ಮೇವಿನ ಕೊರತೆಯಿಂದ ಸಾವಿನ ಮನೆ ಕದ ತಟ್ಟುವ ಎಮ್ಮೆಗಳಿಗೆ ಮೇವು ನೀಡಿ ಅನ್ನದಾತರ ನೆರವಿಗೆ ದಾವಿಸಿದ ಸಂತ ಶ್ರೀ ಜಪಾನಂದಸ್ವಾಮೀಜಿ.

by | 05/05/24 | ಮಾತೆಂದರೆ ಇದು


ಪಾವಗಡ ಮೇ 5 ಬೀಕರ ಬರದ ಛಾಯೆ, ಹಾಗೂ ಬಿಸಿಲಿನ ತಾಪಮಾನದಿಂದ ಜಾನುವಾರುಗಳಿಗೆ ಮೇವು ನೀರಿಲ್ಲದೆ ಸಾವಿನ ಮನೆ ಸೇರುತ್ತಿದ್ದು ರೈತರನ ಹೈನುಗಾರಿಕೆ ಮೇಲು ಕರಿನೆರಳಿನ ಛಾಯೆ ಬಿದ್ದು ಇಲ್ಲೊಬ್ಬ ಸಂತ ಜಾನುವಾರುಗಳ ನೆರವು ನೀಡಲು ಮುಂದಾಗಿದ್ದಾರೆ.
ಹೌದು ಇದು ಪಾವಗಡ ಪಾವಗಡ ಹಾಗೂ ಆಂಧ್ರಪ್ರದೇಶದ ಗಡಿಭಾಗದ ಭಕ್ತರಪಲ್ಲಿ ಗ್ರಾಮದಲ್ಲಿ ಸ್ವಲ್ಪ ನೀರು ಹಾಗೂ ಮೇವು ದೊರೆಯುತ್ತದೆ ಎಂಬ ಆಸೆಯಿಂದ ಅಲ್ಲಿಗೆ ತೆರಳಿದಾಗ ನಡೆದ ಘಟನೆ ಯೇ ಬೇರೆದಾಗಿತ್ತು ಮೆವಿಲ್ಲದೆ ಅಪೌಷ್ಠಿಕತೆಗೆ ತುತ್ತಾಗಿ ಸಂಪೂರ್ಣ ನಿತ್ರಾಣಗೊಂಡು ಶಂಕರು ಗುಳಿ ತಳಿಯ 5 ಎಮ್ಮೆಗಳು ಸಾವಿನ ಮನೆ ಸೇರಿದ್ದು ಕಂಡು ಸಂತ ಶ್ರೀ ಜಪಾನಂದಸ್ವಾಮೀಗಳು ಕಣ್ಣೀರು ಹರಿಸಿ ರೈತರ ಎಮ್ಮೆಗಳಿಗೆ ಮೇವು ಒದಗಿಸುವ ಮೂಲಕ ಮೂಕ ಪ್ರಾಣಿಗಳ ಹಸಿವು ನೀಗಿಸಿ ರೈತರ ನೆರವಿಗೆ ಮುಂದಾಗಿದ್ದಾರೆ.


