ಚಿತ್ರದುರ್ಗ ಅ.12.: ಚಳ್ಳಕೆರೆ ತಾಲ್ಲೂಕು
ಗೌರಸಮುದ್ರ ಮಾರಮ್ಮದೇವಾಲಯಕ್ಕೆ
ಸಂಬಂಧಿಸಿದಂತೆ ಪ್ರಕರಣದ ಕಡತ ಹಾಗೂ
ಕರ್ನಾಟಕ ಹೈಕೋರ್ಟ್ ಪ್ರಕರಣಕ್ಕೆ
ಸಂಬಂಧಿಸಿದ ಕಡತವನ್ನು ನ್ಯಾಯಾಲಯದ
ವಿಚಾರಣೆಗೆ ಮಂಡಿಸದೆ ಕರ್ತವ್ಯ ಲೋಪ
ಎಸಗಿರುವ ಆರೋಪದಡಿ ಧಾರ್ಮಿಕ ದತ್ತಿ
ಇಲಾಖೆಯ ತಹಶೀಲ್ದಾರ್ ಹಾಗೂ ದ್ವಿತೀಯ
ದರ್ಜೆ ಸಹಾಯಕರ ವಿರುದ್ಧ ಚಿತ್ರದುರ್ಗ ನಗರ
ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. .ಜಿಲ್ಲಾಧಿಕಾರಿ ಕಚೇರಿ ಮುಜರಾಯಿ ಶಾಖೆಯ
ಧಾರ್ಮಿಕ ದತ್ತಿ ತಹಶೀಲ್ದಾರ್ಬಿ.ಎಸ್.ವೆಂಕಟೇಶ್ ಹಾಗೂ ದ್ವಿತೀಯ ದರ್ಜೆಸಹಾಯಕ ವೀರಭದ್ರಪ್ಪ ವಿರುದ್ಧ ಅಕ್ಟೋಬರ್ 11 ರಂದು ಚಿತ್ರದುರ್ಗ ನಗರ ಪೊಲೀಸ್ಠಾ ಣೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಪತ್ರಾಂಕಿತ ಸಹಾಯಕರಾದ ಸಂತೋಷ್ ಕುಮಾರ್ ಜಿ.
ನೀಡಿದ ದೂರಿಗೆ ಅನುಗುಣವಾಗಿ ಎಫ್ಐಆರ್
ದಾಖಲಾಗಿದೆ.
ಗೌರಸಮುದ್ರ ಮಾರಮ್ಮ ದೇವಾಲಯದ
ಪ್ರಕರಣದ ಕಡತ ಹಾಗೂ ಕರ್ನಾಟಕ ಉಚ್ಚ
ನ್ಯಾಯಾಲಯದ ಪ್ರಕರಣದ ಕಡತವು
ಜಿಲ್ಲಾಧಿಕಾರಿ ಕಚೇರಿ ಮುಜರಾಯಿ ಶಾಖೆಯ
ಧಾರ್ಮಿಕ ದತ್ತಿ ತಹಶೀಲ್ದಾರ್
ಕಚೇರಿಯಲ್ಲಿರುತ್ತದೆ. ಇವರು ಕಡತವನ್ನು
2023ರ ಸೆಪ್ಟೆಂಬರ್ 08 ರಂದು ಹಾಗೂ
ಸೆಪ್ಟೆಂಬರ್ 27 ರಂದು ಜಿಲ್ಲಾಧಿಕಾರಿಗಳ
ನ್ಯಾಯಾಲಯದ ವಿಚಾರಣೆಗೆವ್ಯಯ
ಹಾಜರುಪಡಿಸಿರುವುದಿಲ್ಲ.
