ಹೆರಿಗೆಯೂ ಇಲ್ಲ, ತುರ್ತುವಾಹನ ಸೌಲಭ್ಯವಿಲ್ಲದೆ ಆಟೋದಲ್ಲೇ ಗರ್ಭಿಣಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದ ಅಮಾನವೀಯ ಘಟನೆ ನಡೆದಿದೆ.

by | 22/05/23 | ಆರೋಗ್ಯ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 22
ಹಣ ನೀಡಲಿಲ್ಲವೆಂದು ಹೆರಿಗೆ ಮಾಡಿಸಲು ಮುಂದಾಗದ ಇರುವುದರಿಂದ ತುಂಬು ಗರ್ಭಿಣಿಯನ್ನು ಆಟೋದಲ್ಲೇ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋದ ಅಮಾನವೀಯ ಘಟನೆಯೊಂದು ಸೋಮವಾರ ಚಳ್ಳಕೆರೆ ನಗರದಲ್ಲಿ ನಡೆದಿದೆ.

‌‌‌‌ ಚಳ್ಳಕೆರೆ ನಗರದಿಂದ ಜಿಲ್ಲಾಸ್ಪತ್ರೆಗೆ ಹೆರಿಗೆಗೆಂದು ಆಟೋದಲ್ಲಿ ಗರ್ಭಿಣಿ ಮಹಿಳೆಯನ್ನು ಕರೆದುಕೊಂಡು ಹೋಗುತ್ತಿರುವುದು
ಚಳ್ಳಕೆರೆ ತಾಲೂಕಿನ ದೇವರೆಡ್ಡಿಹಳ್ಳಿ ಗ್ರಾಪಂ ವ್ಯಾಪ್ತಿಯ ಜಿ,ದೇವರಹಳ್ಳಿ ಗ್ರಾಮದ ಸುಮರಾಣಿ(26) ಸೋಮವಾರ ಮಧ್ಯಹ್ನಾನ 2 ಗಂಟೆಸುಮಾರಿನಲ್ಲಿ ಸರಕಾರಿ ಹೆರಿಗೆ ವೈದ್ಯರಿಗೆ ಸೇರಿದ ಖಾಸಗಿ ಹೆರಿಗೆ ಆಸ್ಪತ್ರೆ ಎನ್ನಲಾದ ಆಸ್ಪತ್ರೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ತೋರಿಸಲು ಬಂದಿದ್ದಾರೆ.
ಇದು ಹೆರಿಗೆ ನೋವಾಗಿರುವುದರಿಂದ 38 ಸಾವಿರ ರೂ ಆಗುತ್ತದೆ ಹಣ ಕಟ್ಟಿದರೆ ಹೆರಿಗೆ ಮಾಡಿಸುವುದಾಗಿ ಪ್ರಸೂತಿ ಹಾಗೂ ಸ್ತಿçà ರೋಗ ತಜ್ಞೆ ಡಾ.ಶಮಾಪರ್ವೀನ್ ತಿಳಿಸಿದರು. ಮೇಡಂ ನಮ್ಮ ಬಳಿ ಈಗ ಅಷ್ಟು ಹಣ ಇಲ್ಲ ಸರಕಾರಿ ಆಸ್ಪತ್ರೆಗೆ ಹೋಗುತ್ತೇವೆ ಎಂದು ಹೇಳಿ ನಗರದ ಸಾರ್ವಜನಿಕ ಹೆರಿಗೆ ಆಸ್ಪತ್ರೆಗೆ ಬಂದಾಗ ಅಲ್ಲಿನ ಆರೋಗ್ಯ ಸಹಾಯಕಿಯರು ವೈದ್ಯರಿಗೆ ದೂರವಾಣಿ ಕರೆ ಮಾಡಿ ಹರಿಗೆಗೆ ಬಂದಿದ್ದಾರೆ ಎಂದು ತಿಳಿಸಿದಾಗ ಅವರಿಗೆ ಹೆರಿಗೆ ಮಾಡಿಸಲು ಆಸ್ಪತ್ರೆಗೆ ಸೇರಿಸಿಕೊಳ್ಳ ಬೇಡಿ ಹಾಗೂ ಅಂಬ್ಯೂಲೆನ್ಸ್ ವಾಹನ ಸಹ ಮಾಡಿಕೊಡಬೇಡಿ ಎಂದು ತಿಳಿಸಿದರು.ಇತ್ತ ಹೆರಿಗೆ ನೋವು ಕಾಣಿಸಿಕೊಂಡಿದೆ ಚಳ್ಳಕೆರೆಯಿಂದ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಆಟೋದಲ್ಲೇ ಗರ್ಭಿಣಿ ಮಹಿಳೆಯನ್ನು ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಗರ್ಭಿಣಿ ಪೋಷಕರು ಪತ್ರಿಕೆಯೊಂದಿಗೆ ಅಳಲು ತೋಡಿಕೊಂಡರು.
. ಗರ್ಭಿಣಿ ತಾಯಿ ಬೋರಮ್ಮ ಹೆರಿಗೆ ವೈದ್ಯರ ಹಾಗೂ ಅವ್ಯವಸ್ಥೆ ಬಗ್ಗೆ ಆಕ್ರೋಶ ಹೊರಹಾಕಿರುವುದು
ಸರಕಾರಿ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಡಾ.ಶಮಾಪರ್ವೀನ್ ಪತ್ರಿಕೆ ಸಂಪರ್ಕಿಸಿದಾಗ ಜಿ.ದೇವರಹಳ್ಳಿ ಗ್ರಾಮದ ಸುಮರಾಣೀ ಮದುವೆಯಾಗಿ ಸುಮಾರು 10 ವರ್ಷಕಳೆದರೂ ಮಕ್ಕಳಾಗಿರಲಿಲ್ಲ ಒಮ್ಮೆ ಬಂದು ನಮ್ಮಬಳಿ ಸಲಹೆ ಕೇಳಿದರು ಆಗನಾನು ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪ್ರಾರಂಭಿಸಿದೆ ಚಿಕಿತ್ಸೆ ನೀಡಿದಾಗ ಗರ್ಭಿಣಿಯಾದರೂ ಈ ದಿನ ಹೊಟ್ಟೆನೋವು ಎಂದು ಬಂದಿದ್ದರೂ ಸರಕಾರಿ ಆಸ್ಪತ್ರೆಯಲ್ಲಿ ಈದಿನ ಅರವಳಿಕೆ ತಜ್ಞ ಡಾ. ಓಂಕಾರಮೂರ್ತಿ ರಜೆ ಇರುವುದರಿಂದ ಜಿಲ್ಲಾ ಆಸ್ಪತ್ರೆಗೆ ಹೋಗಿ ಎಂದಿದ್ದೇನೆ ಆದರೆ ಸರಕಾರಿ ಆಸ್ಪತ್ರೆಯಲ್ಲಿ ಸೇರಿಸಿಕೊಳ್ಳಬೇಡಿ, ಜಿಲ್ಲಾಸ್ಪತ್ರೆಗೆ ಹೋಗಲು ಅಂಬ್ಯುಲೆನ್ಸ್ ಕಳಿಸ ಬೇಡಿ ಎಂದು ಸಿಬ್ಬಂದಿಗೆ ಹೇಳಿಲ್ಲ ಅವರದೇ ಸ್ವಂತ ಆಟೋವಾಗಿರುವುದರಿಂದ 108 ಕ್ಕೆ ಕರೆಮಾಡದೆ ಹೋಗಿದ್ದಾರೆ. ಕರ್ತವ್ಯದಲ್ಲಿದ್ದ ಆರೋಗ್ಯ ಸಿಬ್ಬಂದಿಗಳು 108 ಕ್ಕೆ ಕರೆ ಮಾಡಿದ್ದಾರೆ ಬರುವಷ್ಟರಲ್ಲಿ ಅವರು ಆಟೋದಲ್ಲಿ ಹೋಗಿದ್ದರು ಎಂಬ ಮಾಹಿತಿಯನ್ನು ತಿಳಿಸಿದರು.

