ಚಳ್ಳಕೆರೆ ಜನಧ್ವನಿ ವಾರ್ತೆ ಜೂ.1 ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್ಗಳಿಗೆ ಚುನಾವಣೆ ಘೋಷಣೆಗೆ ಚುನಾವಣಾ ಆಯೋಗ ಸಿದ್ಧತೆ ಆರಂಭಿಸಿದೆ.
ಯಾವುದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳು ಘೋಷಣೆಯಾಗುವ ಸಾಧ್ಯತೆ ಇದ್ದು ಮತದಾರರ ಪಟ್ಟಿ ಸಿದ್ಧತೆ, ಮತದಾನ ಕೇಂದ್ರಗಳ ಸ್ಥಾಪನೆ ಸಂಬAಧ ಕಾರ್ಯಪ್ರವೃತ್ತರಾಗುವಂತೆ ತಶೀಲ್ದಾರ್ ಹಾಗೂ ತಾಪಂ ಇಒಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ಸೂಚನೆ ನೀಡಲಾಗಿದೆ.
ಈ ಸಂಬಂಧ ಚುನಾವಣೆ ಆಯೋಗದಿಂದ ಸುತ್ತೋಲೆ ಹೊರಡಿಸಲಾಗಿದ್ದು, ಮೇ 29 ರಿಂದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕ್ಷೇತ್ರದ ಮತದಾರರನ್ನು ಗುರುತಿಸುವ ಕಾರ್ಯ ಆರಂಭಿಸಲು ತಿಳಿಸಲಾಗಿದ್ದು,ಜೂನ್ 4 ರವರೆಗೆ ಈ ಕಾರ್ಯ ನಡೆಯಲಿದೆ.
![](https://janadhwani.in/wp-content/uploads/2023/06/IMG-20230601-WA0302-2-746x1024.jpg)
![](https://janadhwani.in/wp-content/uploads/2023/06/IMG-20230601-WA0308-3-727x1024.jpg)
ಜೂನ್ 5 ರಿಂದ 13 ರವರೆಗೆ ಮತದಾರರ ಪಟ್ಟಿ ಪರಿಶೀಲನೆ ಕಾರ್ಯ ನಡೆಯಲಿದ್ದು, ಜೂನ್ 14 ರಿಂದ ಕರಡು ಮತದಾರರ ಪಟ್ಟಿ ಪ್ರಕಟಣೆ,ಜೂನ್ 22 ರಂದು ಆಕ್ಷೇಪಣೆ ಸಲ್ಲಿಸಲು ಅಂತಿಮ ದಿನವಾಗಿದೆ. ಮತ್ತೊಮ್ಮೆ ಪರಿಶೀಲನೆ ಕಾರ್ಯ ಜೂನ್ 25ರಂದು ನಡೆಸಲಾಗುವುದು. ಜೂನ್ 27 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಅದೇ ರೀತಿ ಗ್ರಾಮಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಎರಡನೇ ಅವಧಿಯ ಮೀಸಲಾತಿ ನಿಗಧಿ ಪಡಿಸಲು ದಿನಾಂಕವನ್ನು ತಿಳಿಸಲಾಗುವುದು ಎಂದು ತಿಳಿಸಿದರು.
ಚುನಾವಣೆ ಆಯೋಗದ ಮಾರ್ಗದರ್ಶನಗಳನ್ನು ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.
ತಾಲೂಕು ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ತಾಪಂ ಇಒ ಹೊನ್ನಯ್ಯ, ತಾಪಂವ್ಯವಸ್ಥಾಪಕ ಇರ್ಪಾನ್ ಹಾಗೂ ಚುನಾವಣೆ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
0 Comments