ಹೊಸದಾಗಿ ರಚಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ 1781 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ನೀಡಿದ ಆಶ್ವಾಸನೆಯಂತೆ ಹಕ್ಕುಪತ್ರ ವಿತರಣೆ ಜಿ.ಹೆಚ್ಚ್.ತಿಪ್ಪಾರೆಡ್ಡಿ

by | 27/03/23 | ಸಿನಿಮಾ


ಚಿತ್ರದುರ್ಗ ಮಾರ್ಚ್27:
ನಾವು ನೀಡಿದ ಆಶ್ವಾಸನೆಯಂತೆ ರಾಜ್ಯದ ಲಂಬಾಣಿ, ಕುರುಬ, ಗೊಲ್ಲರಹಟ್ಟಿ, ತಾಂಡಾಗಳು ಹಾಗೂ ನಗರದ ಕೊಳಚೆ ಪ್ರದೇಶದಲ್ಲಿ ವಾಸವಿದ್ದ ಜನರಿಗೆ ಶಾಶ್ವತ ಹಕ್ಕು ಪತ್ರಗಳನ್ನು ಸರ್ಕಾರದಿಂದ ನೀಡಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ನಗರದ ತ.ರಾ.ಸು ರಂಗಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಹೊಸದಾಗಿ ರಚಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಅವರು ಮಾತನಾಡಿದರು.
ಬಹುಕಾಲದಿಂದಲೂ ಪೂರ್ವಜರಿಂದ ಬಳುವಳಿಯಾಗಿ ಬಂದ ಜಾಗದಲ್ಲಿ ನೀವೆಲ್ಲಾ ವಾಸವಿದ್ದಿರಿ. ಇದು ಕಂದಾಯ ಇಲಾಖೆ ಮ್ಯಾಪ್‍ನಲ್ಲಿ ನಮೂದಾಗದ ಕಾರಣ ಈ ಜಾಗದ ಹಕ್ಕು ನಿಮಗೆ ಲಭಿಸಿರಲಿಲ್ಲ. ಆದರೆ ಇಂದು ಸರ್ಕಾರ ಈ ಜಾಗದ ಹಕ್ಕು ಶಾಶ್ವತವಾಗಿ ನಿಮಗೆ ನೀಡಿದೆ. ಇದರ ಜೊತೆಗೆ ಈ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನೂ ಕಲ್ಪಿಸಲಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸಬಾ ಹಾಗೂ ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಒಟ್ಟು 20 ಹಳ್ಳಿಗಳ 1781 ಕುಟುಂಬಗಳಿಗೆ ಇಂದು ಶಾಶ್ವತ ಹಕ್ಕುಪತ್ರ ನೀಡಲಾಗಿದೆ ಎಂದರು.


ಪ್ರಧಾನ ಮಂತ್ರಿಗಳು ಕಲಬುರ್ಗಿಯಲ್ಲಿ ಜರುಗಿದ ಕಾರ್ಯದಲ್ಲಿ ಉತ್ತರ ಕರ್ನಾಟಕ ಭಾಗದ 52 ಸಾವಿರ ಜನರಿಗೆ ಹಕ್ಕು ಪತ್ರ ವಿತರಿಸಿದ್ದರು. ಇದು ಗಿನ್ನಿಸ್ ದಾಖಲೆಯಾಗಿದೆ. ಇದೇ ಮಾದರಿಯಲ್ಲಿ ದಕ್ಷಿಣ ಕರ್ನಾಟಕ ಭಾಗದ ಜನರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಂದ ಹಕ್ಕು ಪತ್ರ ವಿತರಿಸಲು ಕಾರ್ಯಕ್ರಮ ರೂಪಿಸಲಾಗಿತ್ತು. ಕೇಂದ್ರ ಗೃಹ ಸಚಿವರ ಸಮಯ ನಿಗದಿಯಾಗದ ಕಾರಣ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶದಂತೆ ತಾಲ್ಲೂಕುವಾರು ಹಕ್ಕುಪತ್ರ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಧಿಕಾರಿ ಆರ್.ಚಂದ್ರಯ್ಯ, ಭೂ ದಾಖಲೆಗಳ ಉಪನಿರ್ದೇಶಕ ರಾಮಾಂಜನೇಯ, ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ, ತಾಲ್ಲೂಕು ಪಂಚಾಯಿತಿ ಇಒ ಹನುಮಂತಪ್ಪ, ಚಿತ್ರದುರ್ಗ ತಾಲ್ಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ ನಾರಾಯಣಸ್ವಾಮಿ, ನಗರಸಭೆ ಆಯುಕ್ತ ಶ್ರೀನಿವಾಸ ಸೇರಿದಂತೆ ಮತ್ತಿತರರು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ತ.ರಾ.ಸು ರಂಗಮಂದಿರದಲ್ಲಿ ಸೋಮವಾರ ಹೊಸದಾಗಿ ರಚಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹಕ್ಕುಪತ್ರ ವಿತರಿಸಿದರು. ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಇದ್ದಾರೆ.
======
ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ, ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ
ಅಂಗವಿಕಲರಿಗೆ ವಿವಿಧ ಸೌಲಭ್ಯ ವಿತರಣೆ
*********
ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.27:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2022-23ನೇ ಸಾಲಿನ ವಿವಿಧ ಯೋಜನೆಗಳಡಿ ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು.
ನಗರದ ತರಾಸು ರಂಗಮಂದಿರದ ಆವರಣದಲ್ಲಿ ಸೋಮವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 9 ಮಂದಿ ಅಂಗವಿಕಲ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸಲಾಯಿತು.
ಯಂತ್ರಚಾಲಿತ ದ್ವಿಚಕ್ರ (ರೆಟ್ರೋಫಿಟ್‍ಮೆಂಟ್ ಸಹಿತ) ಯೋಜನೆಯಡಿ 4 ಮಂದಿ ದೈಹಿಕ ಅಂಗವಿಕಲತೆ ಹೊಂದಿರುವ ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ ಯೋಜನೆಯಡಿ 3 ಮಂದಿ ಶ್ರವಣದೋಷ ಅಂಗವಿಕಲತೆ ಹೊಂದಿರುವ ಅಂಗವಿಕಲರಿಗೆ ಹೊಲಿಗೆಯಂತ್ರ ಹಾಗೂ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆಯಡಿ ಇಬ್ಬರು ದೃಷ್ಠಿದೋಷ ಹೊಂದಿರುವ ಅಂಗವಿಕಲರಿಗೆ ಟಾಕಿಂಗ್ ಲ್ಯಾಪ್‍ಟಾಪ್‍ಅನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಎಂಆರ್‍ಡಬ್ಲ್ಯೂ ಮೈಲಾರಪ್ಪ ಸೇರಿದಂತೆ ಅಂಗವಿಕಲ ಫಲಾನುಭವಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ನಗರದ ತರಾಸು ರಂಗಮಂದಿರದ ಆವರಣದಲ್ಲಿ ಸೋಮವಾರ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂಗವಿಕಲ ಫಲಾನುಭವಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ ಹಾಗೂ ಟಾಕಿಂಗ್ ಲ್ಯಾಪ್‍ಟಾಪ್ ಸೌಲಭ್ಯ ವಿತರಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page