ಕಡತ ನಾಪತ್ತೆ ಕರ್ತವ್ಯಲೋಪದಡಿಯಲ್ಲಿ ಧಾರ್ಮಿಕ ದತ್ತಿ ತಹಶೀಲ್ದಾರ್ ವೆಂಕಟೇಶ್ ಹಾಗೂ ದ್ವಿತೀಯ ದರ್ಜೆ ಸಹಾಯಕನ ಮೇಲೆ ಪ್ರಕರಣ ದಾಖಲು.

by | 12/10/23 | ಕ್ರೈಂ

ಚಿತ್ರದುರ್ಗ ಅ.12.: ಚಳ್ಳಕೆರೆ ತಾಲ್ಲೂಕು
ಗೌರಸಮುದ್ರ ಮಾರಮ್ಮದೇವಾಲಯಕ್ಕೆ
ಸಂಬಂಧಿಸಿದಂತೆ ಪ್ರಕರಣದ ಕಡತ ಹಾಗೂ
ಕರ್ನಾಟಕ ಹೈಕೋರ್ಟ್ ಪ್ರಕರಣಕ್ಕೆ
ಸಂಬಂಧಿಸಿದ ಕಡತವನ್ನು ನ್ಯಾಯಾಲಯದ
ವಿಚಾರಣೆಗೆ ಮಂಡಿಸದೆ ಕರ್ತವ್ಯ ಲೋಪ
ಎಸಗಿರುವ ಆರೋಪದಡಿ ಧಾರ್ಮಿಕ ದತ್ತಿ
ಇಲಾಖೆಯ ತಹಶೀಲ್ದಾರ್ ಹಾಗೂ ದ್ವಿತೀಯ
ದರ್ಜೆ ಸಹಾಯಕರ ವಿರುದ್ಧ ಚಿತ್ರದುರ್ಗ ನಗರ
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. .ಜಿಲ್ಲಾಧಿಕಾರಿ ಕಚೇರಿ ಮುಜರಾಯಿ ಶಾಖೆಯ
ಧಾರ್ಮಿಕ ದತ್ತಿ ತಹಶೀಲ್ದಾರ್ಬಿ.ಎಸ್.ವೆಂಕಟೇಶ್ ಹಾಗೂ ದ್ವಿತೀಯ ದರ್ಜೆಸಹಾಯಕ ವೀರಭದ್ರಪ್ಪ ವಿರುದ್ಧ ಅಕ್ಟೋಬರ್ 11 ರಂದು ಚಿತ್ರದುರ್ಗ ನಗರ ಪೊಲೀಸ್ಠಾ‌ ಣೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಪತ್ರಾಂಕಿತ ಸಹಾಯಕರಾದ ಸಂತೋಷ್ ಕುಮಾರ್ ಜಿ.
ನೀಡಿದ ದೂರಿಗೆ ಅನುಗುಣವಾಗಿ ಎಫ್‌ಐಆರ್
ದಾಖಲಾಗಿದೆ.