ಗರ್ಭಿಣಿ ತಾಯಿ ಬೋರಮ್ಮ ಮಾತನಾಡಿ ಪತ್ರಿ ತಿಂಗಳು ತಪಾಸಣೆಗೆ ಬಂದಾಗ 3 ರಿಂದ 4 ಸಾವಿರ ಬಿಲ್ ಮಾಡುತ್ತಿದ್ದಾರೆ ಇಂದು 8 ತಿಂಗಳಿಗೆ ಸಾಕಷ್ಟು ಹಣ ಖರ್ಚು ಮಾಡಿದ್ದೇವೆ ಈ ದಿನ ಹೆರಿಗೆ ನೋವು ಬಂದಿದೆ ಎಂದು ವೈದ್ಯರ ಬಳಿ ಬಂದರೆ 38 ಸಾವಿರ ರೂ ನೀಡಿದರೆ ಮಾತ್ರ ಹೆರಿಗೆ ಮಾಡಿಸುತ್ತೇನೆ ಎಂದು ಹೇಳಿದ್ದರಿಂದ ಅನಿವಾರ್ಯವಾಗಿ ಜಿಲ್ಲಾಸ್ಪತ್ರೆಗೆ ಆಟೋದಲ್ಲೇ ಹೆರಿಗೆಗೆ ಕರೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು.


ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಎಂದು ಹೇಳುತ್ತಾರೆ ಇಲ್ಲಿನವೈದ್ಯರು ಖಾಸಗಿ ಆಸ್ಪತ್ರೆಗಳನ್ನಿಟ್ಟುಕೊಂಡು ಹಣ ಮಾಡುತ್ತಿದ್ದಾರೆ ಒಂದು ಹೆರಿಗೆ ಆಗುವಷ್ಟರಲ್ಲಿ ಕನಿಷ್ಟ50ರಿಂದ 70 ಸಾವಿರ ಹಣ ಬೇಕು ಬಡವರು ,ಕೂಲಿ ಕಾರ್ಮಿಕರು ಸಾಲಸೂಲ ಮಾಡಿ ಹೆರಿಗೆ ಮಾಡಿಸುವ ಪರಿಸ್ಥಿತಿ ಬಂದಿದೆ ನಮ್ಮ ಮಗಳಿಗೆ ಆದ ಪರಿಸ್ಥಿತಿ ಮತ್ತೆ ಯಾರಿಗೂ ಆಗದಂತೆ ಸಂಬAಧಪಟ್ಟ ಅಧಿಕಾರಿಗಳು ನೋಡಿಕೊಳ್ಳ ಬೇಕಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಸAಬಂಧಪಟ್ಟ ಜಿಲ್ಲಾ ಆರೋಗ್ಯಾಧಿಕಾರಿಗಳು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
WhatsApp Audio 2023-05-22 at 6.05.21 PM
ಗರ್ಭಿಣಿ ಮಹಿಳೆಯ ಕುಟುಂಬರಸ್ಥರು ಜನಧ್ವನಿ ಮೀಡಿಯಾದೊಂದಿಗೆ ಮಾತನಾಡಿರುವುದು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page