ಹೊಂಚು‌ ಹಾಕಿ ಮನೆ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ; 4.75 ಲಕ್ಷ ಮೌಲ್ಯದ ನಗದು ಸಹಿತ ಚಿನ್ನ ವಶ

by | 23/03/23 | ಕ್ರೈಂ


ದಾವಣಗೆರೆ: ಮನೆಯಲ್ಲಿ ಯಾರು ಇಲ್ಲದನ್ನು ಹೊಂಚು‌ ಹಾಕಿ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಮನೆ ಕಳ್ಳರನ್ನು ವಿದ್ಯಾನಗರ, ಕೆ.ಟಿ.ಜೆ ನಗರ ಪೊಲೀಸರು ಜಂಟಿ ಕಾರ್ಯಚರಣೆ ಮೂಲಕ ಬಂಧಿಸಿದ್ದಾರೆ. ಆರೋಪಿಗಳಿಂದ 4,75,000-ರೂ ಬೆಲೆ ಬಾಳುವ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ
ನಾಗೇಶ್ ಎಂಬವರು ವಿದ್ಯಾನಗರ ಠಾಣೆಗೆ ಹಾಜರಾಗಿ, ಮನೆಯ ಬಾಗಿಲು ಹಾಕಿಕೊಂಡು ಸಂಬಂಧಿಕರ ಮದುವೆಗೆ ಹಿರಿಯೂರಿಗೆ ಹೋಗಿ ವಾಪಸ್ ಬಂದು ನೋಡಿದ್ದಾಗ ಯಾರೋ ಕಳ್ಳರು ಮನೆಯ ಬಾಗಿಲನ್ನು ಹೊಡೆದು 106 ಗ್ರಾಂ ಬಂಗಾರದ ಆಭರಣಗಳು 02 ಲಕ್ಷ ನಗದು ಹಣ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ದಾವಣಗೆರೆ ನಗರ ಉಪ ವಿಭಾಗದ ಡಿವೈಎಸ್‌ಪಿ ಮಲ್ಲೇಶ್ ದೊಡ್ಡಮನಿ ಮಾರ್ಗದರ್ಶನದಲ್ಲಿ‌ ಇನ್ಸ್ಪೆಕ್ಟರ್ ಗಳಾದ ಪ್ರಭಾವತಿ ಸಿ ಶೇತಸನದಿ ಪೊಲೀಸ್, ಶಶಿಧರ್ ಯು.ಜೆ ಕೆ.ಟಿ.ಜೆ ನೇತೃತ್ವದಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಕೆ.ಟಿ.ಜೆ ನಗರ ಪೊಲೀಸ್ ಸಿಬ್ಬಂದಿಯನ್ನೊಳಗೊಂಡ ತಂಡವನ್ನು ರಚಿಸಿದ್ದು ಸದರಿ ತಂಡವು ಜಂಟಿ ಕಾರ್ಯಚರಣೆಯ ಮೂಲಕ ಆರೋಪಿಯನ್ನು ಬಂಧಿಸಿದ್ದಾರೆ.
ಶ್ರೀನಿವಾಸ( 35 ) ವಾಸ- ಯಶವಂತಪುರ ಬೆಂಗಳೂರು . (22., ವಾಸ- ಚಕ್ರನಗರ ಅಂಧ್ರಳ್ಳಿ ಬೆಂಗಳೂರಿನ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದೆ. ಆರೋಪಿತಗಳಿಂದ ವಿದ್ಯಾನಗರ ಪೊಲೀಸ್ ಠಾಣೆಯ 2 ಮನೆಗಳ್ಳತನ ಪ್ರಕರಣ ಹಾಗೂ ಕೆ.ಟಿ.ಜೆ ನಗರ ಪೊಲೀಸ್ ಠಾಣೆಯ 1 ಮನೆಗಳ್ಳತನ ಪ್ರಕರಣದಲ್ಲಿ ಕಳ್ಳತನ ಮಾಡಿದ್ದ ಒಟ್ಟು4.50 ಲಕ್ಷ ಬೆಲೆ ಬಾಳುವ 29 ಗ್ರಾಂ ಬಂಗಾರದ ಆಭರಣಗಳು, ಒಂದು ಫಾಸ್ಟ್ರಾಕ್ ವಾಚ್ ಹಾಗೂ 25 ಸಾವಿರ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆಆರೋಪಿ ಪತ್ತೆಗೆ ಪಿ.ಎಸ್.ಐಗಳಾದ ದೊಡ್ಡಮನಿ , ರೇಣುಕಾ, ವಿಶ್ವನಾಥ, ಎನ್.ಎಸ್ ಕಾಟೆ , ಮಂಜುನಾಥ ಕಲ್ಲದೇವರು, ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ಆನಂದ ಮುಂದಲಮನಿ, ಗೋಪಿನಾಥ, ಮಂಜಪ್ಪ, ಯೋಗೀಶ್, ಭೋಜಪ್ಪ, ಮಂಜುನಾಥ ಮತ್ತು ಕೆ.ಟಿ.ಜೆ ನಗರ ಪೊಲೀಸ್ ಠಾಣೆಯ ಪ್ರಕಾಶ್, ಶಂಕರ್ ಜಾದವ್, ತಿಮ್ಮಣ್ಣ, ಶಿವರಾಜ್, ಮಂಜುನಾಥ, ಷಣ್ಮುಖ, ಮತ್ತು ಎಫ್.ಪಿ.ಬಿ ಘಟಕದ ಸಿಬ್ಬಂದಿಗಳಾದ ಅಕ್ತರ್, ನಾಗರಾಜ, ಮಾರುತಿ, ವಿರೇಶ್, ಚಾಲಕರಾದ ರಾಮಚಂದ್ರಪ್ಪ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿಯಾದ ರಾಘವೇಂದ್ರ, ಶಾಂತರಾಜ್ ತಂಡದಲ್ಲಿದ್ದರು. ಕಾರ್ಯಾಚರಣೆ ನಡೆಸಿದ ತಂಡಕ್ಕೆ ಸಿ.ಬಿ ರಿಷ್ಯಂತ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ ಬಸರಗಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page