ಬಿಸಿಲಿ ತಾಪ ತಣಿಸಿಕೊಳ್ಳಲು ಈಜಲು ಮೊರೆಹೋಗುತ್ತಿರುವ ಯುವ ಜನ.

by | 20/05/23 | ಜನಧ್ವನಿ, ಜೀವನಶೈಲಿ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 20
ಬಿಸಿಲಿನ ಧಗೆಯಿಂದ ಕಂಗಾಲಾಗಿರುವ ಹಳ್ಳಿಗಳ ಜನತೆ ದಣಿವಾರಿಸಿಕೊಳ್ಳಲು ಜಮೀನಿಲ್ಲಿರುವ ಈಜಾಡಲು ನೀರಿನ ತೊಟ್ಟಿಗಳ ಮೊರೆ ಹೋಗುತ್ತಿದ್ದಾರೆ.
ಹೌದು ಇದು ಚಳ್ಳಕೆರೆ ತಾಲೂಕಿನ ಸಿದ್ದರಾಪುರ ಗ್ರಾಮದ ಸಮೀಪವಿರುವ ರೈತರ ಜಮೀನಿಲ್ಲಿ ನೀರು ಸಂಗ್ರಹಣೆಗಾಗಿ ನಿರ್ಮಿಸಿರುವ ನೀರಿನ ತೊಟ್ಟಿಯಲ್ಲಿ ಮಕ್ಕಳು ಈಜಾಡುವ ಮೂಲಕ ಬಿಸಿನ ದಣಿವಾರಿಕೊಳ್ಳುವ ದೃಶ್ಯ ಕಂಡು ಬಂತು.


ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲಿದ್ದ ತೆರದ ಬಾವಿಗಳಲ್ಲಿ ಅಂತರ್ಜಲಕೊರತೆಯಿAದ ಬರಿದಾಗಿದ್ದು ಇನ್ನು ಕೆಲವರು ಕೊಳವೆ ಬಾವಿಗಳ ಹಾವಳಿಗೆ ತೆರದ ಬಾವಿಗಳನ್ನು ಮುಚ್ಚಿದ್ದು ಗ್ರಾಮೀಣ ಭಾಗದ ಇತ್ತೀಚಿನ ಯುವಕರಲ್ಲಿ ಈಜು ಮರೆತುಹೊಗುವಂತೆ ಮಾಡಿದೆ. ಶಾಲೆಗಳಿಗೆ ಬೇಸಿಗೆ ರಜೆ ಇರುವುದರಿಂದ ವಿದ್ಯಾಥಿಗಳು ನೀರಿನ ತೊಟ್ಟಿ, ವೇದಾವತಿ ನದಿ, ಕೆರೆಗಳಲ್ಲಿ ಈಜಲು ಮುಗಿಬೀಳುತ್ತಿದ್ದಾರೆ.
ತಾಲೂಕು ಕೇಂದ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಸರಕಾರದವತಿಯಿಂದ ಈಜು ಕೊಳ ನಿರ್ಮಿಸಿದರೆ ಈಜು ಕಲಿಯಲು ಸಹಕಾರಿಯಾಗಲಿದೆ ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಬಯಲು ನಾಡಿನ ಜನತೆ ರೋಸಿ ಹೋಗಿದ್ದಾರೆ. ಉಷ್ಣತೆ ಅಧಿಕವಾಗಿದೆ. ಅದರಲ್ಲಿಯೂ ಮಧ್ಯಾಹ್ನ ವೇಳೆಯಂತೂ ಬಿಸಿಲು ಕೆಂಡದAತೆ ಇರುತ್ತದೆ. ಹೊರಗಡೆ ಹೋಗಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ. ಬಿಸಿಲಿನ ತಾಪಮಾನದಿಂದ ತಪ್ಪಿಸಿಕೊಳ್ಳಲು ರೈತರ ಜಮೀನಿನ ನೀರಿನ ತೊಟ್ಟಿ, ಕೆರೆ ಮತ್ತು ಬಾವಿ ಗಳಲ್ಲಿ ಈಜಾಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಕೆಲವೊಂದು ಬಾವಿ ಮತ್ತು ಕೆರೆಗಳಲ್ಲಿ ನೀರು. ಇದ್ದ ಕಡಿಮೆ ನೀರಿನಲ್ಲಿಯೇ ಬಹುತೇಕರು ಈಜಾಡುವ ಮೂಲಕ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿರತರಾಗಿದ್ದಾರೆ.
ಈಗಲಾದರೂ ಸಂಬAಧಪಟ್ಟ ಇಲಾಖೆ ತಾಲೂಕು ಕೇಂದ್ರ ಹಾಗೂ ವಿವಿಧ ಕಡೆ ಈಜು ಕೊಳ ನಿರ್ಮಿಸಲು ಮುಂದಾಗುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page