ,” ಎಂದರು.

ಕಲಾವಿದರಾದ ನಾವು ಮಾತನಾಡಿದ್ರೆ ಅದು ದೊಡ್ಡದಾಗಿ ಕಾಣುತ್ತದೆ. ಕಲಾವಿದರಾದ ನಾವು ಜನಸಮಾನ್ಯರಂತೆಯೇ ಇರುತ್ತೇವೆ. ಆದರೆ ನಮಗೆ ಗೌರವದ ಜೊತೆ ಜವಾಬ್ದಾರಿ ಕೊಟ್ಟು ಬಿಟ್ಟಿರುತ್ತಾರೆ. ನಾವು ಸಮಾಜದಲ್ಲಿ‌ ಬಹಳ ಎಚ್ಚರಿಕೆಯಿಂದ ಬಾಳಬೇಕು. ಮಾಧ್ಯಮದವರು ಮಿತ್ರರೇ ಹೊರತು ಶತ್ರುಗಳಲ್ಲ. ಅವರು ಕೆಲವು ಬಾರಿ ನಮಗೆ ತಿದ್ದಿ ಬುದ್ದಿ ಹೇಳುತ್ತಾರೆ. ನಾವು ಅವರೊಂದಿದೆ ತುಂಬಾ ಒಳ್ಳೆಯ ರೀತಿ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಇಂತಹ ಅಚಾತುರ್ಯ ನಡೆಯುತ್ತದೆ ಎಂದರು.

ಇನ್ನು ಜೈಲಲ್ಲಿ ದರ್ಶನ್ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಜೈಲಲ್ಲಿ ನನ್ನ ಜೊತೆ 5 ಜನ ದರ್ಶನ್‌ ಅವರನ್ನು ಭೇಟಿ ಮಾಡಿದರು. ಈ ವೇಳೆ ನಮ್ಮನ್ನು ನೋಡಿ ದರ್ಶನ್ ಭಾವುಕರಾದರು. ಈ ವೇಳೆ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಅಂತಿದಾರೆ. ಅವರು ಹೇಳಿದ್ದನ್ನು ಬಿಟ್ಟು ನಾನು ಬೇರೇನು ಹೇಳಲು ಸಾಧ್ಯ ಎಂದರು.

ದರ್ಶನ್ ಭೇಟಿ ಬಳಿಕ ರೇಣುಕಾಸ್ವಾಮಿ ಮನೆ ಭೇಟಿ ಕುರಿತು ಮಾತನಾಡಿದ ಅವರು, ದರ್ಶನ್ ಭೇಟಿಗೆ ಮೊದಲೇ ಬರಬೇಕು ಅಂತಿದ್ದೆ. ಆದರೆ ನನಗೆ 7ನೇ ತಾರೀಕು ಮೇಜರ್ ಸರ್ಜರಿ ಆಯ್ತು. ಈಗ ನಾನು ಸುಧಾರಿಸಿಕೊಂಡ ಬಳಿಕ ಭೇಟಿ ಮಾಡಿದೆ ಎಂದರು.

ನಾವು ಸಂಧಾನಕ್ಕೆ ಮುಂದಾಗಿಲ್ಲ: ನಟ ದರ್ಶನ್ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದರೆ ನಾವು ಸ್ವಾಗತಿಸುತ್ತೇವೆ ಎಂಬ ಸುದ್ದಿಯಾದ ಹಿನ್ನೆಲೆ ನಾವು ಯಾವ ಸಂದಾನಕ್ಕೆ ಮುಂದಾಗಿಲ್ಲ. ನನ್ನ ಮಗನ ಸಾವಿಗೆ ನ್ಯಾಯ ಸಿಗಬೇಕು ಎಂದು ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಕಣ್ಣೀರು ಹಾಕಿದರು.

ವಿನೋದ್ ರಾಜ್ ಮುಂದೆ ಕೇಣುಕಾಸ್ವಾಮಿ ತಂದೆ ಕಣ್ಣೀರು ಇಟ್ಟರು. ಅವನು ನರಳಿದ್ದ ರೀತಿ ಕೇಳಿದ್ರೆ ನಮ್ಮ ಕರುಳು ಕಿತ್ತು ಬರುತ್ತಿದೆ. ನಾವು ಬಹಳ ನೊಂದಿದ್ದೇವೆ, ನನ್ನ ಮನೆತನ ನಾಶವಾಗಿದೆ. ನನ್ನ ಮಗ ಹೋದಾಗಿಂದ ತುಂಬಾ ನೋವಿನಲ್ಲಿದೆ. ಸರ್ಕಾರಕ್ಕೆ ವಿನಂತಿ ಮಾಡುತ್ತೇವೆ. ಸೊಸೆಗೆ ಸರ್ಕಾರಿ ಕೆಲಸ ಕೊಡಿ, ನನ್ನ ಮಗನಿಗೆ ನ್ಯಾಯಸಿಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ರೇಣುಕಾಸ್ವಾಮಿ ತಂದೆ ಕಾಶೀನಾಥ ಅವರು ಅಳಲು ತೋಡಿಕೊಂಡಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page