ನಿಧಿ ಆಸೆ ತೊರಿಸಿ ಹಣ ಪೀಕುತ್ತಿದ್ದ ಕತ್ರನಾಕ್ ದಂಪತಿ ಆರೋಪಿಗಳನ್ನು ಎಡೆಮುರಿಕಟ್ಟಿ ಬಂದಿಸಿ ಕಂಬಿ ಹಿಂದೆ ಕಳಿಸಲು ಚಳ್ಳಕೆರೆ ಪೊಲೀಸರು ಯಶಸ್ವಿ

by | 01/05/23 | ಕ್ರೈಂ

ಚಳ್ಳಕೆರೆ ಜನಧ್ವನಿ ವಾರ್ತೆ ಮೇ.1ನಿಧಿ ಆಸೆ ತೊರಿಸಿ ಹಣ ಪೀಕುತ್ತಿದ್ದ ಕತ್ರನಾಕ್ ದಂಪತಿ ಆರೋಪಿಗಳನ್ನು ಎಡೆಮುರಿಕಟ್ಟಿ ಬಂದಿಸಿ ಕಂಬಿ ಹಿಂದೆ ಕಳಿಸಲು ಚಳ್ಳಕೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಳ್ಳಕೆರೆ ನಗರದ ಆಶ್ವಿನಿ ಹೊಟೇಲ್‌ನ ಮಾಲೀಕರಾದ ಶಂಕರಪ್ಪ ಇವರ ಹೊಟೇಲ್‌ಗೆ ದಿನಾಂಕ 23-5-2021ರಂದು ಊಟಕ್ಕೆ ಬಂದಿದ್ದಾಗ ಇದ್ದಕ್ಕಿಂತ ದೇವರ ಮೈಮೇಲೆ ಬಂದಂಗೆ ಹೈಡ್ರಾಮವಾಡಿ ನಿಮಗೆ ನಿಧಿ ಸಿಗುತ್ತದೆ ಅದನ್ನು ಪಡೆಯದಿದ್ದರೆ ನಿಮ್ಮ ಮಗನಿಗಾಗಲಿ ಅಥವಾ ನಿಮಗೆ ಮರಣ ಬರುತ್ತದೆ ಎಂದು ಬೀತಿ ಹುಟ್ಟಿಸಿ 21 ದಿನ ಪೂಜೆ ಮಾಡಿದರೆ ಸಾವು ಬರುವುದಿಲ್ಲ ಎಂದು ಬೀತಿ ಹುಟ್ಟಿಸಿ ಪೂಜೆ ಹೆಸರಿನಲ್ಲಿ ದಿನಕ್ಕೆ 10 ಸಾವಿರ ರೂ ನಂತೆ ಒಟ್ಟು 1.80 ಲಕ್ಷ ರೂಗಳನ್ನು ನೀಡಿರುತ್ತಾರೆ.
ವಜ್ರ ಹರಳುಗಳು ಸಿಕ್ಕಿರುತ್ತವೆ. ಅದನ್ನು ಮಾರಟ ಮಾಡಬೇಕು ಹಾಗೂ ಹರಳುಗಳನ್ನು ಜೋಡಿಸಲು ಬಂಗಾರ ಕೊಡಿ ಎಂದು ಹೇಳಿ ಪಿರಾದಿಯವರ ಕಡೆಯಿಂದ 15 ಗ್ರಾಂ, ಬಂಗಾರ, 10ತೊಲ ಬೆಳ್ಳಿ, ವಿವೋ ಕಂಪನಿಯ ಮೊಬೈಲ್‌ನ್ನು ಪಡೆದುಕೊಂಡು ಹೋಗುತ್ತಾರೆ,
ನಂತರ ಪೂಜೆ ಮಾಡಬೇಕೆಂದು ಹೇಳಿ ಹಂತ ಹಂತವಾಗಿ 1.43ಲಕ್ಷ ರೂಪಾಯಿಗಳನ್ನು ಪಡೆದು ಲಾಭ ಪಡೆಯಬೇಕೆಂಬ ದುರುದ್ದೇಶದಿಂದ ನಿಧಿ ದೊರೆಯುತ್ತದೆ ಎಂದು ಸುಳ್ಳು ಹೇಳಿ ನಮ್ಮಿಂದ ಬಂಗಾರ, ಬೆಳ್ಳಿ ಆಭರಣಗಳನ್ನು ಹಾಗೂ ನಗದನ್ನು ಪಡೆದು ನಂಬಿಕೆ ದ್ರೋಹ ಮಾಡಿರುತ್ತಾರೆ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ನೀಡಿದ ದೂರಿನ ಮೇರೆಗೆ
ಚಳ್ಳಕೆರೆ ಪೊಲೀಸ್ ಠಾಣೆ ಮೊ.ನಂ.170/2022ಕಲಂ.420,417ರೆ/ವಿ34 ಐ.ಪಿ.ಸಿ. ರೀತ್ಯ ಪ್ರಕರಣ ದಾಖಲಾಗಿರುತ್ತದೆ.

