ಬೆಂಗಳೂರು ರಾಜ್ಯ ಸರ್ಕಾರದ ಸಂಪುಟ ಉಪಸಮಿತಿಯು 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಪ್ರಿಯಾಂಕಖರ್ಗೆ ತಿಳಿಸಿದ್ದಾರೆ
ಈ ಬರಪೀಡಿತ ತಾಲೂಕುಗಳ ನಿರ್ವಹಣೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ:
– ಕುಡಿಯುವ ನೀರಿನ ಪೂರೈಕೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು SDRF ಅನುದಾನವನ್ನೂ ಬಳಸಿಕೊಳ್ಳಲಾಗುವುದು.
– ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವುದಕ್ಕಾಗಿ, ಈಗಾಗಲೇ ಸರ್ಕಾರವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ₹492 ಕೋಟಿ ಅನುದಾನ ಒದಗಿಸಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ ₹400 ಕೋಟಿ ಹಣವನ್ನು ಮೀಸಲಿಡಲಾಗಿದೆ.
– ನಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ ಸಿಇಒ ಗಳಿಗೆ ಈಗಾಗಲೇ ₹1 ಕೋಟಿ ಅನುದಾನ ನೀಡಿದ್ದು, ಹೆಚ್ಚುವರಿಯಾಗಿ ಕಂಟೆಂಜೆನ್ಸಿ ಯೋಜನೆ ಅಡಿಯಲ್ಲಿ ₹7 ಕೋಟಿ ನೀಡಲಾಗಿದೆ.
– ಜಾನುವಾರುಗಳಿಗೆ ಮೇವು ಖರೀದಿಗಾಗಿ ಈಗಾಗಲೇ ₹20 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಮೇವು ಬೆಳೆಯುವುದಕ್ಕಾಗಿ ರೈತರಿಗೆ ಉಚಿತ ಬಿತ್ತನೆ ಬೀಜವನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.
– ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭತ್ತ ಮತ್ತು ಮೆಕ್ಕೆಜೋಳದ ಬೆಳೆಗಳನ್ನು ಖರೀದಿ ಮಾಡಿ ದಾಸ್ತಾನು ಮಾಡಲು ಕ್ರಮ ವಹಿಸಲಾಗಿದೆ.
– ಬರಪೀಡಿತ ತಾಲೂಕುಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕಡ್ಡಾಯವಾಗಿ ಕೆಲಸದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.
ಬರ ಪರಿಸ್ಥಿತಿಯಿಂದ ರಾಜ್ಯದ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಸರ್ಕಾರವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.
ರಾಜ್ಯವು ಈ ವರ್ಷ ಅತ್ಯಂತ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯ ಸರ್ಕಾರವು ಯಾವುದೇ ಸಂದರ್ಭವನ್ನು ಎದುರಿಸಲು ಸರ್ವ ರೀತಿಯಲ್ಲಿಯೂ ಸನ್ನದ್ಧವಾಗಿದೆ.
0 Comments