ಶಿವರಾತ್ರಿ ಶ್ರದ್ದೆ ಭಕ್ತಿಯಿಂದ ಆಚರಣೆ ವಿವಿಧ ಪಕ್ಷದ ಆಕಾಂಕ್ಷಿಗಳು ಭಾಗಿ

by | 18/02/23 | ಸಾಂಸ್ಕೃತಿಕ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.17 ಚಳ್ಳಕೆರೆ ನಗರವೂ ಸೇರಿದಂತೆ ತಾಲೂಕಿನಾದ್ಯಂತ ಶನಿವಾರ ಬೆಳಗ್ಗೆಯಿಂದಲೇ ಶ್ರದ್ಧಾ ಭಕ್ತಿಯ ಮಹಾಶಿವರಾತ್ರಿ ಆಚರಿಸಲಾಯಿತು.
ಬೆಳಗಿನಿಂದಲೇ ಭಕ್ತರು .ಜನಪ್ರತಿನಿಧಿಗಳು.ವಿವಿಧ ಪಕ್ಷದ ವಿಧಾನ ಸಭಾ ಚುನಾವಣೆಯ ಆಕಾಂಕ್ಷಿಗಳು ಕ್ಷೇತ್ರವ್ಯಾಪ್ತಿಯ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಗರದ ಸೂಜಿನಲ್ಲೇಶ್ವರ. ಈಶ್ವರ.ತಿಮ್ಮಪ್ಪ. ಸಾಯಿಬಾಬ.ನರಹರೇಶ್ವರ.ಮೋದೂರು ಆಂಜನೇಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ. ಜೆಡಿಎಸ್ ಎಂ.ರವೀಶ್ ಕುಮಾರ್. ಬಿಜೆಪಿಯ ಅನಿಲ್ ಕುಮಾರ್.ಜಯರಾಂ.ಜಯಪಾಲಯ್ಯ. ಪಕ್ಷೇತರ ಕೆ.ಟಿ.ಕುಮಾರಸ್ವಾಮಿ ಸೇರಿದಂತೆ ವಿವಿಧ ಪಕ್ಷದ ಆಕಾಂಕ್ಷಗಳ ಜತೆ ಕರ್ತವ್ಯ ‌ನಿರ್ವಹಿಸಿ ಸ್ಥಳ ಕಾಯ್ದಿರಿದ ತಹಶೀಲ್ದಾರ್ ಎನ್. ರಘುಮೂರ್ತಿ ಸಹ ಅಭಿಮಾನಿಗಳೊಂದಿಗೆ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೋಜೆ ಸಲ್ಲಿಸುತ್ತಿರುವ ದೃಶ್ಯ ಬಿಜೆಪಿ ಪಕ್ಷದ ಟಿಕೇಟ್ ಆಕಾಂಕ್ಷಿಗಳಲ್ಲಿ ತಳಮಳವನ್ನುಂಟು ಮಾಡಿದೆ. ವಿಧಾನಸಭಾ ಸ್ಪರ್ಧೆಯ ಆಕಾಂಕ್ಷಿಗಳು ಮಂದಿರಗಳಿಗೆ ಬಂದು ದರ್ಶನಕ್ಕೆ ಪಡೆಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. ದೊಡ್ಡೇರಿ ಕನ್ನೇಶ್ವರ ಆಶ್ರಮದಲ್ಲಿ ಹೋಮ.ಹವನ.ಭಜನೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು.ಶ್ರೀಮಲ್ಲಿಕಾರ್ಜುನ.ಮಲ್ಲಪ್ಪಸ್ವಾಮಿ.ಅಪ್ಪಾಜಿ ಎಂಬ ನಾಮದೇಯದೊಂದಿಗೆ ಕರೆಯುವ ಸ್ವಾಮಿ ಶ್ರೀ ಈಶ್ವರನವೇಷದಲ್ಲಿ ಹೋಮ ಪೂಜೆಯಲ್ಲಿ ಕಾಣಿಸಿಕೊಂಡಿದ್ದು ಭಕ್ತರು ಅಪ್ಪ.ಅಪ್ಪಾಜಿ .ಓಂನಮ ಶಿವಾಯ ಎಂದು ಮುಗಿಲು ಮುಟ್ಟುವಂತೆ ಶ್ರದ್ದೆ.ಭಕ್ತಿಯಿಂದ ಕೂಗಿ ಕರೆಯುವ ದೃಶ್ಯ ಕಂಡು ಬಂತು. ಶಿವರಾತ್ರಿ ಜಾಗರಣೆಗೆ ಮಂದಿರಗಳು ಭಕ್ತರಿಂದ ತುಂಬಿ ತುಳುಕುತ್ತಿದ್ದವು. ಭಕ್ತರು ಹೂ-ಕಾಯಿ ಕರ್ಪೂರ ಅರ್ಪಿಸಿ ಪೂಜೆ ಸಲ್ಲಿಸಿ ತೀರ್ಥ ಪ್ರಸಾದ ಸೇವಿಸಿದರು.
ಶಿವಮಂದಿರಗಳಲ್ಲಿ ಬೆಳಗಿನ ಜಾವದಿಂದಲೇ ರುದ್ರಾಭಿಷೇಕ, ಆರತಿ ಬೆಳಗುವುದು, ವಿವಿಧ ರೀತಿಯ ಹೂಗಳಿಂದ ಸಿಂಗಾರ ಮಾಡಿರುವುದು ಕಂಡುಬಂತು. ಶಿವರಾತ್ರಿ ನಂಬಿಕೆ ಇರಿಸಿದ ಜನ ಇಡೀ ದಿನ ಉಪವಾಸ ವ್ರತ ಆಚರಣೆ ಮಾಡಿ ಶಿವಧ್ಯಾನ ದಲ್ಲಿ ತೊಡಗಿದ್ದಾರೆ. ಸೂರ್ಯಾಸ್ತದವರೆಗೂ ಉಪವಾಸ ಆಚರಣೆ ಮಾಡಿ ಸಂಜೆ ಮತ್ತೆ ದೇವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದು ಹಣ್ಣು ಹಂಪಲು ಸೇವಿಸಿ ಉಪವಾಸ ಕೊನೆಗೊಳಿಸುತ್ತಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page