ಸದರಿ ಪ್ರಕರಣದಲ್ಲಿ ಆರೋಪಿತರನ್ನು ಪತ್ತೆ ಮಾಡಲು ಎಸ್ಪಿ ಪರಶುರಾಮ್.ಕೆ, ಐ.ಪಿ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಹ.ಕುಮಾರಸ್ವಾಮಿ . ಚಳ್ಳಕೆರೆ ಉಪಾಧೀಕ್ಷಕ ರಮೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಚಳ್ಳಕೆರೆ ಠಾಣೆಯ
ನಿರೀಕ್ಷಕ ಆರ್.ಎಫ್ ದೇಸಾಯಿರವರ ನೇತೃತ್ವದಲ್ಲಿ ಚಳ್ಳಕೆರೆ ಪೊಲೀಸ್ ಠಾಣೆ ಮಪಿಎಸ್‌ಐ ರವರಾದ ಪ್ರಮೀಳಮ್ಮ ಹಾಗೂ ಸಿಬ್ಬಂದಿಯವರಾದ ಹಾಲೇಶ್, ಗುಮ್ಮ, ಶಿವರಾಜ್, ಶ್ರೀಧರ, ವಸಂತ, ಧರಣ್ಣವರ್, ರವರನ್ನೊಳಗೊಂಡ
ತAಡವನ್ನು ರಚಿಸಿದ್ದು, ಸದರಿ ತಂಡದವರು ಪ್ರಕರಣದ ಆರೋಪಿಯಾದ
ಎ-1 ಮುದ್ದುರಂಗಪ್ಪ ಹವಾಲ್ದಾರ್ ತಂದ ಕೃಷ್ಣಷ್ಟ ಹವಾಲ್ದಾರ್, 53 ವರ್ಷ, ಚೌಡೇಶ್ವರಿ ಹಾಳ ಗ್ರಾಮ, ಸುರಪುರ, ಶಹಾಪುರ
ತಾಲ್ಲೂಕು ಯಾದಗಿರಿ ಜಿಲ್ಲೆ. ಹಾಲಿ ವಾಸ ಮದಕರಿಪುರ ಗ್ರಾಮ, ಚಿತ್ರದುರ್ಗ ತಾಲ್ಲೂಕು
ಎ-2 ಮಧುಮತಿ ಗಂಡ ಮುದ್ದುರಂಗಪ್ಪ ಹವಾಲ್ದಾರ್, 38ವರ್ಷ, ಚೌಡೇಶ್ವರಿ ಹಾಳ ಗ್ರಾಮ, ಸುರಪುರ, ಶಹಾಪುರ ತಾಲ್ಲೂಕು
ಯಾದಗಿರಿ ಚಿಲ್ಲ, ಹಾಲಿ ವಾಸ ಮದಕರಿಪುರ ಗ್ರಾಮ, ಚಿತ್ರದುರ್ಗ ತಾಲ್ಲೂಕು ರವರನ್ನು ವಶಕ್ಕೆ ಪಡೆದು ಸದರಿ ಆರೋಪಿತರಿಂದ
10 ಗ್ರಾಂ ತೂಕದ ಬಂಗಾರದ ಕೊರಳು ಸರ, ಸುಮಾರು 55,೦೦೦/- ರೂ ಮೌಲ್ಯ, 71 ಗ್ರಾಂ ತೂಕದ ಬೆಳ್ಳಿಯ ಕಾಲು ಚೈನ್,
ಸುಮಾರು 3000/- ಮೌಲ್ಯ, ಹಾಗೂ 1 ಲಕ್ಷ ರೂ- ನಗದು ಹಣ, ಹಾಗೂ 1.40 ಲಕ್ಷ ರೂ- ರೂ ಬೆಲೆಯ ಕೆಎ33 ಎಂ-1711
ನAಬರಿನ ವಾಟ ಇಂಡಿಕಾ ವಿನ್ಯಾ ಕಾರ್ ಒಟ್ಟು 2.98 ಲಕ್ಷ ರೂಪಾಯಿ ಬೆಲೆಬಾಳುವ ಮೇಲ್ಕಂಡವುಗಳನ್ನು ಅಮಾನತ್ತು
ಪಡಿಸಿಕೊಂಡಿರುತ್ತದೆ.
ಸದರಿ ಪತ್ತೆ ಕಾರ್ಯವನ್ನು ಪೊಲೀಸ್ ಅಧೀಕ್ಷಕರು, ಚಿತ್ರದುರ್ಗ ಜಿಲ್ಲೆರವರು ಶ್ಲಾಘಿಸಿರುತ್ತಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page