ರಸ್ತೆ ಮಧ್ಯೆ ಆಟೋಗಳ ನಿಲುಗಡೆ ರಸ್ತೆ ದಾಟಲು ಪಾದಚಾರಿಗಳು ಹೈರಾಣು, ಅಟೋಗಳು ಅಡ್ಡಾದಿಡ್ಡಿ ಸಂಚಾರಕ್ಕೆ ಬ್ರೇಕ್ ಹಾಕುವರೇ…?

by | 19/05/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ19
ಸಂಚಾರ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಏನೆಲ್ಲ ಕಸರತ್ತು ಮಾಡುತ್ತಿದೆ. ಆದರೆ, ಸಂಚಾರ ನಿಯಮ ಉಲ್ಲಂಘಿಸುವ ಆಟೋ ರಿಕ್ಷಾಗಳ ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹೌದು ಇದು ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆಗಳು ವಿಸ್ತೀರ್ಣವಿದ್ದರೂ ಸಹ ಆಟೋ ಚಾಲಕರು ವಾಹನಗಳನ್ನು ಮಧ್ಯರಸ್ತೆಯಲ್ಲೇ ನಿಲ್ಲಿಸಿಕೊಂಡು ಹರಟೆ ಹೊಡೆಯುವುದು. ಬಸ್ ಗಳು ಖಾಸಗಿ ಬಸ್ ನಿಲ್ದಾಣಕ್ಕೆ ಬಂದ ತಕ್ಷಣ ಎಲ್ಲೋ ಇದ್ದ ಆಟೋಗಳು ಬಸ್ ನಿಲ್ದಾಣದಲ್ಲಿ ನಿಲ್ಲುವ ಬಸ್ ಸುತ್ತಾ ಆಟೋಗಳು ಸುತ್ತುವರೆದು ಪ್ರಯಾಣಿಕರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದ್ದು ಇದರಿಂದ ಪ್ರಯಾಣಿಕರು ಹಾಗೂ ಪಾದಾ ಚಾರಿಗಳು ಹೈರಾಣಾಗಿದ್ದಾರೆ.

ಖಾಸಗಿ ಬಸ್ ನಿಲ್ದಾಣ ಸೇರಿದಂತೆ ರಸ್ತೆಯಲ್ಲಿ ಆಟೋಗಳ ಅಡ್ಡಾದಿಡ್ಡಿ ನಿಲುಗಡೆ ಹಾಗೂ ಸಂಚಾರಿAದ ಸಂಚಾರಿ ನಿಯಮ ಉಲ್ಲಂಘಟನೆಯಿಂದ ವೃದ್ದರು, ಮಕ್ಕಳು ಹಾಗೂ ಸಾರ್ವಜನಿಕರು ರಸ್ತೆ ದಾಟುವಾಗ ಜೀವ ಕೈಯಲ್ಲಿಡಿದು ಸಂಚರಿಸುವಂತಾಗಿದೆ ಆಟೋಗಳ ಅಡ್ಡಿದಿಡ್ಡಿ ಸಂಚರಿಸಿದುರೂ ಸಹ ಪೊಲೀಸ್ ಇಲಾಖೆ ಮಾತ್ರ ನಮಗೂ ಇದಕ್ಕೂ ಸಂಬಂಧವಿಲ್ಲ ಎಂಬಂತಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.
ನಗರಕ್ಕೆ ನಿತ್ಯ ಸಹಸ್ರಾರು ಜನರು ಬರುತ್ತಾರೆ. ಅವರಲ್ಲಿ ಬಹುತೇಕ ಜನರು ಪಾವಗಡ, ಬಳ್ಳಾರಿ ,ಬೆಂಗಳೂರು ರಸ್ತೆಯ ಮೂಲಕ ನೆಹರು ವೃತ್ತದ ಮೂಲಕ ಜನ ದಟ್ಟಣೆ ಹಾಗೂ ವಾಹನಗಳ ದಟ್ಟಣೆ ನಡುವೆಯೂ ರಸ್ತೆಯಲ್ಲೆ ನಡೆದುಕದೊಂಡು ಹೋಗುವ ಪರಿಸ್ಥಿತಿ ಇದ್ದು ಪಾದಚಾರಿಗಳಿಗೆ ವಾಹನಗಳು ಡಿಕ್ಕಿ ಹೊಡೆದ ಪರಿಣಾಮಗಳು ಸಹ ಇವೆ.


