ಶಿಕ್ಷಣದ ಬಲವರ್ಧನೆಯಲ್ಲಿ ಮಹಿಳೆಯರ ಪ್ರಗತಿಪರ ಬದಲಾವಣೆ ಕಂಡುಕೊಳ್ಳಬೇಕಿದೆ ಎಂದು ಹಿರಿಯ ವಕೀಲ ಬಿ.ಕೆ. ರಹಮತ್‌ವುಲ್ಲಾ.

by | 17/03/24 | ಸಾಂಸ್ಕೃತಿಕ


ಚಿತ್ರದುರ್ಗ ಮಾ.17
ಶಿಕ್ಷಣದ ಬಲವರ್ಧನೆಯಲ್ಲಿ ಮಹಿಳೆಯರ ಪ್ರಗತಿಪರ ಬದಲಾವಣೆ ಕಂಡುಕೊಳ್ಳಬೇಕಿದೆ ಎಂದು ಹಿರಿಯ ವಕೀಲ ಬಿ.ಕೆ. ರಹಮತ್‌ವುಲ್ಲಾ ಹೇಳಿದರು.
ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆ, ಗಾನಯೋಗಿ ಸಂಗೀತ ಬಳಗ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಮತ್ತು ತಿಂಗಳ ವಿಶೇಷ ವ್ಯಕ್ತಿ ಪರಿಚಯ, ಕವಿಗೋಷ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕುಟುಂಬ ನಿರ್ವಹಣೆ ಜಾಣ್ಮೆ ಇರುವ ಮಹಿಳೆಯರು ಸಾಕ್ಷರತರಾಗಿ ಬೆಳೆಯಬೇಕಿದೆ. ಉದ್ಯೋಗಸ್ಥರಾಗುವ ಮೂಲಕ ಸಮಾನ ಅವಕಾಶಗಳಲ್ಲಿ ಸ್ವಾವಲಂಬಿಗಳಾಗಿ ಭದ್ರತೆ ಕಂಡುಕೊಳ್ಳಬೇಕು. ಆಸ್ತಿಯಲ್ಲಿ ಸಮಾನ ಹಕ್ಕುದಾರರಾಗಿರುವ ಮಹಿಳೆಯರು ತಮ್ಮ ಇರುವ ಕಾನೂನಿನ ನಿಯಮಗಳನ್ನು ಸದುಪಯೋಗ ಮಾಡಿಕೊಳ್ಳುವಲ್ಲಿ ಜಾಗೃತರಾಗಬೇಕಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕವಿ ಕರ‍್ಲಕುಂಟೆ ತಿಪ್ಪೇಸ್ವಾಮಿ, ಮಹಿಳೆಯರ ಪ್ರಗತಿಪರ ಬೆಳವಣ ಗೆಗೆ ಕುಟುಂಬದ ಕಟ್ಟುಪಾಡುಗಳಲ್ಲಿ ಸಡಿಲತೆ ಸಿಗಬೇಕು. ಬಸವಣ್ಣನವರ ಲಿಂಗಬೇಧ ತಾರತಮ್ಯ ಚಳುವಳಿ ಮತ್ತು ಅಂಬೇಡ್ಕರ್ ಅವರ ಸಮಸಮಾಜ ನಿರ್ಮಾಣ ನನಸಾಗಬೇಕು. ಶಿಕ್ಷಣ, ಸಂಘಟನೆ ಮತ್ತು ಹೋರಾಟದ ನೆಲೆಯಲ್ಲಿ ಮಹಿಳಾ ಶಕ್ತಿ ಬೆಳೆಯಬೇಕು. ಸಂವಿಧಾನಬದ್ದ ಅವಕಾಶಗಳಲ್ಲಿ ಸಮಾನತೆ ಕಂಡುಕೊಳ್ಳುತ್ತಿರುವ ಮಹಿಳೆ ಸಂಘಟಿತವಾಗಬೇಕು. ರಾಜಕೀಯವಾಗಿ ಜಾರಿಯಾಗಿರುವ ಶೇ.೩೩ರಷ್ಟು ಮೀಸಲಾತಿ ಬಲಿಷ್ಠ ಕುಟುಂಬದ ಮಹಿಳೆಯರಿಗೆ ಸೀಮಿತವಾಗದಂತೆ ಜಾಗೃತವಹಿಸಬೇಕು. ಪುರುಷ ಪ್ರಧಾನ ಸಮಾಜದಲ್ಲಿ ಪ್ರಶ್ನೆ ಮಾಡುವ ಜಾಗೃತಿಯಲ್ಲಿ ತನ್ನ ಅಸ್ತಿತ್ವ ಕಾಪಾಡಿಕೊಳ್ಳಬೇಕು. ದೇಶದಲ್ಲಿ ಸಮರ್ಥವಾಗಿ ಆಡಳಿತ ಮಾಡಿದ ಇಂದಿರಾ ಗಾಂಧಿ, ರಾಷ್ಟçಪತಿ ಸ್ಥಾನ ಪಡೆದ ದ್ರೌಪದಿ ಮುರ್ಮ, ನಿರ್ಮಲಾ ಸೀತಾರಾಮನ್ ಸಾಧಕಿಯರ ಬದುಕಿನ ಅನುಕರಣೆ ಮಹಿಳೆಯರು ರೂಢಿಸಿಕೊಳ್ಳಬೇಕಿದೆ ಎಂದು ಹೇಳಿದರು.


