ಹಿರಿಯೂರು :
ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ “ಸಂಗೀತ ಸಿಂಚನ” ದಂತಹ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ ಎಂಬುದಾಗಿ ಜಿ.ಪಂ.ಮಾಜಿ ಅಧ್ಯಕ್ಷ ಹಾಗೂ ವಾಣಿವಿಲಾಸ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್. ರಘುನಾಥ್ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಆವರಣದಲ್ಲಿ ಕಳವಿಭಾಗಿ ಶ್ರೀರಂಗನಾಥಸ್ವಾಮಿ ಸಾಂಸ್ಕೃತಿಕ ಕಲಾಸಂಘ(ರಿ) ಸಕ್ಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಸಂಗೀತ ಸಿಂಚನ” ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಹಿತ್ಯ, ಸಂಗೀತ ರಂಗಕಲೆ ಮಾನವನ ಬದುಕಿನ ಅವಿಭಾಜ್ಯ ಅಂಗಗಳಾಗಿದ್ದು ದೇಶದ ಸಾಂಸ್ಕೃತಿಕ ಕಲೆ ಹಾಗೂ ಸಂಸ್ಕಾರದ ಅನಾವರಣಕ್ಕೆ ಕಾರಣವಾಗಿವೆ. ಇವುಗಳು ಮನುಕುಲಕ್ಕೆ ಬೇಕಾದ ನೆಮ್ಮದಿ, ಸೌಹಾರ್ದತೆ, ಸಹಬಾಳ್ವೆ, ಪ್ರೀತಿ, ಕರುಣೆ, ಮಮತೆಯನ್ನು ತಂದುಕೊಡುತ್ತವೆ ಎಂಬುದಾಗಿ ಸಹ ಅವರು ಹೇಳಿದರು.
ಸ್ವಾಮಿವಿವೇಕಾನಂದ ರಾಜ್ಯಯುವಪ್ರಶಸ್ತಿ ಪುರಸ್ಕೃತ ಎಸ್.ಜಿ.ರಂಗಸ್ವಾಮಿ ಸಕ್ಕರ ಮಾತನಾಡಿ ಸಂಗೀತ ನಾಡಿನ ಸಾಂಸ್ಕೃತಿಕ ಕಲೆಯಾಗಿದ್ದು ಈ ಕಲೆ,ಕಲಾವಿದರನ್ನ ಉಳಿಸಿ ಬೆಳೆಸುವ ಕೆಲಸವನ್ನು ನಾವು-ನೀವೆಲ್ಲರೂ ಮಾಡಬೇಕಿದೆ.ಶಾಲಾ, ಕಾಲೇಜುಗಳಲ್ಲಿ ಪಠ್ಯ ಚಟುವಟಿಕೆಯ಼ಷ್ಟೆ ಪಠ್ಯೇತರ ಚಟುವಟಿಕೆಗಳು ಹೊರಹೊಮ್ಮಿದಾಗ ಮಾತ್ರ ನಮ್ಮ ದೇಶದ ಕಲೆ, ಸಂಸ್ಕೃತಿ, ಸಂಸ್ಕಾರ ಉಳಿಯಲು ಸಾಧ್ಯ ಎಂದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಾದ ಆಲೂರು ಹನುಮಂತರಾಯಪ್ಪ ಅವರು ಮಾತನಾಡಿ ಸಂಗೀತ ಮನಸ್ಸಿಗೆ ಮುದ ನೀಡುವುದರ ಜೊತೆಗೆ ಮನುಷ್ಯನಿಗೆ ಮಾನಸಿಕ ನೆಮ್ಮದಿ ಹಾಗೂ ಏಕಾಗ್ರತೆಯನ್ನು ನೀಡುತ್ತದೆ. ಅಷ್ಟೇ ಅಲ್ಲ. ಎಷ್ಟೋ ಮಾನಸಿಕ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಈ ಸಂಗೀತಕ್ಕಿದೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಹರಿಯಬ್ಬೆ ಜಿ.ಡಿ. ತಿಮ್ಮಯ್ಯ, ಹಿರಿಯ ರಂಗಭೂಮಿ ಕಲಾವಿದೆ ಬಿ.ಎಸ್.ವಿಜಯಕುಮಾರಿ, ಸಂಗೀತ ವಿದುಷಿ ಟಿ.ಸುಲೋಚನಾತಿಪ್ಪೇಸ್ವಾಮಿ, ಹಾರ್ಮೋನಿಯಂ ವಾದಕ ಹರಿಯಬ್ಬೆಯ ಎಚ್.ಆರ್.ಮಂಜುನಾಥ್ ಆಲೂರಿನಶಿಲ್ಪಿ ಜೆ.ನರಸಿಂಹರಾಜು ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಂಗೀತ ಸಿಂಚನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೊಸದುರ್ಗದ ಓ.ಮೂರ್ತಿ ಮತ್ತು ತಂಡದಿಂದ ಸುಗಮಸಂಗೀತ, ಶ್ರೀಮತಿಎಂ.ಸರಸ್ವತಿ ಮತ್ತು ತಂಡದಿಂದ ವಚನಗಾಯನ, ಪೀಲಾಪುರ ಆರ್.ಕಂಠೇಶ್ ಮತ್ತು ತಂಡದಿಂದ ತತ್ವಪದ ಗಾಯನ, ಬೋಸೇದೇವರಹಟ್ಟಿಯ ಎನ್.ಮಂಜಣ್ಣ ಮತ್ತು ತಂಡದಿಂದ ಜನಪದ ಸಂಗೀತ, ಕಸಪ್ಪನಹಳ್ಳಿಯ ಟಿ.ವೆಂಕಟೇಶ್ ಮತ್ತು ತಂಡದಿಂದ ರಂಗಗೀತೆಗಾಯನ, ಶ್ರೀಮತಿ ಟಿ. ಸುಲೋಚನ ಮತ್ತು ತಂಡದಿಂದ ಕರ್ನಾಟಕ ಸಂಗೀತ, ಶ್ರೀಮತಿಬಿ.ಎಸ್. ವಿಜಯಕುಮಾರಿ ಮತ್ತು ತಂಡದಿಂದ ಭಕ್ತಿಗೀತೆ ಗಾಯನವನ್ನು ಕಲಾವಿದರು ಪ್ರಸ್ತುತ ಪಡಿಸಿದರು.
ಈ ಕಾರ್ಯಕ್ರಮದಲ್ಲಿ ಮಕ್ಕಳ ಸಾಹಿತ್ಯ ವೇದಿಕೆ ಗೌರವ ಅಧ್ಯಕ್ಷರಾದ ಆರ್. ತಿಪ್ಪೇಸ್ವಾಮಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ, ಹಾರ್ಮೋನಿಯಂ ವಾದಕರಾದ ಜೆ.ನಿಜಲಿಂಗಪ್ಪ, ಎಚ್.ಆರ್. ಮಂಜುನಾಥ್ ತಬಲವಾದಕ ಯಶವಂತ್, ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸೌಮ್ಯ ಶ್ರೀಮತಿ ಗಂಗಮ್ಮ ,ಶಿವರಾಜ್,ಉಮೇಶ್, ಸೇರಿದಂತೆ ಶಿಕ್ಷಕ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...
0 Comments