ಗೌರಸಮುದ್ರ ಮಾರಮ್ಮ ದೇವಾಲಯದ
ಪ್ರಕರಣದ ಕಡತ ಹಾಗೂ ಕರ್ನಾಟಕ ಉಚ್ಚ
ನ್ಯಾಯಾಲಯದ ಪ್ರಕರಣದ ಕಡತವು
ಜಿಲ್ಲಾಧಿಕಾರಿ ಕಚೇರಿ ಮುಜರಾಯಿ ಶಾಖೆಯ
ಧಾರ್ಮಿಕ ದತ್ತಿ ತಹಶೀಲ್ದಾರ್
ಕಚೇರಿಯಲ್ಲಿರುತ್ತದೆ. ಇವರು ಕಡತವನ್ನು
2023ರ ಸೆಪ್ಟೆಂಬರ್ 08 ರಂದು ಹಾಗೂ
ಸೆಪ್ಟೆಂಬರ್ 27 ರಂದು ಜಿಲ್ಲಾಧಿಕಾರಿಗಳ
ನ್ಯಾಯಾಲಯದ ವಿಚಾರಣೆಗೆವ್ಯಯ
ಹಾಜರುಪಡಿಸಿರುವುದಿಲ್ಲ.
ನ್ಯಾಯಾಲಯದ ವಿಚಾರಣೆಗೆ ಕಡತವನ್ನು ಹಾಜರು
ಪಡಿಸದ ಕಾರಣ 2023ರ ಸೆಪ್ಟೆಂಬರ್ 30 ರಂದು
ಜಿಲ್ಲಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಅನ್ನು
ಜಾರಿ ಮಾಡಿದ್ದರು. ಅದಕ್ಕೆ ಅಧಿಕಾರಿಗಳು ಹಾಗೂ
ಸಿಬ್ಬಂದಿಯು ಮುಂದಿನ ವಿಚಾರಣೆ ಒಳಗಾಗಿ
ಕತಡವನ್ನು ಹಾಜರುಪಡಿಸುತ್ತೇವೆ ಎಂಬುದಾಗಿ
ಉತ್ತರ ನೀಡಿದ್ದರು.
ಪ್ರಕರಣವು 2023ರ ಅಕ್ಟೋಬರ್ 11ರಂದು
ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ
ನಿಗದಿಯಾಗಿ, ಅಧಿಕಾರಿ, ಸಿಬ್ಬಂದಿ ಕಡತವನ್ನು
ನ್ಯಾಯಾಲಯಕ್ಕೆ ಸಲ್ಲಿಸಿರುವುದಿಲ್ಲ. ವಾದಿಗಳ ಪರ
ವಕೀಲರು ವಕಾಲತನ್ನು ವಹಿಸಿದ್ದು ವಕೀಲರು
ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು,
ಆದರೆ, ನ್ಯಾಯಾಲಯದ ಬೆಂಚ್ ಕ್ಲರ್ಕ್ ಅವರು
ನ್ಯಾಯಾಲಯದಲ್ಲಿ ಕಡತ ಸಲ್ಲಿಸಿಲ್ಲ ಎಂಬುದಾಗಿ
ತಿಳಿಸಿದ್ದು, ಜಿಲ್ಲಾಧಿಕಾರಿಗಳು ಸಿಬ್ಬಂದಿಗೆ ಕಡತದ
ಬಗ್ಗೆ ವಿಚಾರಣೆ ಮಾಡಲಾಗಿ ಸಿಬ್ಬಂದಿಯವರು
ಕಡತವು ಕಳೆದುಹೋಗಿರುತ್ತದೆ ಎಂದು
ತಿಳಿಸಿರುತ್ತಾರೆ.ಸಿಬ್ಬಂದಿಯವರು ನ್ಯಾಯಾಲಯದ ವಿಚಾರಣೆ ದಿನ
ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಗೌರಸಮುದ್ರ
ಮಾರಮ್ಮದೇವಾಲಯದ ಪ್ರಕರಣದ ಕಡತ
ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ
ಪ್ರಕರಣದ ಕಡತವನ್ನು ಹಾಜರುಪಡಿಸಿ, ಪ್ರಕರಣದ
ಸಂಬಂಧ ವಾಸ್ತವಾಂಶದ ವರದಿಯನ್ನು
ನ್ಯಾಯಾಲಯಕ್ಕೆ ಸಲ್ಲಿಸುವುದು ಸಿಬ್ಬಂದಿಯ
ಕರ್ತವ್ಯವಾಗಿದ್ದು, ನ್ಯಾಯಾಲಯಕ್ಕೆ ಕಡತ
ಹಾಜರುಪಡಿಸದೇ, ತಮ್ಮ ಸುಪರ್ದಿಯಲ್ಲಿದ್ದ
ಕಡತವನ್ನು ಕಳೆದು ಹಾಕಿ, ಪಕ್ಷಗಾರರ,
ನ್ಯಾಯವಾದಿಗಳಿಗೆ ತೊಂದರೆಯನ್ನುಂಟು ಮಾಡಿ,
ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷತನ ಮತ್ತು
ಬೇಜವಾಬ್ದಾರಿತನ ತೋರಿರುವುದು
ಅಪರಾಧವಾಗಿರುವುದರಿಂದ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page