ಶೇಂಗಾ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ತಂತ್ರಜ್ಞಾನಗಳ ಕುರಿತು ರೈತರಿಗೆ ತರಬೇತಿ ಏರುಮಡಿ ಪದ್ದತಿಯಲ್ಲಿ ಶೇಂಗಾ ಬೆಳೆ: ಟ್ರ್ಯಾಕ್ಟರ್ ಚಾಲಿತ ಉಪಕರಣದಿಂದ ಪ್ರಾತ್ಯಕ್ಷಿಕೆ

by | 09/02/24 | ಕೃಷಿ


ಹಿರಿಯೂರು ಫೆ.09:
ಹಿರಿಯೂರಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ರೈತರಿಗೆ “ಶೇಂಗಾ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ತಂತ್ರಜ್ಞಾನಗಳು ಕುರಿತು ಒಂದು ದಿನದ ತರಬೇತಿ ತರಬೇತಿ ಕಾರ್ಯಕ್ರ ನಡೆಯಿತು.
ಅಖಿಲ ಭಾರತ ಸಮನ್ವಯ ಶೇಂಗಾ ಸಂಶೋಧನಾ ಪ್ರಾಯೋಜನೆ, ಬಬ್ಬೂರು ಫಾರಂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧಾ ಕೇಂದ್ರ ಸಹಭಾಗಿತ್ವದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರುಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಏರುಮಡಿ ಪದ್ದತಿಯಲ್ಲಿ ಶೇಂಗಾ ಬೆಳೆಯಲು ಏರು ಮಡಿ ನಿರ್ಮಿಸುವ ಟ್ರ್ಯಾಕ್ಟರ್ ಚಾಲಿತ ಉಪಕರಣದಿಂದ ಪ್ರಾತ್ಯಕ್ಷಿಕೆ ನೀಡಲಾಯಿತು.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ 70ಕ್ಕೂ ಹೆಚ್ಚು ಆಸಕ್ತ ರೈತ ಮತ್ತು ರೈತ ಮಹಿಳೆಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸೂಕ್ತವಾದ ಮಾಹಿತಿ ಪಡೆದುಕೊಂಡರು.
ಬಬ್ಬೂರು ಫಾರಂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಸುರೇಶ ಡಿ.ಏಕಬೋಟೆ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿಯಲ್ಲಿ ಕೂಲಿಯಾಳುಗಳ ಸಮಸ್ಯೆ ನಿವಾರಿಸಲು ಕೃಷಿ ಯಾಂತ್ರೀಕರಣ ಅನಿವಾರ್ಯವಾಗಿದೆ, ಶೇಂಗಾ ಬೆಳೆಯಲ್ಲಿ ರಸಗೊಬ್ಬರಗಳ ಬಳಕೆ ಕಡಿಮೆ ಮಾಡಲು ಜೈವಿಕ ಗೊಬ್ಬರವಾದ ರೈಜೋಬಿಯಂ ಮತ್ತು ಬೇರು ಮತ್ತು ಕಾಂಡ ಕೊಳೆ ರೋಗದ ಸಮಸ್ಯೆಕಡಿಮೆ ಮಾಡಲು ಜೈವಿಕ ಪೀಡೆ ನಾಶಕವಾದ ಟ್ರೈಕೋಡರ್ಮಾದಿಂದ ಬೀಜೋಪಚಾರ ಪ್ರಮುಖ ಪಾತ್ರವಹಿಸಿದೆ. ಈ ನಿಟ್ಟಿನಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಿಂದ ಹೊರತಂದಿರುವ ಸಂಶೋಧನಾ ತಾಂತ್ರಿಕತೆಗಳನ್ನು ರೈತರು ಅನುಸರಿಸುವ ನಿಟ್ಟಿನಲ್ಲಿ ನಮ್ಮ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೃಷಿ ವಿಜ್ಞಾನಕೇಂದ್ರ, ಬಬ್ಬೂರು ಫಾರಂ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರು ಸದಾ ಸಿದ್ಧವೆಂದು ಭರವಸೆ ನೀಡಿದರು.
