19 ವರ್ಷದೊಳಗಿನ ಮಕ್ಕಳಿಗೆ ಜಂತು ನಾಶಕ ಮಾತ್ರೆ ವಿತರಣೆ ಅಲೆಮಾರಿ ಕುಟುಂಬ ತಾಣಗಳಿಗೆ ಡಿ.ಹೆಚ್.ಓ ಭೇಟಿ

by | 15/03/23 | ಆರೋಗ್ಯ


ಚಿತ್ರದುರ್ಗ ಮಾ.15:
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಮಾಪ್ ಅಪ್ ರೌಂಡ್ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಅಲೆಮಾರಿ, ಅರೆ ಅಲೆಮಾರಿ, ಕಟ್ಟಡ ಕಾರ್ಮಿಕರು ವಾಸಿಸುವ ತಾಣಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್ ಬುಧವಾರ ಭೇಟಿ ನೀಡಿ, 19 ವರ್ಷದೊಳಗಿನ ಅಲೆಮಾರಿ ಮಕ್ಕಳಿಗೆ ಜಂತುನಾಶಕ ಮಾತ್ರೆ ವಿತರಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ನೀಡಿದ ಮಾರ್ಗದರ್ಶನಂತೆ ಈಗಾಗಲೇ ಜಿಲ್ಲೆಯಲ್ಲಿ ಅಲೆಮಾರಿ, ಸೇವಾವಂಚಿತ ಕಟ್ಟಡ ಕಾರ್ಮಿಕ ವಲಸೆ ಕುಟುಂಬದ ಮಕ್ಕಳಿಗೆ ಅವರ ತಾಣಗಳನ್ನು ತಲುಪಲು ದುಸ್ಥರ ಸ್ಥಳಗಳಲ್ಲಿ ವಾಸಿಸುವ ಕುಟುಂಬದ ಡೇರೆಗಳನ್ನು ಜಿಲ್ಲಾ ಕ್ರಿಯಾಯೋಜನೆಯಲ್ಲಿ ಗುರುತಿಸಲಾದ ತಾಣಗಳಿಗೆ ಭೇಟಿ ನೀಡಿ ಜಂತು ನಾಶಕ ಮಾತ್ರೆ ವಿತರಿಸಲಾಗಿದೆ ಎಂದರು.
ಚಿತ್ರದುರ್ಗ ನಗರದ ಸುತ್ತಮುತ್ತಲಿನ 6 ತಾಣಗಳು, ಕ್ಯಾಸಾಪುರ, ಮೆದೇಹಳ್ಳಿ ಹೊಲಗಳಲ್ಲಿ ಇದ್ದಿಲು ಸುಡಲು ಬಂದಿದ್ದ ಮಹಾರಾಷ್ಟ್ರ, ಆಂಧ್ರಪ್ರದೇಶದ ಅಲೆಮಾರಿ ಕುಟುಂಬದ ಮಕ್ಕಳಿಗೆ ಜಂತು ನಾಶಕ ಮಾತ್ರೆ ನುಂಗುವ ಮಹತ್ವ, ವೈಯುಕ್ತಿಕ ಸ್ವಚ್ಛತೆ ಕುರಿತು ತಿಳುವಳಿಕೆ ನೀಡಲಾಗಿದ್ದು, ಚಿತ್ರದುರ್ಗ ತಾಲ್ಲೂಕು ಹೊರತುಪಡಿಸಿ ಇನ್ನೂ ಉಳಿದ ಐದು ತಾಲ್ಲೂಕುಗಳಲ್ಲಿಯೂ ತಲಾ ಒಂದೊಂದು ತಾಣಗಳನ್ನು ಗುರುತಿಸಿ, ಅಲ್ಲಿರುವ ಅಲೆಮಾರಿ ಮಕ್ಕಳಿಗೆ ಜಂತುನಾಶಕ ಮಾತ್ರೆ ವಿತರಿಸಲು ಕ್ರಮಜರುಗಿಸಲಾಗಿದೆ ಎಂದು ತಿಳಿಸಿದರು.
ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಮಾತನಾಡಿ ತಾಲ್ಲೂಕಿನಲ್ಲಿ ಒಟ್ಟು 8 ಅಲೆಮಾರಿ ತಾಣಗಳನ್ನು, ಅಲ್ಲಿಯ ಒಟ್ಟು 360 ಮಕ್ಕಳನ್ನು ಗುರುತಿಲಾಗಿತ್ತು. ಅದರಂತೆ ಬುಧವಾರ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನದ ಮಾಪ್ ಅಪ್ ರೌಂಡ್ ಪ್ರಯುಕ್ತ ಈ ಎಲ್ಲಾ ತಾಣಗಳಲ್ಲಿ 360 ಮಕ್ಕಳಿಗೆ ಜಂತು ನಾಶಕ ಮಾತ್ರೆ ವಿತರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ್, ರಂಗಾರೆಡ್ಡಿ, ನವೀನ್, ಸಂದೀಪ್ ಇತರರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page