ನಿಮ್ಮ ಗ್ರಾಮಗಳಿಗೆ ಪಶುವೈದ್ಯಾಧಿಕಾರಿಗಳು ಲಸಿಕೆ ಹಾಕಲು ಬಂದಾಗ ರೈತರು ತಮ್ಮ‌ಕೆಲಗಳನ್ನು ಬದಿಗೊತ್ತಿ ರಾಸುಗಳಿಗೆ ಲಸಿಕೆ ಹಾಕಿಸುವಂತೆ ಪಶುಸಂಗೋಪನೆ ಸಹಾಯಕ ನಿರ್ದೇಶಕ ಡಾ.ರೇವಣ್ಣ..

by | 26/09/23 | ಆರೋಗ್ಯ


ಚಳ್ಳಕೆರೆ ಸೆ.26.ಜಾನುವಾರುಗಳಿಗೆ ಗಂಭೀರ ಕಾಯಿಲೆಯಾಗಿ ಕಾಡುತ್ತಿರುವ ಕಾಲುಬಾಯಿ ಜ್ವರ ರೋಗ ಸಂಪೂರ್ಣ ತಡೆಗಟ್ಟಲು ಪಲ್ಸ್‌ ಪೋಲಿಯೊ ರೀತಿಯಲ್ಲಿ ಕಾರ್ಯಕ್ರಮ ರೂಪಿಸಿ ಲಸಿಕೆ ಹಾಕಲಾಗುತ್ತಿದೆ. ರೈತರು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪಶು ಇಲಾಖೆಯ ,ಸಹಾಕ ನಿರ್ದೇಶಕ ಡಾ. ರೇವಣ್ಣ ಮನವಿ ಮಾಡಿಕೊಂಡಿದ್ದಾರೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪಶುಸಂಗೋಪನೆ ಇಲಾಖೆಯಿಂದ ಕಾಲು ಬಾಯಿ ಜ್ವರ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಲಸಿಕೆ ಹಾಕುವ ಮೂಲಕ ರೈತರಿಗೆ ಮಾಹಿತಿ ನೀಡಿದರು.
ರಾಜ್ಯದಲ್ಲಿ 2019 ರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲ ಹಮ್ಮಿಕೊಳ್ಳಲಾಗುತ್ತಿದ್ದು, ನಾಲ್ಕನೇ ಸುತ್ತಿನ ಕಾಲುಬಾಯಿರೋಗ ಲಸಿಕಾ ಕಾರ್ಯಕ್ರಮವನ್ನು 2023ರಹಮ್ಮಿಕೊಳ್ಳಲಾಗುವುದು.”ಕಾಲುಬಾಯಿರೋಗವನ್ನು ತಡೆಗಟ್ಟಲು ಜಾನುವಾರುಗಳಿಗೆ ಲಸಿಕೆ ಹಾಕಿಸುವುದು ಕಡ್ಡಾಯ ಮತ್ತು ಪರಿಹಾರ”, “ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಮತ್ತು ರಕ್ಷಸಿ”
ರೋಗ ತಡೆಗಟ್ಟಬೇಕಾದರೆ ಎಲ್ಲ ರಾಸುಗಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಕಾಲುಬಾಯಿರೋಗಕ್ಕೆ ತುತ್ತಾಗುವ ಪ್ರಾಣಿಗಳು: ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳು
ಲಕ್ಷಣಗಳು: ಅತಿಯಾದ ಜ್ವರ, ಬಾಯಿಯಲ್ಲಿ ಹುಣ್ಣು,
ಕಾಲುಕುಂಟುವುದು, ಕೆಚ್ಚಲಿನ ಮೇಲೆ ಗುಳ್ಳೆಗಳು ಕಾಣಿಸಿಕೊಳ್ಳುವುದು.
ಕಾಲುಬಾಯಿ ರೋಗ ಹರಡುವಿಕೆ:
ರೋಗಗ್ರಸ್ಥ ಪ್ರಾಣಿಗಳಿಂದ ನೇರ ಸಂಪರ್ಕ.
