ಹಿರಿಯೂರು ದಕ್ಷಿಣಕಾಶಿ ಶ್ರೀತೇರುಮಲ್ಲೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷ ಗೋಪೂಜೆ ಸಲ್ಲಿಸಿದ ಆಡಳೀತ ಮಂಡಳಿ

by | 14/11/23 | ಸುದ್ದಿ


ಹಿರಿಯೂರು 14. ಮುಜರಾಯಿ ಇಲಾಖೆಗೆ ಸೇರಿದ ಹಿರಿಯೂರು ನಗರದ ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಮುಜರಾಯಿ ಅಧಿಸೂಚಿತ “ಬಿ” ಪ್ರವರ್ಗದ ಶ್ರೀ ತೇರುಮಲ್ಲೇಶ್ವರ ದೇವಸ್ಥಾನದಲ್ಲಿ ಸರಕಾರದ ಆದೇಶದಂತೆ ಮಂಗಳವಾರ ಸಂಜೆ 5.30 ರ ಸಮಯದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ವಿಶೇಷವಾಗಿ ಗೋ ಪೂಜೆ ನೆರವೇಸಲಾಯಿತು.

ತಹಶೀಲ್ದಾರ್ ರಾಜೇಶ್ ಕುಮಾರ್ ಮಾತನಾಡಿ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಗೋ ಪೂಜೆ ನಡೆಸಬೇಕು ಎಂದು ಸುತ್ತೋಲೆ ಹೊರಡಿಸಿಸಿದ ಆದೇಶದ ಮೇರೆಗೆ ಮಂಗಳವಾರ ಸಂಜೆ 5.30 ರಿಂದ 6.30ರ ಗೋಧೂಳಿ ಲಗ್ನದಲ್ಲಿ
ಗೋವಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಲಾಯಿತು. ನಂತರ ಅರಿಶಿಣ, ಕುಂಕುಮ ಹಚ್ಚಿ, ಹೂಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡುವ ಮೂಲಕ ಗೋ ಪೂಜೆ ನೆರವೇರಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ದನಗಳ‌ ಸಂಖ್ಯೆ ಇಳಿಮುಖವಾಗುತ್ತಿರುವುದನ್ನು ಮನಗಂಡು ಸರಕಾರ ಗೋವುಗಳ ರಕ್ಷಣೆಗಾಗಿ ದೇವಾಲಯಗಳಲ್ಲಿ ಗೋ ಪೂಜೆ; ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ಮಾನ್ಯ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ ಗೋ ಪೂಜೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.


ಹಿಂದೂ ಧರ್ಮದಲ್ಲಿ ಗೋವುಗಳಿಗೆ ಮಾತೃ ಸ್ಥಾನವನ್ನು ಕೊಡಲಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಗೋ ಪೂಜೆ ಅತ್ಯಂತ ಪ್ರಮುಖವಾದ ಪೂಜೆಗಳಲ್ಲೊಂದು. ದೀಪಾವಳಿ ಹಬ್ಬದಲ್ಲಿ ಗೋಪೂಜೆಗೆ ವಿಶೇಷ ಪ್ರಾಧಾನ್ಯತೆ ಇದೆ.

ಗೋ ಮಾತೆಯಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ. ಗೋ ಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂಬ ನಂಬಿಕೆ ಇಂದಿಗೂ ಜನರಲ್ಲಿ ಮನೆ ಮಾಡಿದೆ . ಗೃಹ ಪ್ರವೇಶ. ವಿವಾಹ ಇತರೆ ಶುಭ ಕಾರ್ಯಗಳಲ್ಲಿ ಗೋ ಪೂಜೆ ಮಾಡುವ ಪದ್ದತಿ ಆಚರಣೆಯಲ್ಲಿದೆ. ಈಗ ಸರ್ಕಾರವೂ ಸಹ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗೋ ಪೂಜೆ ಮಾಡಲು ಆದೇಶ ಹೊರಡಿಸಿದೆ.
ಉತ್ತಮ ರೀತಿಯಲ್ಲಿ ಮಳೆಯಾಗಿ, ಸಮೃದ್ಧವಾಗಿ ಬೆಳೆಗಳು ಬರಲೆಂದು ಹಾಗೂ ಸಸ್ಯರಾಶಿಗಳು ಸಮೃದ್ಧಿಯಾಗಿ ಸಕಲರಿಗೂ ಒಳಿತಾಗಲಿ ಎಂದು ಸಂಕಲ್ಪಿಸಿ ಪ್ರಾರ್ಥಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿತ್ತು ಅದರಂತೆ ದೇವಸ್ಥಾನ ಸಮಿತಿ ಹಾಗೂ ಕಂದಾಯ ಇಲಾಖೆ ಗೋಪೂಜೆ ಸಲ್ಲಿಸುವ ಮೂಲಕ ಉತ್ತಮ ಮಳೆ ಬೆಳೆ ಬರಲೆಂದು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಸಿಬ್ಬಂದಿ ವರ್ಗದವರು, ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ಕಸಬಾ ಹೋಬಳಿ ಹಾಗೂ ಕಸಬಾ ಹೋಬಳಿ ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page