ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ವಾಹನ ಚಾಲನೆ ತರಬೇತಿ ನೀಡಲಾಗಿದ್ದು ಗ್ರಾಮಗಳಲ್ಲಿ ಸ್ವಚ್ಚತೆ ಬಗ್ಗೆ ಹೆಚ್ಚು ಗಮನಹರಿಸುವಂತೆ ಜಿಪಂ ಸಿಇಒ ಎಂ.ಎಸ್.ದಿವಾಕರ್

by | 20/03/23 | ಆರ್ಥಿಕ

ಚಿತ್ರದುರ್ಗ ಜನಧ್ವನಿ ವಾರ್ತೆ ಮಾ.20 ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ವಾಹನ ಚಾಲನೆ ತರಬೇತಿ ನೀಡಲಾಗಿದ್ದು ಗ್ರಾಮಗಳಲ್ಲಿ ಸ್ವಚ್ಚತೆ ಬಗ್ಗೆ ಹೆಚ್ಚು ಗಮನಹರಿಸುವಂತೆ ಜಿಪಂ ಸಿಇಒ ಎಂ.ಎಸ್.ದಿವಾಕರ್ ಕಿವಿಮಾತು ಹೇಳಿದರು. ನಗರದ ರುಡ್ ಸೆಟ್ ಕೇಂದ್ರದಲ್ಲಿ ಗ್ರಾಪಂ ವ್ಯಾಪ್ತಿ ಮಹಿಳಾ ಸಂಘಗಳಿಂದ ಅಯ್ದ ಸದಸ್ಯರಿಗೆ ಘನತ್ಯಾಜ್ಯ ವಿಲೆವಾರಿ ವಾಹನಗಳಿ ವಾಹನ ತರಬೇತಿ ಮುಕ್ತಾಯ ಸಮಾರಂಭದಲ್ಲಿ ಭಾಗವಹಿಸಿ ತರಬೇತಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸ್ವಚ್ಛ ಭಾರತ ಮಿಷನ್‌’ ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆ ಅನುಷ್ಠಾನಕ್ಕೆ ಸಂಜೀವಿನಿ ಗ್ರಾಮ ಪಂಚಾಯಿತಿ ಮಹಿಳಾ ಒಕ್ಕೂಟಗಳ ಗುಂಪಿನ ಸದಸ್ಯರಿಗೆ ‘ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆ’ಯಲ್ಲಿ (ರುಡ್ ಸೆಟ್) ತರಬೇತಿ ನೀಡಲಾಗಿದೆ
ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಮಾಡಿ, ಮಹಿಳಾ ಒಕ್ಕೂಟಗಳ ಗುಂಪಿನ ಸದಸ್ಯರಿಂದಲೇ ನಡೆಸಲು ನಿರ್ಧರಿಸಿದ್ದೇವೆ. ಮನೆ–ಮನೆಗಳಿಂದ ಕಸವನ್ನು ಸಂಗ್ರಹಿಸಿ, ವಿಂಗಡಿಸಿ, ಗೊಬ್ಬರ ಉತ್ಪಾದನೆ ಮಾಡಿ, ಮಾರಾಟ ಮಾಡುವವರೆಗೆ ಎಲ್ಲ ಕೆಲಸಗಳನ್ನು ಮಹಿಳೆಯರೇ ನಿರ್ವಹಣೆ ಮಾಡಲಿದ್ದಾರೆ’ ಮಹಿಳೆಯರಿಗೆ ವಾಹನ ಚಾಲನೆ ಹುದ್ದೆಗಳಿಗೆ ಆಯ್ಕೆಮಾಡಿ ವಾಹನ ತರಬೇತಿ ನೀಡಲಾಗಿದೆ
‘ಪುರುಷ ಚಾಲಕರ ಮೇಲಿನ ಅವಲಂಬನೆ ತಪ್ಪಿಸಲು 18 ರಿಂದ 45 ವರ್ಷದೊಳಗಿನ ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ನೀಡಿ ತರಬೇತಿ ಪಡೆದವರಿಗೆ ಡಿ.ಎಲ್‌ ಕೊಡಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಕಲ್ಪಿಸಲಾಗಿದೆ‌ ತರಬೇತಿ ಪಡೆದವರು ಗ್ರಾಮದಲ್ಲಿನ ಮನೆ ಮನೆಗಳಿಗೆ ಹೋಗಿ ಒಣ ಕಸ.ಹಸಿ ಕಸ ವಿಂಗಡಿಸಿ ಘನತ್ಯಾಜ್ಯ ಘಟಕದಲ್ಲಿ ಬೇರ್ಪಡಿಸುವ ಮೂಲಕ ಗ್ರಾಮಗಳ ಸ್ವಚ್ಚತೆಗೆ ಸಹಕರಿಸುವಂತೆ ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page