ಮುಂಡಗೋಡ: ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಹಲವು ಕಡೆ ವಂಚನೆಯ ಹಳೆಯ ಪ್ರಕರಣಗಳಲ್ಲಿ ಸುಮಾರು 28ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಲ್ಲಿನ ಪೊಲೀಸರು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಮಲ್ಲನಗೌಡ ಕರಬಸನಗೌಡ ಪಾಟೀಲ(63) ಬಂಧಿತ ಆರೋಪಿ. 1995ನೇ ಸಾಲಿನಲ್ಲಿ ದಾಖಲಾದ ವಂಚನೆ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದನು. 28ವರ್ಷಗಳಿಂದ ಬೇಕಾಗಿದ್ದ ಆರೋಪಿಯನ್ನು ಇಲ್ಲಿನ ಪೊಲೀಸ್ ಠಾಣೆಯ ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದ ತಂಡವು ಮಲ್ಲನಗೌಡನನ್ನು ಹುಬ್ಬಳ್ಳಿಯಲ್ಲಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments