ರಸ್ತೆ ಮಧ್ಯೆ ಆಟೋಗಳ ನಿಲುಗಡೆ ರಸ್ತೆ ದಾಟಲು ಪಾದಚಾರಿಗಳು ಹೈರಾಣು, ಅಟೋಗಳು ಅಡ್ಡಾದಿಡ್ಡಿ ಸಂಚಾರಕ್ಕೆ ಬ್ರೇಕ್ ಹಾಕುವರೇ…?

by | 19/05/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ19
ಸಂಚಾರ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಏನೆಲ್ಲ ಕಸರತ್ತು ಮಾಡುತ್ತಿದೆ. ಆದರೆ, ಸಂಚಾರ ನಿಯಮ ಉಲ್ಲಂಘಿಸುವ ಆಟೋ ರಿಕ್ಷಾಗಳ ನಿಯಂತ್ರಣ ಮಾಡುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಹೌದು ಇದು ಚಳ್ಳಕೆರೆ ನಗರದ ಖಾಸಗಿ ಬಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆಗಳು ವಿಸ್ತೀರ್ಣವಿದ್ದರೂ ಸಹ ಆಟೋ ಚಾಲಕರು ವಾಹನಗಳನ್ನು ಮಧ್ಯರಸ್ತೆಯಲ್ಲೇ ನಿಲ್ಲಿಸಿಕೊಂಡು ಹರಟೆ ಹೊಡೆಯುವುದು. ಬಸ್ ಗಳು ಖಾಸಗಿ ಬಸ್ ನಿಲ್ದಾಣಕ್ಕೆ ಬಂದ ತಕ್ಷಣ ಎಲ್ಲೋ ಇದ್ದ ಆಟೋಗಳು ಬಸ್ ನಿಲ್ದಾಣದಲ್ಲಿ ನಿಲ್ಲುವ ಬಸ್ ಸುತ್ತಾ ಆಟೋಗಳು ಸುತ್ತುವರೆದು ಪ್ರಯಾಣಿಕರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದ್ದು ಇದರಿಂದ ಪ್ರಯಾಣಿಕರು ಹಾಗೂ ಪಾದಾ ಚಾರಿಗಳು ಹೈರಾಣಾಗಿದ್ದಾರೆ.

ಖಾಸಗಿ ಬಸ್ ನಿಲ್ದಾಣ ಸೇರಿದಂತೆ ರಸ್ತೆಯಲ್ಲಿ ಆಟೋಗಳ ಅಡ್ಡಾದಿಡ್ಡಿ ನಿಲುಗಡೆ ಹಾಗೂ ಸಂಚಾರಿAದ ಸಂಚಾರಿ ನಿಯಮ ಉಲ್ಲಂಘಟನೆಯಿಂದ ವೃದ್ದರು, ಮಕ್ಕಳು ಹಾಗೂ ಸಾರ್ವಜನಿಕರು ರಸ್ತೆ ದಾಟುವಾಗ ಜೀವ ಕೈಯಲ್ಲಿಡಿದು ಸಂಚರಿಸುವಂತಾಗಿದೆ ಆಟೋಗಳ ಅಡ್ಡಿದಿಡ್ಡಿ ಸಂಚರಿಸಿದುರೂ ಸಹ ಪೊಲೀಸ್ ಇಲಾಖೆ ಮಾತ್ರ ನಮಗೂ ಇದಕ್ಕೂ ಸಂಬಂಧವಿಲ್ಲ ಎಂಬಂತಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.
ನಗರಕ್ಕೆ ನಿತ್ಯ ಸಹಸ್ರಾರು ಜನರು ಬರುತ್ತಾರೆ. ಅವರಲ್ಲಿ ಬಹುತೇಕ ಜನರು ಪಾವಗಡ, ಬಳ್ಳಾರಿ ,ಬೆಂಗಳೂರು ರಸ್ತೆಯ ಮೂಲಕ ನೆಹರು ವೃತ್ತದ ಮೂಲಕ ಜನ ದಟ್ಟಣೆ ಹಾಗೂ ವಾಹನಗಳ ದಟ್ಟಣೆ ನಡುವೆಯೂ ರಸ್ತೆಯಲ್ಲೆ ನಡೆದುಕದೊಂಡು ಹೋಗುವ ಪರಿಸ್ಥಿತಿ ಇದ್ದು ಪಾದಚಾರಿಗಳಿಗೆ ವಾಹನಗಳು ಡಿಕ್ಕಿ ಹೊಡೆದ ಪರಿಣಾಮಗಳು ಸಹ ಇವೆ.


