ರಸಗೊಬ್ಬರ ಮಾರಾಟರನ ಸಲಹೆ ಕೇಳಿ ಔಷಧಿ ಸಿಂಪರಣೆ ಬೆಳೆ ನಷ್ಟ- ರೈತರನಿಗೆ ಜಿಎಸ್ ಟಿ ಬಿಲ್ ಬದಲು ಎಸ್ಟಿಮೇಟ್ ಬಿಲ್ ….?

by | 25/07/24 | ಜನಧ್ವನಿ

ಚಳ್ಳಕೆರೆ ಜನಧ್ವನಿ ವಾರ್ತೆ ಜು.25 ಟೊಮ್ಯೊಟೆ ಹಣ್ಣಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ. ಜಮೀನಲ್ಲಿ ಬಂಪರ್ ಬೆಳೆ ನಿರೀಕ್ಷೆಯಲ್ಲಿದ್ದ ರೈತನಿಗೆ ಬರಸಿಡಿಲು ಬಡಿದಂತಾಗಿದೆ
ಹೌದು ಇದು ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ಎನ್.ಮಹದೇವಪುರ ಗ್ರಾಮದ ರೈತ ಮಹಮದ್ ಜಾಫರ್ ತಮ್ಮ ಎರಡು ಎಕರೆ ಜಮೀನಿನಲ್ಲಿ 12 ಸಾವಿರ ಟೊಮೋಟ ಸಸಿಗಳನ್ನು ನಾಟಿ ಮಾಡಿದ್ದು ಬೆಳೆ ಚನ್ನಾಗಿ ಬಂದಿತ್ತು ಟೊಮೆಟೋ ಸಸಿ ಅತಿ ಬೇಗ ಬೆಳವಣಿಗೆಗಾಗಿ ಚಳ್ಳಕೆರೆ ನಗರದ ಶ್ರೀ ಕರಿ ಬಸವೇಶ್ವರ ಫರ್ಟಿಲೈಜರ್ ಮಾಲಕರು ರಂಗೋಲಿ ಔಷಧಿಯನ್ನು ಸಿಂಪರಣೆ ಮಾಡು ಸಸಿ ಬೇಗನೆ ಬೆಳೆಯುತ್ತದೆ ಎಂದು ಸಲಹೆ ನೀಡಿದ ಮೇರೆಗೆ ಜು.3 ರಂದು ಮರುದಿನ ಟೊಮ್ಯೊಟೆ ಬೆಳೆಗೆ ಔಷಧಿ ಸಿಂಪರಣೆ ಮಾಡಿದ್ದಾರೆ.
ಔಷಧಿ ಸಿಂಪರಣೆ ಮಾಡಿದ ಎರಡು ದಿನಗಳ ನಂತರ ನೋಡಿದರೆ ಟೊಮ್ಯಾಟೊ ಬೆಳೆ ಸುಟ್ಟಂತಾಗಿ ಶೇಕಡ 90 ಬೆಳೆ ನಾಶವಾಗಿರುವುದು ಕಂಡು ಬಂದಿದೆ. ಅಂಗಡಿ ಮಾಲಿಕರನ್ನು ವಿಚಾರಿಸಿದರೆ ನಿರ್ಲಕ್ಷದ ಉತ್ತರ ನೀಡುತ್ತಾರೆ.


ಟೊಮ್ಯಾಟೊ ಬೆಲೆ ಮಾರುಕಟ್ಟೆಯಲ್ಲಿ ಬಂಪರ್ ಬೆಲೆ ಇದ್ದು ಅತಿ ಹೆಚ್ಚು ಇಳುವರಿ ಹಾಗೂ ಕೈ ತುಂಬಾ ಲಾಭದ ನೀರೀಕ್ಷೆಯಲ್ಲಿದ್ದ ರೈತನಿಗೆ ರಸಾಯನಿಕ ಔಷಧಿ ಮಾರಾಟಗಾರಲ ಸಲಹೆ ಕೇಳಿ ಔಷಧಿ ಸಿಂಪರಣೆ ಮಾಡಿ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದು. ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಔಷಧಿ ವಿತರಕನ ಮೇಲೆ ಸೂಕ್ತ ಕ್ರಮವಹಿಸಿ ಬೆಳೆ ನಷ್ಟ ಪರಿಹಾರಕೊಡಿಸುವಂತೆ ರೈತ ತೋಟಗಾರಿಕೆ ಇಲಾಖೆಗೆ ದೂರು ನೀಡಿದ್ದಾರೆ.
ಸರಗೊಬ್ಬರ ಕಾಯ್ದೆ ಉಲ್ಲಂಘಟನೆ.