ಜನರು ಓಡಾಡುವ ರಸ್ತೆಯಲ್ಲಿ ಆಟೋಗಳನ್ನು ನಿಲ್ಲಿಸುವುದರಿಂದ ಹಾಗೂ ಪ್ರಯಾಣಿಕರನ್ನು ಹುಡುಕಲು ಆಟೊಗಳನ್ನು ನಿಧಾನವಾಗಿ ಚಲಾಯಿಸುವುದರಿಂದ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಮತ್ತಿತರ ಕಡೆಗಳಿಂದ ಬಂದ ಬಸ್ ಹಾಗೂ ಇತರ ವಾಹನಗಳ ಸಂಚಾರಕ್ಕೂ ಅಡ್ಡಿಯನ್ನುಂಟು ಮಾಡುತ್ತಿವೆ. ಆಟೋಗಳು ರಸ್ತೆ ಮೇಲೆ ನಿಂತು ಜನರನ್ನು ಇಳಿಸುವುದು, ಹತ್ತಿಸಿಕೊಳ್ಳುವುದನ್ನು ಮಾಡುತ್ತವೆ. ಆದರೂ ಪೊಲೀಸರು ಮಾತ್ರ ಕಣ್ಣಿದ್ದು ಕುರುಡರಂತೆ ವರ್ತನೆ ಮಾಡುವುದು ಆಟೋ ಚಾಲಕರಿಗೆ ವರದಾನವಾಗಿದೆ.
ಪಾದಚಾರಿಗಳ ರಸ್ತೆಗಳು ಒತ್ತುವರಿ.
ಬೆಂಗಳೂರು ರಸ್ತೆ ಹಗಲೀಕರಣ ಮಾಡಿ ಇನ್ನು ಒಂದು ತಿಂಗಳು ಕಳೆದಿಲ್ಲ ಆಗಲೆ ರಸ್ತೆಯನ್ನು ವಾಹನ ಸವಾರರು ಹಾಗೂ ಬೀದಿ ಬದಿ ವ್ಯಾಪಾರಿಗಳು ಅಕ್ರಮಿಸಿಕೊಂಡಿದ್ದಾರೆ.
ಅದೇ ರೀತಿ ನೆಹರು ವೃತ್ತದಿಂದ ಲೋಕೋಪಯೋಗಿ ಇಲಾಖೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ತಾಲೂಕು ಕಚೇರಿ ವರೆಗೆ ಪಾದಚಾರಿಗಳಿಗೆಂದು ನಿರ್ಮಿಸಿದ ರಸ್ತೆಯನ್ನು ವ್ಯಾಪಾರಿಗಳು ಅಕ್ರಮಿಸಿಕೊಂಡು ಖಾಯಂ ಗುಡಾರ ಹಾಕಿಕೊಂಡಿರುವುದರಿಂದ ಪಾದ ಚಾರಿಗಳಿಗೂ ಓಡಾಡಲು ಬಿಡದೆ ಅಕ್ರಮಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳು,ವೃದ್ದರು, ಮಕ್ಕಳು ಹಾಗೂ ಸಾರ್ವಜನಿಕರು ಅನಿವಾರ್ಯವಾಗಿ ರಸ್ತೆಯಲ್ಲೇ ನಡೆದುಕೊಂಡು ಹೋಗವುದು ಅನಿವಾರ್ಯವಾಗಿದೆ..
ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ವಾಹನಗಳ ಅಡ್ಡದಿಡ್ಡ ಸಂಚಾರಕ್ಕೆ ಹಾಗೂ ಪಾದಚಾರಿಗಳ ಸಂಚಾರಕ್ಕೆ ಸ್ವಲ್ವವಾದರೂ ಪಾದಚಾರಿರಸ್ತೆ ಬಿಡಿಸಿಕೊಡುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page