ಬೀಕರ ಬರಗಾಲ ಹಾಗೂ ಬಿಸಿಲಿನ ತಾಪದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜನ ಜಾನುವಾರುಗಳು ಬಿಸಿಲಿನ ತಾಪಕ್ಕೆ ನೀರು ಮೇವಿಲ್ಲದೆ ಸಾಯುವ ಸ್ಥಿತಿ ತಲುಪಿದರೂ ಸಹ ಸರಕಾರಗಳು ಮಾತ್ರ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದು ಜನ ಜಾನುವಾರುಗಳ ರಕ್ಷಣೆಗೆ ಮುಂದಾಗುತ್ತಿಲ್ಲ ಚುನಾವಣೆ ಹೆಸರಲ್ಲಿ ಕೋಟಿ ಕೋಟಿ ಹಣ ಖರ್ಚು ಮಾಡಿದರೂ ಸಹ ಕುಡಿಯುವ ನೀರು ಮೇವು ಒದಗಿಸಲು ಮುಂದಾಗುತ್ತಿಲ್ಲ ಎಂದು ಸರಕಾರಗಳ ವಿರುದ್ದ ಕಿಡಿ ಕಾರಿದ್ದಾರೆ.
ಜಪಾನಂದ ಸ್ವಾಮಿಗಳು ಶಂಕರಗಲ್ಲು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಾಡು ಪ್ರಾಣಿಗಳಿಗೆ ಆಹಾರ ನೀರು ಇಲ್ಲದೆ ಇರುವ ಕಾರಣ ರೈತರ ಸಾಕು ಪ್ರಾಣಿಗಳ ಮೇಲೆ ಎರಗಿ ಗಾಯಗೊಳಿಸಿರುವುದು ಕಂಡು ಬಂದರೂ ಸಹ ಸಂಬಂಧ ಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ರೈತರ ನೆರವಿಗೆ ಬಾರದೆ ಇರುವುದು ವಿಪರ್ಯಾಸದ ಸಂಗತಿಯಾಗಿದೆ.
42-43 ° ಬಿಸಿಲಿನಲ್ಲಿ ಬದುಕುತ್ತಿರುವ ಈ ಬಡಪಾಯಿಗಳಿಗೆ ಪೂಜ್ಯ ಸ್ವಾಮಿ ಜಪಾನಂದರೆ ನಡೆದಾಡುವ ದೇವರು ಎಂದು ಈ ಭಾಗದ ನೂರಾರು ಗ್ರಾಮಸ್ತರ ನಂಬಿಕೆ. ಅದೇನೇರಲಿ
ಅತ್ಯಂತ ದುಬಾರಿ ಹಾಗೂ ವಿಶೇಷವಾದ “ಸುರುಟಿ” ತಳಿಯಾದ ಸುಮಾರು 50 ಎಮ್ಮೆಗಳಿಗೆ ಮರು ಜನ್ಮನೀಡಿದ ಪೂಜ್ಯ ಸ್ವಾಮಿ ಜಪಾನಂದಜಿ ಮಹಾರಾಜರು.


ಕಳೆದ ಒಂದು ವಾರದ ಹಿಂದೆ ವೃದ್ಧರಾದ ಶ್ರೀ ರಾಮಪ್ಪ ಹಾಗೂ ಶ್ರೀ ರಾಮಚಂದ್ರಪ್ಪ ಎನ್ನುವ ಬಡ ಹೈನುಗಾರರು ಸ್ವಾಮಿಜೀ ರವರಬಳಿಗೆ ಬಂದು ತಮ್ಮ ದುಃಖ ವನ್ನು ತೂಡಿಕೊಂಡರು. ಅತ್ಯಂತ ದುಬಾರಿ ಹಾಗೂ ವಿಶೇಷ ತಳಿ ಯಾದ “ಸುರುಟಿ “ಎಮ್ಮೆಗಳ ದಾರುಣ ಸ್ಥಿತಿ ಹಾಗೂ ಸುಮಾರು ಎಮ್ಮೆಗಳು ಆಹಾರವಿಲ್ಲದೆ ಪ್ರಾಣಬಿಟ್ಟಿ ರುವುದನ್ನು ವಿವರಿಸಿ ತಮಗೆ ಸಹಾಯಮಾಡದಿದ್ದರೆ ಬದುಕುಳಿದ ಎಮ್ಮಗಳು ಸಾವನನ್ನಪ್ಪುತ್ತಿದ್ದವು ಎಂದು ಕಣ್ಣೀರಾಕಿದ್ದಾರೆ .
ತಕ್ಷಣ ರೈತರ ಮನವಿಗೆ ಸ್ಪಂದಿಸಿದ ಶ್ರೀ ಜಪಾನಂದಸ್ವಾಮೀಜಿಗಲು ರೈತರ ಎಮ್ಮೆಗಳಿಗೆ ಮೇವು ನೀಡಿ ರೈತರ ಬಧುಕಿಗೆ ಆಸರೆಯಾಗಿದ್ದಾರೆ .

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page