ಜನರು ಓಡಾಡುವ ರಸ್ತೆಯಲ್ಲಿ ಆಟೋಗಳನ್ನು ನಿಲ್ಲಿಸುವುದರಿಂದ ಹಾಗೂ ಪ್ರಯಾಣಿಕರನ್ನು ಹುಡುಕಲು ಆಟೊಗಳನ್ನು ನಿಧಾನವಾಗಿ ಚಲಾಯಿಸುವುದರಿಂದ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಮತ್ತಿತರ ಕಡೆಗಳಿಂದ ಬಂದ ಬಸ್ ಹಾಗೂ ಇತರ ವಾಹನಗಳ ಸಂಚಾರಕ್ಕೂ ಅಡ್ಡಿಯನ್ನುಂಟು ಮಾಡುತ್ತಿವೆ. ಆಟೋಗಳು ರಸ್ತೆ ಮೇಲೆ ನಿಂತು ಜನರನ್ನು ಇಳಿಸುವುದು, ಹತ್ತಿಸಿಕೊಳ್ಳುವುದನ್ನು ಮಾಡುತ್ತವೆ. ಆದರೂ ಪೊಲೀಸರು ಮಾತ್ರ ಕಣ್ಣಿದ್ದು ಕುರುಡರಂತೆ ವರ್ತನೆ ಮಾಡುವುದು ಆಟೋ ಚಾಲಕರಿಗೆ ವರದಾನವಾಗಿದೆ.
ಪಾದಚಾರಿಗಳ ರಸ್ತೆಗಳು ಒತ್ತುವರಿ.
ಬೆಂಗಳೂರು ರಸ್ತೆ ಹಗಲೀಕರಣ ಮಾಡಿ ಇನ್ನು ಒಂದು ತಿಂಗಳು ಕಳೆದಿಲ್ಲ ಆಗಲೆ ರಸ್ತೆಯನ್ನು ವಾಹನ ಸವಾರರು ಹಾಗೂ ಬೀದಿ ಬದಿ ವ್ಯಾಪಾರಿಗಳು ಅಕ್ರಮಿಸಿಕೊಂಡಿದ್ದಾರೆ.
ಅದೇ ರೀತಿ ನೆಹರು ವೃತ್ತದಿಂದ ಲೋಕೋಪಯೋಗಿ ಇಲಾಖೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ತಾಲೂಕು ಕಚೇರಿ ವರೆಗೆ ಪಾದಚಾರಿಗಳಿಗೆಂದು ನಿರ್ಮಿಸಿದ ರಸ್ತೆಯನ್ನು ವ್ಯಾಪಾರಿಗಳು ಅಕ್ರಮಿಸಿಕೊಂಡು ಖಾಯಂ ಗುಡಾರ ಹಾಕಿಕೊಂಡಿರುವುದರಿಂದ ಪಾದ ಚಾರಿಗಳಿಗೂ ಓಡಾಡಲು ಬಿಡದೆ ಅಕ್ರಮಸಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳು,ವೃದ್ದರು, ಮಕ್ಕಳು ಹಾಗೂ ಸಾರ್ವಜನಿಕರು ಅನಿವಾರ್ಯವಾಗಿ ರಸ್ತೆಯಲ್ಲೇ ನಡೆದುಕೊಂಡು ಹೋಗವುದು ಅನಿವಾರ್ಯವಾಗಿದೆ..
ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ವಾಹನಗಳ ಅಡ್ಡದಿಡ್ಡ ಸಂಚಾರಕ್ಕೆ ಹಾಗೂ ಪಾದಚಾರಿಗಳ ಸಂಚಾರಕ್ಕೆ ಸ್ವಲ್ವವಾದರೂ ಪಾದಚಾರಿರಸ್ತೆ ಬಿಡಿಸಿಕೊಡುವರೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page