ರಸ್ತೆ ಬದಿಯಲ್ಲಿ ಕಸ ಹಾಕಿದವರನ್ನು ತರಾಟೆಗೆ ತೆಗೆದುಕೊಂಡ ನಗರಸಭೆ ಅಧ್ಯಕ್ಷೆ ಸುಮಕ್ಕ

by | 14/02/23 | ಮಾತೆಂದರೆ ಇದು, ಸುದ್ದಿ

ಚಳ್ಳಕೆರೆ ಜನಧ್ವನಿವಾರ್ತೆ ಫೆ.14. ರಸ್ತೆ ಬದಿ ಕಸ ತಂದು ಎಸೆದ ನಿವಾಸಿಗಳಿಗೆ ನಗರಸಭೆ ಅಧ್ಯಕ್ಷೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ. ಹೌದು ಇದು ಚಳ್ಳಕೆರೆ ನಗರಸಭೆ ವ್ಯಾಪ್ತಿಯ ವಾರ್ಡ್ ನಂ 14 ರಲ್ಲಿ ವಾರ್ಡ್ ವಾರು ಸ್ವಚ್ಛತೆಗೆ ಮಂಗಳವಾರ ಸಂಜೆ ಗ್ಯಾಂಗ್ ವರ್ಕ್ ಮಾಡುತ್ತಿದ್ದಾಗ ಖಾಲಿ ಜಾಗದಲ್ಲಿ ಕಸವನ್ನು ಸಾರ್ವಜನಿಕರು ಹಾಕುತ್ತಿರುವುದನ್ನು ಕಂಡು ತರಾಟಗೆ ತೆಗೆದುಕೊಂಡಿದ್ದಾರೆ. ನಗರದ ಪ್ರತಿ ವಾರ್ಡ್ ನಲ್ಲಿ ಸ್ವಚ್ಚತೆಮಾಡಲು ತಂಡ ರಚನೆ ಮಾಡಿದ್ದು ದಿನ ನಿತ್ಯ ಸ್ವಚ್ಚತೆಗೆ ನಗರಸಭೆ ಅಧ್ಯಕ್ಷೆ ಸುಮಕ್ಕ.ಉಪಾಧ್ಯಕ್ಷೆ ಮಂಜುಳ. ಪೌರಾಯುಕ್ತ ಚಂದ್ರಪ್ಪ .ಆರೋಗ್ಯಾಧಿಕಾರಿಗಳಾದ ಗೀತಾ.ಮಹಾಲಿಂಗಪ್ಪ.ಗಣೇಶ್ ಹಾಗೂ ಆಯಾ ವಾರ್ಡ್ ನ ಸದಸ್ಯರು ಪಾಲ್ಗೊಂಡು ಸ್ವಚ್ಚತೆ ಬಗ್ಗೆ ವೀಕ್ಷಣೆ ಮಾಡಿತ್ತಾರೆ. ಅದೇ ರೀತಿ ಮಂಗಳವಾರ ಸಂಜೆ 14 ನೇವಾರ್ಡ್ ಸ್ವಚ್ಚತೆ ವೀಕ್ಷಣೆ ಮಾಡಲು ಹೋದಾಗ ಖಾಲಿ ನಿವೇಶನದಲ್ಲಿ ಹಾಕಿರುವ ಕಸವನ್ನು ಕಂಡು ಪ್ರತಿ ನಿತ್ಯ ಕಸ ಸಂಗ್ರಹಣೆ ಮಾಡಲು ಮನೆ ಬಾಗಿಲಿಗೆ ವಾಹನ ಬರುತ್ತವೆ ಆದರೂ ಸಹ ಕಸವನ್ನು ಚರಂಡಿ. ರಸ್ತೆ ಹಾಗೂ ಖಾಲಿ ಜಾಗದಲ್ಲಿ ಹಾಕಿದರೆ ದಂಡವನ್ನು ವಿಧಿಸುವ ಜತೆ ಕಸವನ್ನು ನಿಮ್ಮ ಬಾಗಿಲಿಗೆ ತಂದು ಸುರಿಸಲಾಗುವುದು. ಪೌರಕಾರ್ಮಿಕ ಬೆಳಗ್ಗೆ ಸ್ವಚ್ಚತೆ ಮಾಡಿ ಹೋದರೂ ಸಹ ಮತ್ತೆ ಕಸ ಹಾಕುವುದರಿಂದ ನಗರದ ಸೌಂದರ್ಯಕ್ಕೆ ದಕ್ಕೆ ಹಾಗೂ ಸಾಂಕ್ರಮಿಕ ರೋಗಗಳಿಗೆ ತುತ್ತಾಗ ಬೇಕಾಗುತ್ತೆ ಇನ್ನು ಮುಂದೆ ಕಸವನ್ನು ಎಲ್ಲೆಂದರಲ್ಲೆ ಸುರಿಯುವಂತಿಲ್ಲ ಕಸದ ವಾಹನಗಳು ಬಂದಾಗ ವಾಹನಗಳಲ್ಲಿ ಹಾಕುವಂತೆ ತಿಳಿಸಿದರು. ಆರೋಗ್ಯಾಧಿಕಾರಿ ಗೀತಾ ಮಾತನಾಡಿ ಕಸ ವಿಲೇವಾರಿಗೆ ನಗರಸಭೆ ಮುಂದಾಗಿದ್ದು. ಈ ನಿಟ್ಟಿನಲ್ಲಿ ಪ್ರತಿದಿನ ಬೆಳಗ್ಗೆ ಮನೆಗಳ ಬಳಿ ಹೋಗಿ ಸಿಬ್ಬಂದಿ ಕಸ ಸಂಗ್ರಹಣೆ ಮಾಡುತ್ತಿದ್ದಾರೆ. ಮನೆಗಳ ಬಳಿ ವಾಹನ ಹೋದರೂ ಕಸ ನೀಡದೆ ಕೆಲ ಸಾರ್ವಜನಿಕರು ರಸ್ತೆಗೆ ಕಸ ಸುರಿಯುತ್ತಿರುವುದು ಸರಿಯಲ್ಲ ಎಂದು ಎಚ್ಚರಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page