ನ್ಯಾಯಾಲಯದ ವಿಚಾರಣೆಗೆ ಕಡತವನ್ನು ಹಾಜರು
ಪಡಿಸದ ಕಾರಣ 2023ರ ಸೆಪ್ಟೆಂಬರ್ 30 ರಂದು
ಜಿಲ್ಲಾಧಿಕಾರಿಗಳು ಕಾರಣ ಕೇಳಿ ನೋಟೀಸ್ ಅನ್ನು
ಜಾರಿ ಮಾಡಿದ್ದರು. ಅದಕ್ಕೆ ಅಧಿಕಾರಿಗಳು ಹಾಗೂ
ಸಿಬ್ಬಂದಿಯು ಮುಂದಿನ ವಿಚಾರಣೆ ಒಳಗಾಗಿ
ಕತಡವನ್ನು ಹಾಜರುಪಡಿಸುತ್ತೇವೆ ಎಂಬುದಾಗಿ
ಉತ್ತರ ನೀಡಿದ್ದರು.
ಪ್ರಕರಣವು 2023ರ ಅಕ್ಟೋಬರ್ 11ರಂದು
ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ
ನಿಗದಿಯಾಗಿ, ಅಧಿಕಾರಿ, ಸಿಬ್ಬಂದಿ ಕಡತವನ್ನು
ನ್ಯಾಯಾಲಯಕ್ಕೆ ಸಲ್ಲಿಸಿರುವುದಿಲ್ಲ. ವಾದಿಗಳ ಪರ
ವಕೀಲರು ವಕಾಲತನ್ನು ವಹಿಸಿದ್ದು ವಕೀಲರು
ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು,
ಆದರೆ, ನ್ಯಾಯಾಲಯದ ಬೆಂಚ್ ಕ್ಲರ್ಕ್ ಅವರು
ನ್ಯಾಯಾಲಯದಲ್ಲಿ ಕಡತ ಸಲ್ಲಿಸಿಲ್ಲ ಎಂಬುದಾಗಿ
ತಿಳಿಸಿದ್ದು, ಜಿಲ್ಲಾಧಿಕಾರಿಗಳು ಸಿಬ್ಬಂದಿಗೆ ಕಡತದ
ಬಗ್ಗೆ ವಿಚಾರಣೆ ಮಾಡಲಾಗಿ ಸಿಬ್ಬಂದಿಯವರು
ಕಡತವು ಕಳೆದುಹೋಗಿರುತ್ತದೆ ಎಂದು
ತಿಳಿಸಿರುತ್ತಾರೆ.ಸಿಬ್ಬಂದಿಯವರು ನ್ಯಾಯಾಲಯದ ವಿಚಾರಣೆ ದಿನ
ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಗೌರಸಮುದ್ರ
ಮಾರಮ್ಮದೇವಾಲಯದ ಪ್ರಕರಣದ ಕಡತ
ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ
ಪ್ರಕರಣದ ಕಡತವನ್ನು ಹಾಜರುಪಡಿಸಿ, ಪ್ರಕರಣದ
ಸಂಬಂಧ ವಾಸ್ತವಾಂಶದ ವರದಿಯನ್ನು
ನ್ಯಾಯಾಲಯಕ್ಕೆ ಸಲ್ಲಿಸುವುದು ಸಿಬ್ಬಂದಿಯ
ಕರ್ತವ್ಯವಾಗಿದ್ದು, ನ್ಯಾಯಾಲಯಕ್ಕೆ ಕಡತ
ಹಾಜರುಪಡಿಸದೇ, ತಮ್ಮ ಸುಪರ್ದಿಯಲ್ಲಿದ್ದ
ಕಡತವನ್ನು ಕಳೆದು ಹಾಕಿ, ಪಕ್ಷಗಾರರ,
ನ್ಯಾಯವಾದಿಗಳಿಗೆ ತೊಂದರೆಯನ್ನುಂಟು ಮಾಡಿ,
ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷತನ ಮತ್ತು
ಬೇಜವಾಬ್ದಾರಿತನ ತೋರಿರುವುದು
ಅಪರಾಧವಾಗಿರುವುದರಿಂದ ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡತ ನಾಪತ್ತೆ ಕರ್ತವ್ಯಲೋಪದಡಿಯಲ್ಲಿ ಧಾರ್ಮಿಕ ದತ್ತಿ ತಹಶೀಲ್ದಾರ್ ವೆಂಕಟೇಶ್ ಹಾಗೂ ದ್ವಿತೀಯ ದರ್ಜೆ ಸಹಾಯಕನ ಮೇಲೆ ಪ್ರಕರಣ ದಾಖಲು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments