ಸಾಹಿತ್ಯ ಸಂಸ್ಕಾರ ಸಮಾಜದ ಬದುಕನ್ನು ಅರ್ಥೈಸಿಕೊಳ್ಳುವ ಮಹಾಶಕ್ತಿಯಾಗಿದೆ ಎಂದು ಹಿರಿಯ ಕತೆಗಾರ ತಿಪ್ಪಣ್ಣ ಮರಿಕುಂಟೆ ಹೇಳಿದರು.

by | 12/11/22 | ಕಥೆ – ಕವನ, ಪುಸ್ತಕ

ಚಳ್ಳಕೆರೆ ನವಂಬರ್12.
ಸಾಹಿತ್ಯ ಸಂಸ್ಕಾರ ಸಮಾಜದ ಬದುಕನ್ನು ಅರ್ಥೈಸಿಕೊಳ್ಳುವ ಮಹಾಶಕ್ತಿಯಾಗಿದೆ ಎಂದು ಹಿರಿಯ ಕತೆಗಾರ ತಿಪ್ಪಣ್ಣ ಮರಿಕುಂಟೆ ಹೇಳಿದರು.
ತಾಲೂಕಿನ ದೇವರಮರಿಕುಂಟೆ ಗ್ರಾಮದಲ್ಲಿ ಶನಿವಾರ ಗ್ರಾಮೀಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ನೆನಪು ಮಾಸಿಕ ಕಾರ್ಯಕ್ರಮ ಮತ್ತು ಕವಿ ಕರ‍್ಲಕುಂಟೆ ತಿಪ್ಪೇಸ್ವಾಮಿ ಅವರ ಭಾವರೂಪ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲೂಕಿನಲ್ಲಿ ಸಾಹಿತ್ಯ ಸಾಂಸ್ಕೃತಿಕ ನೆಲೆಗಟ್ಟಿನ ಪರಂಪರೆ ಇದೆ. ಬದುಕಿನೊಟ್ಟಿಗೆ ಇದನ್ನು ಉಳಿಸಿಕೊಳ್ಳುವ ಇಚ್ಚಾಸಕ್ತಿ ಜನಮಾಸದಲ್ಲಿ ಕಾಪಾಡಿಕೊಳ್ಳಬೇಕಿದೆ. ಬೆಳಗೆರೆ ಕೃಷ್ಣಶಾಸ್ತಿçಗಳು ಜಿ.ಎಸ್. ಶಿವರುದ್ರಪ್ಪ, ಆರಾಸೇ ಮಹನೀಯರು ಸೂಚಿತ ಗ್ರಾಮೀಣ ಸಾಹಿತ್ಯ ಪರಿಷತ್ತು ಹೆಸರಿನಡಿ ಸುಮಾರು 32 ವರ್ಷಗಳ ಕಾಲ ಸಾಹಿತ್ಯ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಇದರಿಂದ ಗ್ರಾಮೀಣ ಜನಜೀವನದ ಸೊಗಡು, ಜೀವನ ಶೈಲಿ ಮತ್ತು ಜನಪದರ ನೋವು-ದುಮ್ಮಾನವನ್ನು ಸಮಾಜಕ್ಕೆ ಪರಿಚಯಿಸುವ ಕೆಲಸವಾಗಿದೆ. ಪ್ರತಿಭಾವಂತ ಬರಹಗಾರರಿಗೆ ವೇದ, ಋಗ್ವೇದ, ರಾಮಾಯಣ, ಮಹಾಭಾರತ ಅಧ್ಯಯನ ಮಾಡಿಕೊಳ್ಳಲು ಪುಸ್ತಕಗಳ ಸಂಗ್ರಹ ಮಾಡಲಾಗಿದೆ. ಇದನ್ನು ಸದುಪಯೋಗ ಮಾಡಿಕೊಳ್ಳುವ ಮನಸ್ಸುಗಳ ಸಂಖ್ಯೆ ಬೆಳೆಯಬೇಕಿದೆ ಎಂದ ಅವರು, ಕರ‍್ಲಕುಂಟೆ ತಿಪ್ಪೇಸ್ವಾಮಿ ಅವರ ಕೆಲ ಕವಿತೆಗಳು ವಿದ್ಯಾರ್ಥಿಗಳಿಗೆ ಪಠ್ಯ ವಿಷಯವಾಗುವ ಅರ್ಹತೆ ಇವೆ ಎಂದು ಭವಿಷ್ಯ ನುಡಿದರು.
