ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ

by | 15/09/23 | ಕಾನೂನು

ಚಳ್ಳಕೆರೆ ಸೆ.15ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ನಗರದ ಹೆಚ್.ಪಿ.ಪಿ.ಸಿ. ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಿಧಾನ ಪೀಠಿಕೆಯನ್ನು ಓದಿ ಕಾರ್ಯಕ್ರಮದಲ್ಲಿ ಸಮಾತನಾಡಿದರು. ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಸಹ ಇಂದಿಗೂ ಬಡತನ ಅನಕ್ಷರತೆ ಅಸ್ಪೃಶ್ಯತೆ ದಬ್ಬಾಳಿಕೆ ದೇಶದಲ್ಲಿ ಕಡಿಮೆಯಾಗಿಲ್ಲ ಇಂತಹ ಅನಿಷ್ಟ ಪದ್ದತಿಗಳು ನಿಲ್ಲಬೇಕಾದರೆ ಶಿಕ್ಷಣವೊಂದೇ ಮೂಲ ಮಂತ್ರವಾಗಬೇಕು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ದೇಶದ ಅಭಿವೃದ್ಧಿಗೆ ಮುಂದಾಗಬೇಕು ಡಾ‌. ಬಿ ಆರ್ ಅಂಬೇಡ್ಕರ್ ಅವರ ಸಂವಿಧಾನವನ್ನು ದೇಶವು ಸರ್ವಾನು ಮತದಿಂದ ಒಪ್ಪಿದ್ದು ಈ ಸಂವಿಧಾನ ಎಲ್ಲಾ ಕಾಲಕ್ಕೂ ಸಲ್ಲುವಂತದ್ದಾಗಿದ್ದು ಇತರೆ ದೇಶಗಳು ಸಹ ಈ ಸಂವಿಧಾನವನ್ನು ಮಾದರಿಯಾಗಿಟ್ಟುಕೊಂಡು ತಮ್ಮ ದೇಶದ ಸಂವಿಧಾನಗಳನ್ನು ರಚಿಸಿಕೊಳ್ಳುವಷ್ಟರ ಮಟ್ಟಿಗೆ ಮಾದರಿಯಾಗಿದೆ ನಾವೆಲ್ಲರೂ ಸಂವಿಧಾನದ ಆಶಯಗಳಿಗೆ ಧಕ್ಕೆ ಬಾರದಂತೆ ಅದರಲ್ಲಿನ ಸತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಾರ್ಥಕ ಜೀವನ ನಡೆಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ‌. ಆರ್ ರಂಗಪ್ಪ ಮಾತನಾಡಿ ಸಂವಿಧಾನ ರಚನೆಯಲ್ಲಿ ಯಾವುದೇ ನ್ಯೂನ್ಯತೆಗಳಿಲ್ಲ ಪ್ರತಿಯೊಬ್ಬ ವ್ಯಕ್ತಿಗೂ ಜಾತಿ ಸಮುದಾಯಕ್ಕೂ ಸಮಾನವಾದ ಹಕ್ಕುಗಳನ್ನು ನೀಡಿದೆ ಆದರೆ ಆಳುವ ಸರ್ಕಾರಗಳು ಸಂವಿಧಾನವನ್ನು ತನ್ನ ಸ್ವಾರ್ಥಕ್ಕಾಗಿ ಬದಲಾಯಿಸಲು ಹೊರಟಿವೆ ಅಂಬೇಡ್ಕರ್ ಅವರ ಆಶಯದಂತೆ ಸಂದರ್ಭಕ್ಕೆ ತಕ್ಕಂತೆ ಬದಲಾಯಿಸುವ ಅವಕಾಶವಿದ್ದರೂ ತಮ್ಮ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಪಕ್ಷಗಳು ಬದಲಾವಣೆ ಮಾಡಿಲ್ಲ ದೇಶದ ಎಲ್ಲಾ ನಾಗರಿಕರು ಸಂವಿಧಾನಕ್ಕೆ ಗೌರವ ನೀಡಬೇಕಾಗಿರುವುದು ನಮ್ಮ ಕರ್ತವ್ಯವಾಗಿರುವುದರಿಂದ ಸಂವಿಧಾನದ ಪೀಠಿಕೆಯ ಆಶಯಗಳಿಗೆ ಧಕ್ಕೆ ಬಾರದಂತೆ ನಡೆದುಕೊಂಡು ಗೌರವ ಸೂಚಿಸೋಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವೀರಯ್ಯ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ಶ್ರೀ ರೇಹಾನ್ ಪಾಷಾ, ಪೌರಾಯುಕ್ತರಾದ ಶ್ರೀ ಚಂದ್ರಪ್ಪ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಹೊನ್ನೇಶ್, ಡಿ.ವೈ.ಎಸ್.ಪಿ. ಶ್ರೀ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸುರೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಶ್ರೀ ದಿವಾಕರ, ನಗರಸಭೆ ಸದಸ್ಯರಾದ ಶ್ರೀ ರಾಘವೇಂದ್ರ, ಶ್ರೀ ರಮೇಶ್ ಗೌಡ, ಶ್ರೀಮತಿ ಕವಿತಾ ಬೋರಯ್ಯ, ಶ್ರೀಮತಿ ಸುಮಾ ಭರಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ವೀರಭದ್ರಪ್ಪ, ಮುಖಂಡರಾದ ಶ್ರೀ ಪ್ರಕಾಶ್, ಶ್ರೀ ಪ್ರಹ್ಲಾದ್, ಶ್ರೀ ವೀರಭದ್ರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಕಾಲೇಜು ಸಿಬ್ಬಂದಿ ವರ್ಗದವರು , ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page