ರೆವೆನ್ಯು ಮತ್ತು ಅರಣ್ಯ ಭೂಮಿ ಗುರುತಿಸುವ ವಿಚಾರದಲ್ಲಿ ಆಗುತ್ತಿರುವ ತೊಂದರೆಗಳನ್ನು, ಗೊಂದಲಗಳನ್ನು ಪರಿಹರಿಸಲು ಎರಡೂ ಇಲಾಖೆಯ ಜಂಟಿ ಸರ್ವೆ ಮಾಡಿ ಜಿಲ್ಲಾಧಿಕಾರಿಗಳು ವರದಿ ನೀಡಬೇಕು. ಸಿ.ಎಂ.ಸಿದ್ದರಾಮಯ್ಯ.

by | 27/12/23 | ಸುದ್ದಿ

ಕೋಲಾರ ಡಿ.27 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ರೆವೆನ್ಯು ಮತ್ತು ಅರಣ್ಯ ಭೂಮಿ ಗುರುತಿಸುವ ವಿಚಾರದಲ್ಲಿ ಆಗುತ್ತಿರುವ ತೊಂದರೆಗಳನ್ನು, ಗೊಂದಲಗಳನ್ನು ಪರಿಹರಿಸಲು ಎರಡೂ ಇಲಾಖೆಯ ಜಂಟಿ ಸರ್ವೆ ಮಾಡಿ ಜಿಲ್ಲಾಧಿಕಾರಿಗಳು ವರದಿ ನೀಡಬೇಕು.
ಈ ಸಮಸ್ಯೆ ರಾಜ್ಯ ಮಟ್ಟದಲ್ಲೂ ಇರುವುದರಿಂದ ವಿಧಾನಸೌಧದಲ್ಲಿ ಪ್ರತ್ಯೇಕ ಉನ್ನತ ಮಟ್ಟದ ಸಭೆ ಕರೆಯುತ್ತೇನೆ. ಅಲ್ಲಿಯವರೆಗೂ ಜಿಲ್ಲೆಯಲ್ಲಿ ಅರಣ್ಯ ಭೂಮಿ ಒತ್ತುವರಿ ಎಂದು ಯಾರನ್ನೂ ತೆರವುಗೊಳಿಸಬಾರದು.

ಬರಗಾಲದ ಸಮಸ್ಯೆ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿದೆ? ಎಷ್ಟು ಗ್ರಾಮಗಳಲ್ಲಿ ಟ್ಯಾಂಕರ್ ನೀರು ನೀಡಲಾಗುತ್ತಿದೆ ಎಂಬ ಮಾಹಿತಿ ಒದಗಿಸಬೇಕು. ಇತರೆ ಯಾವುದೇ ನೀರಿನ ಮೂಲಗಳು ಇಲ್ಲದಿದ್ದಾಗ ಅಪರೂಪದ ಸಂದರ್ಭಗಳಲ್ಲಿ ಮಾತ್ರ ಬೋರ್ ವೆಲ್ ಕೊರೆಸಲು ಅವಕಾಶ ಮಾಡಿಕೊಳ್ಳಬಹುದು.

ಮಲದ ಗುಂಡಿಗೆ ಮಕ್ಕಳನ್ನು ಇಳಿಸಿ ಶುಚಿಗೊಳಿಸಿದ ಪ್ರಕರಣದಲ್ಲಿ ಮೂವರನ್ನು ಮಾತ್ರ ಜೈಲಿಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನೂ ಇಬ್ಬರು ಆರೋಪಿಗಳನ್ನು ಏಕೆ ಬಂಧಿಸಿಲ್ಲ? ಅವರನ್ನು ತಕ್ಷಣ ಬಂಧಿಸಬೇಕು. ಇದೊಂದು ಕ್ರೂರ ಕೃತ್ಯ. ಇಂತಹುದ್ದನ್ನು ನಾವು ಅಪ್ಪಿತಪ್ಪಿಯೂ ಸಹಿಸುವುದಿಲ್ಲ. ಎರಡು ದಿನಗಳಲ್ಲಿ ಉಳಿದಿಬ್ಬರನ್ನು ಬಂಧಿಸಿ ಜೈಲಿಗಟ್ಟಬೇಕು.
ಈ ಘಟನೆ ಇಡೀ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಒಂದು ಪಾಠ. ಯಾವುದೇ ಕಾರಣಕ್ಕೂ ಇದು ಮರುಕಳಿಸಬಾರದು.

ವಸತಿ ಶಾಲೆಗಳ ಒಳಗೆ ಪೋಷಕರು ಪ್ರವೇಶಿಸಲು ಅವಕಾಶ ನೀಡಬೇಕು. ಇದರಿಂದ ಪೋಷಕರಿಗೆ ವಸತಿ ಶಾಲೆಗಳ ಗುಣಮಟ್ಟ ಗೊತ್ತಾಗುತ್ತದೆ. ಹೀಗೆ ಮಾಡುವುದರಿಂದ ವಸತಿ ಶಾಲೆಗಳು ಜೈಲುಗಳು ಎನ್ನುವ ಭಾವನೆ ಹೋಗುತ್ತದೆ.

ನನಗೆ ದಲಿತ ಚಳವಳಿಗಳ ಜತೆ ಒಡನಾಟ ಮೊದಲೂ ಇತ್ತು, ಈಗಲೂ ಇದೆ, ಸಾಯುವವರೆಗೂ ಇರುತ್ತದೆ. ಹಿಂದೆ “ಸರಾಯಿ ಬೇಡ-ವಸತಿ ಶಾಲೆ ಬೇಕು” ಎನ್ನುವುದು ದಲಿತ ಚಳವಳಿಯ ಘೋಷಣೆಯಾಗಿತ್ತು. ಅದಕ್ಕಾಗೇ ನಾನು ಹೋಬಳಿಗೊಂದು ವಸತಿ ಶಾಲೆ ಆರಂಭಿಸಿದೆ. ಈ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಿಸಬೇಕು. ಶಿಕ್ಷಕರಿಗೆ ತರಬೇತಿ ನೀಡಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು.

ದೇವಸ್ಥಾನದ ಮತ್ತು ವಕ಼್ಫ್ ಬೋರ್ಡ್‌ಗೆ ಸಂಬಂಧಪಟ್ಟ ಸ್ಥಳಗಳು, ಜಮೀನು ಆಯಾ ಆಯಾ ಸಂಸ್ಥೆಗೆ ಹೋಗಬೇಕು. ಇವರ ಜಾಗ ಅವರಿಗೆ ಅವರ ಜಾಗ ಇವರಿಗೆ ಹೋಗದಂತೆ, ತಾಂತ್ರಿಕ ದಾಖಲಾತಿಗಳ ಗೊಂದಲ ಉಂಟಾಗದಂತೆ ಸಮಗ್ರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ವಿಶ್ವಕರ್ಮ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳಲ್ಲೂ ನಿಯಮಾನುಸಾರ ಎಲ್ಲಾ ಜಾತಿ ಧರ್ಮದವರಿಗೂ ಅವಕಾಶ ನೀಡಬೇಕು.

ಕೋಲಾರ ಜಿಲ್ಲೆಯಲ್ಲಿ ಅಪರಾಧಗಳ ಹೆಚ್ಚಳ ಆದರೆ ನಾನು ಸಹಿಸಲ್ಲ. ಕೋಲಾರ ಅಪರಾಧ ಮುಕ್ತ ಆಗಬೇಕು. ಚಾಳಿಬಿದ್ದ ಆರೋಪಿಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page