ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಬೆಸ್ಕಾಂ ಇಂಜಿನಿಯರ್ 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯಪಡೆ ಇಂಜಿನಿಯರ್ ಬಿ.ಎಂ.ಕರಿಬಸವಯ್ಯ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಕಡತ ವಿಲೇವಾರಿಗಾಗಿ ಕೆಇಬಿ ಗುತ್ತಿಗೆದಾರ ಬೇವಿನಹಳ್ಳಿ ಮಹೇಶ್ವರಪ್ಪ ಅವರ ಬಳಿ ಕರಿಬಸವಯ್ಯ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈಗಾಗಲೇ 9 ಸಾವಿರ ರೂಪಾಯಿ ಪಡೆದುಕೊಂಡಿದ್ದ ಕರಿಬಸವಯ್ಯ, ಇಂದು ಬೆಸ್ಕಾಂ ಕಚೇರಿಯಲ್ಲಿ ಬಾಕಿ 6 ಸಾವಿರ ರೂಪಾಯಿ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಕೌಲಾಪುರೆ ದಾಳಿ ನಡೆಸಿದ್ದಾರೆ. ಕರಿಬಸವಯ್ಯ ಅವರನ್ನು ವಶಕ್ಕೆ ಪಡೆದಿದು ವಿಚಾರಣೆ ನಡೆಸುತ್ತಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments