ಡಾಗ್ ಸರ್ಕಲ್ ನಾಗರೀಕರ ಗೋಳು! ಯಾರಿಗೆ ಹೇಳಲಿ ನಮ್ಮ ಪ್ರಾಬ್ಲಮ್?

by | 26/07/23 | Uncategorized


ಹಿರಿಯೂರು ಜು.26 ಚಿತ್ರದುರ್ಗ ಜಿಲ್ಲೆ ಹಿರಿಯೂರು ಟೌನ್,3 ನೇ ವಾರ್ಡ್,ವೇದಾವತಿ ನಗರದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಚಂದ್ರಾ ಲೇ ಔಟ್ ಪಾಂಡುರಂಗಪ್ಪ ಲೇ ಔಟ್,ಶಿವಶಂಕರಪ್ಪ ಲೇ ಔಟ್,ಉಪ್ಪಾರ ಸಮುದಾಯ ಭವನ,ಸಂ. ರಂಗಯ್ಯ ಲೇ ಔಟ್ ಮೂಲಕ ಬಬ್ಬೂರ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪಾರಂಪರಿಕ ರಸ್ತೆಯನ್ನು ಕಳೆದ 03 ವರ್ಷಗಳಿಂದ ಬಬ್ಬೂರ್ ಸರ್ವೇ ನಂಬರ್ 39 ಮತ್ತು 40 ರ ನಡುವೆ ತಡೆ ಹಿಡಿಯಲಾಗಿದೆ.ಈ ಹಿಂದೆ ಎಲ್ಲಾ ಕಾಲಕ್ಕೂ ರಸ್ತೆ ಇರುವ ಬಗ್ಗೆ ಅಡ್ಡಿ ಪಡಿಸಿರುವ ಉಭಯ ಪಕ್ಷಗಾರರು ಒಪ್ಪಿಕೊಳ್ಳುತ್ತಾರೆ,ಆದಾಗ್ಯೂ ಅಳತೆ ಮಾಡಿಸಿ ರಸ್ತೆ ಗಡಿ ಗುರುತು ಮಾಡುವಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ರಸ್ತೆ ಬಂದ್ ಮಾಡಲಾಗಿದೆ, ಇಲ್ಲಿಯತನಕ ಅಧಿಕಾರಿಗಳು ಅನೇಕ ಬಾರಿ ಸ್ಥಳಕ್ಕೆ ಭೇಟಿ ಕೊಟ್ಟಿದ್ದರೂ ಕೂಡ ರಸ್ತೆ ಬಿಡಿಸಿಕೊಡಲು ಸಾಧ್ಯವಾಗಿಲ್ಲ. ಈ ಭಾಗದ ಜನ ಜಾನುವಾರುಗಳು ಕೂಲಿ ಕಾರ್ಮಿಕರು,ಕಚೇರಿಗೆ ತೆರಳುವ ನೌಕರರು,ಅಂಗವಿಕಲರು,ವಯೋವೃದ್ಧರು, ಮಹಿಳೆಯರು,ಶಾಲಾ ಮಕ್ಕಳು ತಗ್ಗು ಗುಂಡಿಗಳಲ್ಲಿ ಬಿದ್ದು ಅಪಾಯ ಕೂಡ ಮಾಡಿ ಕೊಂಡಿರುತ್ತಾರೆ.