ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಮೊದಲನೇ ರಾಂಕ್ ಪಡೆದಿರುವ ವಿದ್ಯಾರ್ಥಿನಿ ಧಾತ್ರಿ ಎಸ್. ಅವರನ್ನು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರ ಶಾಸಕ ಡಾ. ಸಿ ಎನ್ ಅಶ್ವತ್ಥನಾರಾಯಣ ಬುಧವಾರ ಸನ್ಮಾನಿಸಿದರು.
ಒಟ್ಟು 600 ಕ್ಕೆ 597 ಅಂಕ ಪಡೆದಿರುವ ಈಕೆ ಮಲ್ಲೇಶ್ವರದ ವಿದ್ಯಾಮಂದಿರ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ. ಮರು ಮೌಲ್ಯಮಾಪನದಲ್ಲಿ ಅಂಕಗಳು ಹೆಚ್ಚಾದ ಮೇಲೆ ಈಕೆ ರಾಜ್ಯಕ್ಕೆ ಮೊದಲ ರಾಂಕ್ ಪಡೆದಿದ್ದಾರೆ.
ವಿದ್ಯಾರ್ಥಿನಿ ಮತ್ತು ಅವರ ಪೋಷಕರನ್ನು ಶಾಸಕರು ಅಭಿನಂದಿಸಿದರು. ಆಕೆಗೆ ಪೇಟಾ ತೊಡಿಸಿ ಸನ್ಮಾನಿಸಿದರು. ಜೊತೆಗೆ, ವಿದ್ಯಾರ್ಥಿನಿಗೆ ಮತ್ತು ಆಕೆಯ ಪೋಷಕರಿಗೆ ಸಿಹಿಯನ್ನೂ ಕೊಟ್ಟರು.
ಇದೆ ವೇಳೆ ಶಾಸಕರು ವಿದ್ಯಾರ್ಥಿನಿಯ ಮುಂದಿನ ವ್ಯಾಸಂಗಕ್ಕೆ ಶುಭ ಹಾರೈಸಿದರು. ಸರ್ವಾಂಗೀಣ ವಿಕಸನಕ್ಕೆ ಒತ್ತು ಕೊಡುವಂತೆ ವಿದ್ಯಾರ್ಥಿನಿಗೆ ಕಿವಿಮಾತು ಹೇಳಿದರು.
ವಿದ್ಯಾಮಂದಿರ ಶಾಲೆಯ ಕಾರ್ಯದರ್ಶಿ ಬಾಬು ಸೇರಿದಂತೆ ಇತರರು ಇದ್ದರು.
0 Comments