ಶೇ ನೂರು ಮತದಾನ ಗಡಿ ಮುಟ್ಟಲು ಮತದಾರರನ್ನು ಸೆಳೆಯಲು ಸಖಿ ಮತಗಟ್ಟೆಗಳ ಅಲಂಕಾರಗೊಳಿಸಲು ಸಜ್ಜು ಸ್ವೀಪ್ ಸಮಿತಿ ಅಧ್ಯಕ್ಷ ತಾಪಂ ಇಒ ಹೊನ್ನಯ್ಯ

by | 30/04/23 | ಚುನಾವಣೆ-2023


ಚಳ್ಳಕೆರೆ ಜನಧ್ವನಿ ವಾರ್ತೆ ಏ30.
ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರರಷ್ಟು ಮತದಾನದ ಗುರಿಯನ್ನು ಹೊಂದಲು ಮತದಾರರನ್ನು ಸೆಳೆಯಲು ಮತಗಟ್ಟೆಗಳನ್ನು ಅಲಂಕೃತಗೊಳಿಸಲು ತಾಲೂಕು ಸ್ವೀಪ್ ಸಮಿತಿ ಸಕಲ ಸಿದ್ದತೆಯಲ್ಲಿ ತೊಡಗಿದೆ.


ಹೌದು ಚಳ್ಳಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕಡಿಮೆ ಮತದಾನ ನಡೆದಿರುವ ಮತಗಟ್ಟೆ ಹಾಗೂ ಅತಿ ಹೆಚ್ಚು ಮಹಿಳಾ ಮತದಾರರು ಹೊಂದಿರುವ 5ಸಖಿ ಮತಗಟ್ಟೆಗಳನ್ನು ಗುರತಿಸಲಾಗಿದೆ, ಮತಟ್ಟೆ ಸಂಖ್ಯೆ (79).ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಟಪ್ಪನಹಟ್ಟಿ, (89). ಉದ್ರು ಹಿರಿಯ ಪ್ರಾಥಮಿಕ ಶಾಲೆ.( 174). ಸರಕಾರಿ ಹಿರಿಯ ಬಾಲಕಿಯರ ಪ್ರಾಥಮಿಕ ಶಾಲೆ ಪರಶುರಾಂಪುರ, (188).ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಾಪುರ, (242). ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲಿಕುಂಟೆ ಈ ಮತಗಟ್ಟೆಯಲ್ಲಿ ಅತಿ ಹೆಚ್ಚು ಮಹಿಳಾ ಮತದಾರರಿದ್ದು ಈ ಮತಗಟ್ಟೆಯಲ್ಲಿ ಮಹಿಳಾ ಸಿಬ್ಬಂದಿಗಳು ಕೊಠಡಿ ಪಿಂಕ್ ಇಲ್ಲಿನ ಮಹಿಳಾ ಸಿಬ್ಬಂದಿಗಳೂ ಸಹ ಪಿಂಕ್ ಕಲರ್ ಉಡುಗೆ ತೊಟ್ಟಿರುವುದು ವಿಶೇಷವಾಗಿರುತ್ತದೆ.


ನಗರದ (97). ವಿಶ್ವಬಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಕಲಚೇತನ ಮತಗಟ್ಟೆ ಗುರುತಿಸಿದ್ದು ಇಲ್ಲಿ ವಿಕಲಚೇತನ ಮತಗಟ್ಟೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿಲಿದ್ದಾರೆ,
ಒಂದು ಯುವ ಮತದಾರರ ಮತಟ್ಟೆ ಗುರುತಿಸಿದ್ದು ಇಲ್ಲಿನ ಮತಗಟ್ಟೆಯಲ್ಲಿ ಯುವ ನೌಕರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ, ಪರಿಸರಸ್ನೇಹಿ ಮತಗಟ್ಟೆಗಳು ಮೇ 10 ರಂದು ನಡೆಯಲಿರುವ ಮತದಾನಕೇಂದ್ರಗಳು ಭರದಿಂದ ಸಿದ್ದತೆಗೊಳ್ಳುತ್ತಿವೆ.


ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಹೊನ್ಯಯ್ಯ ಜನಧ್ವನಿ ಡಿಜಿಟಲ್ ಮಾಧ್ಯಮದೊಂದಿಗೆ ಮಾತನಾಡಿ 2023 ವಿಧಾನಸಭಾ ಮೇ 10 ರಂದು ನಡೆಯಲಿರುವ ಚುನಾವಣೆಯನ್ನು ಶಾಂತಿಯುತ-ನ್ಯಾಯಸಮ್ಮತ ಮತ್ತು ಯಶಸ್ವಿಯಾಗಿ ನಡೆಸಲು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಮತದಾನದ ಪ್ರಮಾಣವನ್ನು ಶೇಕಡಾ ನೂರಕ್ಕೆ, ನೂರರಷ್ಟು ಹೆಚ್ಚಿಸಲು ವಿಶೇಷ ಕಾರ್ಯಕ್ರಮಗಳ ಮೂಲಕ ಮತದಾರರಲ್ಲಿ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲಾಗಿದೆ.
ಇನ್ನೂ ಮತದಾರರನ್ನು ಮತಗಟ್ಟೆಯತ್ತ ಆಕರ್ಷಿಸಲು ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪರಿಸರ ಸ್ನೇಹಿ ಮತಗಟ್ಟೆ, ಸಖೀ ಮತಗಟ್ಟೆ, ಯುವ ಪ್ರೇರಣಾ ಮತಗಟ್ಟೆ,ವಿಶೇಷ ಕಲ್ಪನೆ ಆಧಾರಿತ (ಸಖಿ) ಮಾದರಿ ಮತಗಟ್ಟೆಯನ್ನು ಸ್ಥಾಪಿಸಲಾಗಿದೆ.


ವಿಧಾನಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿದ ಮತಗಟ್ಟೆಗಳು ವರ್ಲಿ ಕಲೆ ಸೇರಿದಂತೆ ಬಗೆ, ಬಗೆಯ ಚಿತ್ರಗಳ ಜೊತೆಯಲ್ಲಿ ಮತದಾನದ ಕುರಿತು ಘೋಷ ವಾಖ್ಯೆಗಳನ್ನು ಒಳಗೊಂಡು ಎಲ್ಲರ ಗಮನ ಸೆಳೆಯುತ್ತಿವೆ. ಪಿಂಕ್ ಬಣ್ಣದಿಂದ ಅಲಂಕೃತಗೊಂಡ ಸಖಿ ಮತಗಟ್ಟೆ, ಹಸಿರು ಬಣ್ಣದಿಂದ ಶೃಂಗಾರಗೊAಡ ಪರಿಸರ ಸ್ನೇಹಿ ಮತಗಟ್ಟೆ, ಯುವ ಮತದಾರರನ್ನು, ವಿಶೇಷ ಚೇತನ ಮತದಾರರನ್ನು ಆಕರ್ಷಿಸುವ ರಂಗು, ರಂಗಿನ ಚಿತ್ತಾರದ ಚಿತ್ರಗಳು, ಗೊಡೆ ಬಹಗಳು ಎಲ್ಲರನ್ನೂ ಕೈ ಬೀಸಿ ಕರೆಯುವಂತಿವೆ. ಇನ್ನೂ ನನ್ನ ಮತ ಮಾರಾಟಕ್ಕಿಲ್ಲಾ, ನಿಮ್ಮ ಮತ ನಿಮ್ಮ ಭವಿಷ್ಯ, ಮತದಾನ ನಮ್ಮ ಹಕ್ಕು, ಕರ್ತವ್ಯ ಎಂಬ ಗೋಡೆ ಬರಹದ ಸಾಲುಗಳು ಮತದಾರರನ್ನು ಜಾಗೃತಗೊಳಿಸುವಂತೆ ಮಾಡಲಾಗಿದೆ.


ಈ ರೀತಿ ಹಲವು ವಿಧದಲ್ಲಿ ಹೆಚ್ಚಿನ ಮತದಾನವಾಗಲು ಪ್ರಯತ್ನ ನಡೆಸಲಾಗುತ್ತಿದೆ. ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಶೇ 100 ರ ಗಡಿ ಮುಟ್ಟಲು ಸರ್ವರೂ ಸಹಕರಿಸಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಪಂ ಇಒ ಹೊನ್ನಯ್ಯ ಮನವಿ ಮಾಡಿಕೊಂಡಿದ್ದಾರೆ.
ಪಿಡಿಒ ರಾಮಚಂದ್ರ ಮಾತನಾಡಿ ಈಗಾಗಲೆ ನಗರಂಗೆರೆ ಗ್ರಾಪಂ ವ್ಯಾಪ್ತಿಯಲ್ಲಿ ಮತದಾನ ಹೆಚ್ಚಿಸಲು ರಂಗೋಲಿ, ಬೈಕ್ ರ‍್ಯಾಲಿ, ಪ್ರಬಂಧ ಸ್ಪರ್ಧೆ, ಸೆಲ್ಫಿ ಪಾಯಿಂಟ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಸಿದ್ದಾಪುರ ಗ್ರಾಮದಲ್ಲಿ ಸುಮಾರು 700 ಕ್ಕೂ ಹೆಚ್ಚು ಮಹಿಳಾ ಮತದಾರರ ಸಂಖ್ಯೆ ಇರುವ ಮತಗಟ್ಟೆಯನ್ನು ಸಖಿ ಮತಗಟ್ಟೆ ಎಂದು ಗುರುತಿಸಿ ಮತದಾನ ಹೆಚ್ಚಿಸಲು ಮತದಾರರನ್ನು ಕೈ ಬೀಸಿ ಕರೆಯುವಂತೆ ಬಣ್ಣ ಬಣ್ಣ ಚಿತ್ತಾರದಿಂದ ಅಲಂಕರಿಸಲಾಗಿದೆ ಎಂದು ತಿಳಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page