‘ಭಾವರೂಪ’ ಕವನ ಸಂಕಲನ ಬಿಡುಗಡೆ ಮಾಡಿ ಮಾತನಾಡಿದ ಬಿಇಒ ಕೆ.ಎಸ್. ಸುರೇಶ್, ಪ್ರಸ್ತುತ ವೈರಾಗ್ಯ ಸಮಾಜದಲ್ಲಿ ಆಡಂಬರ ಮತ್ತು ರಾಜಕೀಯ ಬಯಸುವ ಸಂಖ್ಯೆ ಕಾಣುತ್ತಿದ್ದೇವೆ. ಸಮಾಜವನ್ನು ಅರ್ಥೈಸುವ ಸಾಹಿತ್ಯ ಕೇಳುವ ಮತ್ತು ಪ್ರೋತ್ಸಾಹಿಸುವ ಇಚ್ಚಾಸಕ್ತಿ ಕಾಣುತ್ತಿಲ್ಲ. ನಗರ ಶೈಲಿಗೆ ಮಾರು ಹೋಗುತ್ತಿರುವು ಹಳ್ಳಿಗಳಲ್ಲೂ ಜೀವನದ ಸೊಗಡು, ಸಂಸ್ಕೃತಿ ಉಳಿದುಕೊಳ್ಳುತ್ತಿಲ್ಲ. ಇದರಿಂದ ಜೀವನದ ಸಾರ್ಥಕತೆ ಕಂಡುಕೊಳ್ಳಲಾಗದೆ, ಬೆಚ್ಚಿ ಬೀಳಿಸುವ ಘಟನೆಗಳ ಹಿಂದೆ ಹೋಗುತ್ತಿದ್ದೇವೆ. ಸಾಹಿತ್ಯ ರಚನೆಕಾರರು ಹಳ್ಳಿಯಾಗಲೀ, ದೇಶದ ಯಾವುದೇ ಭಾಗದಲ್ಲಿರಲಿ ಭಾವನೆ ಒಂದೇ ಇರುತ್ತದೆ. ಆದ್ದರಿಂದ ಸಾಹಿತ್ಯ ಜನಜೀವನದ ಅಂತಃಸತ್ವವಾಗಿರುತ್ತದೆ. ಸುಮಾರು ವರ್ಷಗಳಿಂದ ಸಾಹಿತ್ಯ ಅಭಿರುಚಿಯಲ್ಲಿರುವ ಕರ‍್ಲಕುಂಟೆ ತಿಪ್ಪೇಸ್ವಾಮಿ ಅವರ ಸಾಹಿತ್ಯ ರಚನೆ ಸಮಾಜಮುಖಿಯಾಗಿದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಎನ್. ರಘುಮೂರ್ತಿ ಮಾತನಾಡಿ, ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಗ್ರಾಮೀಣ ಭಾಗದಲ್ಲಿ ನಿರಂತರ ಸಾಹಿತ್ಯ ಸೇವೆಯಲ್ಲಿ ತೊಡಗಿರುವ ತಿಪ್ಪಣ್ಣ ಮರಿಕುಂಟೆ ಅವರ ಸಾಹಿತ್ಯ ಬದುಕು ಸಮಾಜಕ್ಕೆ ಮಾದರಿಯಾಗಿದೆ. ಗಾಮದಲ್ಲಿ ಸುಸಜ್ಜಿತ ಡಿಜಿಟಲ್ ಗ್ರಂಥಾಲಯ ಸ್ಥಾಪನೆ ಮತ್ತು ಒಂದು ಸಾಹಿತ್ಯ ಕಾರ್ಯಕ್ರಮ ಆಯೋಜನೆ ಮಾಡುವ ಇಚ್ಚಾಸಕ್ತಿ ಇದೆ. ಸಾಹಿತ್ಯ ಕಾರ್ಯವನ್ನು ಪ್ರೋತ್ಸಾಹಿಸಿದಾಗ ಮಾತ್ರ ಸಮೃದ್ದ ಭಾಷಾಭಿಮಾನವನ್ನು ಕಟ್ಟಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಕೆ.ಎಸ್. ರಾಘವೇಂದ್ರ ಉದ್ಘಾಟಿಸಿದರು.
ಕವಿ ಕರ‍್ಲಕುಂಟೆ ತಿಪ್ಪೇಸ್ವಾಮಿ, ವೀರಭದ್ರಪ್ಪ, ದೊಡ್ಡಯ್ಯ, ಪೂಜಾರಿ ಗೋವಿಂದಪ್ಪ, ಮಂಜುನಾಥ, ರಾಜಶೇಖರ, ಬಿ ಒ ಕೆ.ಎಸ್ ಸುರೇಶ್ ಮತ್ತಿತರರು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page