ಉಪನ್ಯಾಸ ನೀಡಿದ ಕವಿಯತ್ರಿ ಶಬ್ರಿನಾ ಮಹಮ್ಮದ್ ಅಲಿ, ಮಹಿಳೆಯ ಪ್ರಗತಿಯಲ್ಲಿ ಸಮಾಜದ ಪ್ರಗತಿ ಕಾಣಬಹುದು ಎಂದಿರುವ ಅಂಬೇಡ್ಕರ್ ಅವರ ಆಶಯದಂತೆ ಮಹಿಳೆ ಜಾಗೃತವಾಗಬೇಕು. ಎಳೆ ಮಗುವಿನ ಸುಧಾರಣೆ ಮತ್ತು ಅಕ್ಷರ ತಿಳಿಸುವ ಹೃದಯವಂತಿಕೆ ಇರುವ ಮಹಿಳೆ ಅಂಗನವಾಡಿಯಲ್ಲಿ ಶಿಕ್ಷಕಿ ಸೇವೆ ಮಾಡುತ್ತಾಳೆ. ತೊಟ್ಟಿಲು ತೂಗುವ ಕೈ ಜಗತ್ತನ್ನು ಆಳಬಲ್ಲಳು ಎನ್ನುವುದಕ್ಕೆ ಇತಿಹಾಸದಲ್ಲಿ ಮಹಿಳೆಯ ಸಾಧನೆ ಕಾಣುತ್ತೇವೆ. ಸ್ವಯಂಪ್ರೇರಿತ ಶಕ್ತಿಯಲ್ಲಿ ತಮ್ಮ ಮೇಲಿನ ಹಲ್ಲೆ, ದೌರ್ಜನ್ಯ, ದಬ್ಬಾಳಿಕೆ ರಕ್ಷಣೆ ಮಾಡಿಕೊಳ್ಳುವ ರೀತಿಯಲ್ಲಿ ಮಹಿಳೆ ಬೆಳೆಯಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅನಾಥಾಶ್ರಮ ಸ್ಥಾಪನೆ ಮಾಡಿ ಸಮಾಜ ಸೇವೆ ಮಾಡುತ್ತಿರುವ ನಿವೃತ್ತ ಶಿಕ್ಷಕಿ ಎಸ್. ಮಂಜುಳ, ಚಿನ್ಮೂಲಾದ್ರಿ ಸಂಸ್ಥಾಪಕಿ ಆರ್. ದಯಾಪುತ್ತೂರ್ಕರ್ ಅವರನ್ನು ಅಭಿನಂದಿಸಲಾಯಿತು. ವೇದಿಕೆ ಅಧ್ಯಕ್ಷ ಡಾ.ಎಸ್.ಎಚ್. ಶಫೀವುಲ್ಲಾ, ಕೆ.ಟಿ. ಶಾಂತಮ್ಮ, ಸುಮಾರಾಜಶೇಖರ್, ಸೌಮ್ಯಪುತ್ರನ್ ಮತ್ತಿತರರು ಇದ್ದರು.


ಕವಿಗೋಷ್ಟಿಯಲ್ಲಿ ಮುರುಳಿ, ಸುಮರಾಜಶೇಖರ್, ಶೋಭಾ ಮಲ್ಲಿಕಾರ್ಜುನ್, ಕೆ.ಎಸ್. ತಿಪ್ಪಮ್ಮ, ಮಂಜಮ್ಮ, ಡಿ.ಎನ್. ಅನಿತಾ, ರಾಜೇಶ್ವರಿ, ಮೀರಾನಾಡಿಗ್, ಮೀನಾಕ್ಷಿ, ಉಷಾರಾಣ , ಸುಜಾತ, ನಿರ್ಮಲಾ, ಶಿವರುದ್ರಪ್ಪ, ತ್ರಿವೇಣ , ಅಶ್ವಿನಿ, ಜಯಶೀಲಾ, ನಾಗಲಾಂಭಿಕಾ, ಸತ್ಯಪ್ರಭಾ, ಜಿ.ಯು. ಹೇಮಲತಾ, ಕೆ.ಎಚ್. ಮಮತಾ, ಜಯಪ್ರಕಾಶ್, ಎಚ್. ನಾಗೇಂದ್ರಪ್ಪ, ಎಂ.ಜೆ. ಕೋಕಿಲಾ, ಅಶ್ವಿನಿ, ಗೀತಾಸಿಂಗ್, ಜ್ಯೋತಿ ಕವಿತಾ ವಾಚನ ಮಾಡಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page