ರೈತ ಖರೀದಿಸಿ ಔಷಧಿಗೆ ಜಿಎಸ್ ಟಿ ಬಿಲ್ ಬದಲು ಎಸ್ಟಿಮೇಟ್ ಬಿಲ್ ನೀಡಿರುವುದು
ಕಳಪೆ ಗೊಬ್ಬರ, ಬಿತ್ತನೆ ಬೀಜ ಹಾಗೂ ರಾಸಾಯನಿಕ ಔಷಧಿ ನಕಲಿ , ಕಳಪೆ ಮಾರಾಟ ತಡೆಯಲು ಕಡ್ಡಾಯವಾಗಿ ರೈತರಿಗೆ ಖರೀದಿಸಿದ ಬಿಲ್ ನೀಡಬೇಕು, ವಿತರಕರ ಸಹಿ ಹಾಕಬೇಕು ಆಧಾರ್ ಆಧಾರಿತ ಪಿಒಎಸ್ ಯಂತ್ರಗಳ ಮೂಲಕ ಕಡ್ಡಾಯವಾಗಿ ಹೆಬ್ಬೆಟ್ಟು ಪಡೆದು, ಬಿಲ್ ನೀಡಬೇಕು ಎಂಬ ನಿಯವಿದ್ದರೂ ಸಹ ರೈತರು ಖರೀದಿಸಿ ಗೊಬ್ಬರ ಹಾಗೂ ಔಷಧಿ ಖರೀದಿ ಮಾಡಿದ ಜಿಎಸ್ ಟಿ ಬಿಲ್ ನೀಡುವ ಬಲದು ಎಸ್ಟಿಮೇಟ್ ಬಿಲ್ ನೀಡಿ ಕೈತೊಳೆದುಕೊಳ್ಳುತ್ತಾರೆ.
ರೈತರು ಖರೀದಿಸಿ ಗೊಬ್ಬರ ಹಾಗೂ ಔಷಧಿಯಲ್ಲಿ ಲೋಪ ಕಾಣದೆ ಇದ್ದರೆ ಯಾವುದೇ ಸಮಸ್ಯೆ ಬರುವುದಿಲ್ಲ ಒಂದು ವೇಳೆ ಬಿತ್ತನೆ ಬೀಜ , ಗೊಬ್ಬರ ಔಷಧಿ ಸಿಂಪರಣೆ ಮಾಡಿದಾಗ ಬೆಳೆ ನಷ್ಟವಾದಗ ಮಾತ್ರ ರಯತರಿಗೆ ಸಮಸ್ಯೆಯಾಗುತ್ತದೆ ಅದೇ ರೀತಿ ನಾಯಕನಹಟ್ಟಿ ಹೋಬಳಿಯ ಎನ್.ಮಹದೇವಪುರ ಗ್ರಾಮದ ರೈತ ಮಹಮದ್ ಜಾಪರ ಬಹಳ ವರ್ಷಗಳಿಂದ ವ್ಯಾಪಾರ ಮಾಡುತ್ತಿರುವ ಅಂಗಡಿಯವರೇ ಜಿಎಸ್ ಟಿ ಬಿಲ್ ನೀಡದೆ ಎಸ್ಟಿಮೆಟ್ ಬಿಲ್ ನೀಡಿದ್ದು ಔಷಧಿ ಸಿಂಪರಣೆ ಮಾಡಿ ಲಕ್ಷಾಂತರ ರೂ ಮೌಲ್ಯದ ಬೆಳೆ ಕಳೆದು ಕೊಂಡು ತೋಟಗಾರಿಗೆ ಇಲಾಖೆಗೆ ದೂರು ಕೊಡಲು ಹೋದಾಗ ಜಿಎಸ್ ಟಿ ಬಿಲ್ ನೀಡದೆ ಇರುವುದು ಬೆಳೆಕಿಗೆ ಬಂದಿದೆ.
ರಸಗೊಬ್ಬರ ಮತ್ತು ಬಿತ್ತನೆ ಬೀಜ ಹಾಗೂ ಕೀಟನಾಶಕ ಮಾರಾಟಗಾರ ನಿಯಮ ಉಲ್ಲಂಘನೆ ಕಂಡು ಬಂದಿದ್ದು ಈಗಾ ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಜರುಗಿಸುವರು ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page