ಶೇಂಗಾತಳಿ ವಿಜ್ಞಾನಿ ಡಾ.ಬಿ. ಎನ್. ಹರೀಶ್ ಬಾಬು ಮಾತನಾಡಿ, ಕರ್ನಾಟಕ ರಾಜ್ಯದ ಮಧ್ಯ ಒಣವಲಯ ಪ್ರದೇಶಕ್ಕೆ ಸೂಕ್ತವಾದಂತಹ ಶೇಂಗಾ ತಳಿಗಳು ಮತ್ತು ರೈತರು ಅÀನುಸರಿಸಬೇಕಾದ ಸುಧಾರಿತ ಬೇಸಾಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ, ಇತ್ತೀಚಿಗೆ ಬಿಡುಗಡೆ ಮಾಡಲಾದ ಸುಧಾರಿತ ತಳಿಯಾದ ಡಿ.ಹೆಚ್256 ರೈತರು ಹೆಚ್ಚಾಗಿ ಬೆಳೆಯಬೇಕೆಂದು ಮನವಿ ಮಾಡಿದರು. ಈ ನಿಟ್ಟಿನಲ್ಲಿ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧಾ ಕೇಂದ್ರದಲ್ಲಿ ಪ್ರಸ್ತುತ ಡಿ.ಹೆಚ್256 ಶೇಂಗಾ ತಳಿಯ ಬೀಜಗಳು ಲಭ್ಯವಿದ್ದು, ಆಸಕ್ತ ರೈತರು ಸಂಶೋಧನಾ ಕೇಂದ್ರದಿಂದ ಖರೀದಿಸಬಹುದೆಂದು ತಿಳಿಸಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಮಾತನಾಡಿ, ಶೇಂಗಾ ಜಿಲ್ಲೆಯ ಪ್ರಮುಖ ಎಣ್ಣೇಕಾಳು ಬೆಳೆಯಾಗಿದ್ದು, ಬೀಜೋಪಚಾರ, ಪೋಷಕಾಂಶಗಳ ನಿರ್ವಹಣೆ, ಸೂಕ್ತ ಸಮಯದಲ್ಲಿ ಕೀಟ ರೋಗಗಳ ನಿರ್ವಹಣೆ ಮತ್ತು ನೀರಾವರಿ ಸೌಲಭ್ಯವುಳ್ಳವರು ಏರುಮಡಿ ಪದ್ದತಿಯನ್ನು ಅನುಸರಿಸಿ ಶೇಂಗಾ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯಲು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದರು.
ತಾಂತ್ರಿಕ ಅಧಿಕಾರಿ (ಕೀಟಶಾಸ್ತ್ರ) ವಿಜಯ ಎಸ್.ಧಾನರಡ್ಡಿ ಅವರು ಶೇಂಗಾ ಬೆಳೆಗೆ ಬಾಧಿಸುವ ಪ್ರಮುಖಕೀಟ ಮತ್ತು ರೋಗಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕೃಷಿ ಇಂಜಿನಿಯರ್ ಡಾ.ರಾಜಶೇಖರ್ ಡಿ. ಬಾರ್ಕರ್ ಅವರು ಶೇಂಗಾ ಬೆಳೆ ಬಿತ್ತನೆಯಿಂದ ಕೊಯ್ಲು ಮತ್ತು ಕೊಯ್ಲೋತ್ತರ ಚಟುವಟಿಗಳಿಗೆ ಸೂಕ್ತವಾದಂತಹ ಯಂತ್ರೋಪಕರಣಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.
ತಳಕು ಹೋಬಳಿಯ ಪ್ರಗತಿಪರ ರೈತ ಗುಡಿಹಳ್ಳಿ ಬಡಗಿರಂಗಪ್ಪ ಅವರು ಸುಧಾರಿತ ತಾಂತ್ರಿಕತೆ ಅಳವಡಿಸಿಕೊಂಡು ಡಿ.ಹೆಚ್256 ಮತ್ತು ಕದರಿ ಲೇಪಾಕ್ಷಿ ಶೇಂಗಾತಳಿಯಿಂದ ಉತ್ತಮ ಇಳುವರಿ ಪಡೆದ ಹಾಗೂ ಬಿಳಿರಾಗಿ ಬೆಳೆದ ಅನುಭವ ಹಂಚಿಕೊಂಡರು. ಅದೇರೀತಿ ತಳಕು ಹೋಬಳಿಯ ಮತ್ತೋರ್ವ ಪ್ರಗತಿ ಪರರೈತ ಶರಣಪ್ಪ ಅವರು ಹಾಲಿ ನೀರಾವರಿಯಲ್ಲಿ ಏರು ಮಡಿ ಪದ್ದತಿಯಲ್ಲಿ ಡಿ.ಹೆಚ್256 ಉತ್ತಮವಾಗಿ ಬೆಳೆದಿದ್ದು, ಎಕರೆಗೆ 10-12 ಕ್ವಿಂಟಲ್ ಇಳುವರಿ ನಿರೀಕ್ಷಿಸಬಹುದು ಎಂದು ತಮ್ಮ ಅನುಭವ ಹಂಚಿಕೊಂಡರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page