ನಮಗೆ ಯಾವುದೇ ದಿಕ್ಕಿನಿಂದಲೂ ಸರಿಯಾದ ಶಾಶ್ವತ ರಸ್ತೆ ಸಂಪರ್ಕ ಇರುವುದಿಲ್ಲ,ಮಳೆಗಾಲದಲ್ಲಿ ಇಲ್ಲಿನ ನಾಗರಿಕರು ಕೆಸರುಗದ್ದೆ ಕೊಚ್ಚೆ ಗುಂಡಿಗಳಲ್ಲಿ ಸುತ್ತಿ ಬಳಸಿ ಅರ್ಧ ಕಿಲೋ ಮೀಟರ್ ನಲ್ಲಿ ಸಿಗುವ ಮುಖ್ಯ ರಸ್ತೆ ತಲುಪಲು 2 ಕಿಲೋ ಮೀಟರ್ ಚಲಿಸಿ ಹರಸಾಹಸ ಮಾಡಿ ತಮ್ಮ ಕೆಲಸ ಕಾರ್ಯಗಳಿಗೆ ಹೋಗಬೇಕು. ದಾರಿ ಅಡ್ಡಿ ಪಡಿಸಿರುವ ಸ್ಥಳದಲ್ಲಿ ಕೊಳಚೆ ನೀರು ನಿಂತು ಹಂದಿ ಮತ್ತು ಸೊಳ್ಳೆಗಳ ಆಶ್ರಯ ತಾಣವಾಗಿ ಸಾಂಕ್ರಾಮಿಕ ರೋಗ ಭೀತಿ ಉಂಟುಮಾಡಿದೆ. ಸ್ವಂತ ವಾಹನ ಇಲ್ಲದೆ ಕಾಲ್ನಡಿಗೆಯಲ್ಲಿ ಓಡಾಡುವ ನಾಗರಿಕರು ಕಲ್ಲು ಮುಳ್ಳು,ಹಾವು ಚೇಳು,ವಿಷ ಜಂತುಗಳ ನಡುವೆ ಜೀವದ ಹಂಗು ತೊರೆದು ತಗ್ಗು ಗುಂಡಿ,ಕೊಳಚೆ ದಾಟಿ ಮುಖ್ಯ ರಸ್ತೆ ತಲುಪಬೇಕು.ರಾತ್ರಿ ಸಮಯದಲ್ಲಿ ಗರ್ಭಿಣಿ,ಬಾಣಂತಿ, ನವಜಾತ ಶಿಶುಗಳು, ವಯೋವೃದ್ಧರು ತುರ್ತು ಚಿಕಿತ್ಸೆಗೆ ಹೋಗಿ ಬರಲು ಆಟೋರಿಕ್ಷಾ ಆಂಬುಲೆನ್ಸ್ ಕೂಡಾ ಮನೆ ಹತ್ತಿರ ಬರಲು ಸಾಧ್ಯವಿಲ್ಲ.ಪ್ರಯುಕ್ತ ಜಿಲ್ಲಾಧಿಕಾರಿಗಳು ದಯಮಾಡಿ ರಸ್ತೆ ಅಡ್ಡಿ ಪಡಿಸಿರುವ ಉಭಯ ಪಕ್ಷಗಾರರ ನಡುವೆ ರಾಜೀ ಸಂಧಾನ ಏರ್ಪಡಿಸಿ ಇಲ್ಲವೇ ತಾತ್ಕಾಲಿಕವಾಗಿ ಓಡಾಡಲು ಅನುಕೂಲ ಆಗುವಂತೆ ಚರಂಡಿ ನೀರನ್ನು ಒಂದು ಕಡೆ ಹರಿಯುವಂತೆ ಮಾಡಿ ಸೀಮೆ ಜಾಲಿ ಪಾರ್ಥೇನಿಯಂ ಗಿಡ ತೆಗಿಸಿ ಮೇಲ್ಕಂಡ ಪಾರಂಪರಿಕ ರಸ್ತೆಯನ್ನು ಬಿಡಿಸಿಕೊಟ್ಟು ರಸ್ತೆ ಅಭಿವೃದ್ಧಿ ಪಡಿಸಿಕೊಡಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್ ವಿ ರಂಗನಾಥ್,ಅಧ್ಯಕ್ಷ ಸಂತೋಷ ರಾಥೋಡ್,ಉಪಾಧ್ಯಕ್ಷ ಟಿ ಸ್ವಾಮಿ,ಕಾರ್ಯದರ್ಶಿ ಸಿ ಜಿ ಗೌಡ,ಸದಸ್ಯರಾದ ರಂಗಸ್ವಾಮಿ, ತಿಪ್ಪೇಸ್ವಾಮಿ,ಗೋವರ್ಧನ್,ಸನಾವುಲ್ಲಾ,ಶ್ರೀನಿವಾಸ್,ರಾಘವೇಂದ್ರ,ಮಧು,ಜಾಫರ್,ಮತ್ತಿತರರು ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page