ವೈರಾಣುಗಳಿಂದ ಕಲುಷಿತಗೊಂಡ ಮೇವು ಮತ್ತು ನೀರು.
ಗಳ ಮುಖಾಂತರ ಪ್ರಸರಣ.
ದನಗಳ ಸಂತೆ ಮತ್ತು ಜಾತ್ರೆಗಳು.
ಜೊಲ್ಲು ಸುರಿಸುವುದು.
ರಾಸುಗಳ ಆರೈಕೆ:
ಕಾಲು ಮತ್ತು ಬಾಯಿಯಲ್ಲಿನ ಹುಣ್ಣನ್ನು ಶೇಕಡಾ 0.5 ರಷ್ಟು ಅಡುಗೆ ಸೋಡ
ದ್ರಾವಣದಿಂದ ಶುದ್ಧಗೊಳಿಸುವುದು.
ಮೃದು ಆಹಾರವಾದ ಗಂಜಿ, ಬಾಳೆ ಹಣ್ಣು, ರಾಗಿ ಅಂಬಲಿ ತಿನಿಸುವುದು.
ಆಂಟಿಬಯೋಟಿಕ್ಸ್ ಮತ್ತು ವಿಟಮಿನ್ ಇಂಜೆಕ್ಷನ್ ಕೊಡಿಸುವುದು.
ರೋಗ ತಡೆಗಟ್ಟುವಿಕೆ:
ರೋಗಪೀಡಿತ ಜಾನುವಾರುಗಳನ್ನು ಇತರ ಜಾನುವಾರುಗಳಿಂದ ಪ್ರತ್ಯೇಕಿಸಿ
ಉಪಚರಿಸುವುದು.
ಶುಚಿತ್ವಕ್ಕೆ ಮಹತ್ವ ನೀಡಿ, ಕ್ರಿಮಿನಾಶಕ ದ್ರಾವಣವನ್ನು ಬಳಸಿ ದಿನಕ್ಕೆ 3-4 ಬಾರಿ
ಕೊಟ್ಟಿಗೆ‌ ಮತ್ತು ಆವರಣ ಶುಚಿಗೊಳಿಸುವುದು.
ರೋಗಪೀಡಿತ ಜಾನುವಾರುಗಳನ್ನು ಉಪಚರಿಸುವವರು ಸಹ ಇತರ ಜಾನುವಾರು‌ಮಾಲೀಕರ ಸಂಪರ್ಕದಿಂದ ದೂರ ಇರುವುದು.ರೋಗೋದ್ರೇಕದ ಸಂದರ್ಭದಲ್ಲಿ ಹೊಸದಾಗಿ ಜಾನುವಾರುಗಳನ್ನು ಕೊಳ್ಳುವುದು,
ಜಾತ್ರೆ ಅಥವಾ ಸಂತೆಗಳಲ್ಲಿ ಮಾಲೀಕರು ಮತ್ತು ಜಾನುವಾರುಗಳು ಭಾಗವಹಿಸುವುದು
ಅಸುರಕ್ಷಿತ.
ಜಾತ್ರೆ ಅಥವಾ ಸಂತೆಗಳಲ್ಲಿ ಭಾಗವಹಿಸುವ ಜಾನುವಾರುಗಳಿಗೆ ಕನಿಷ್ಟ 21 ದಿನಗಳ
ಹಿಂದೆ ಲಸಿಕೆ ಮಾಡಿದ ಪ್ರಮಾಣಪತ್ರ ಕಡ್ಡಾಯ.
“ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕೆ ಹಾಕುವುದೊಂದೇ ಮಾರ್ಗವಾಗಿದ್ದು,
ರೋಗದಿಂದ ಪೂರ್ಣ ಸುರಕ್ಷತೆಗಾಗಿ ಸತತವಾಗಿ ಕನಿಷ್ಟ ಎರಡು ಬಾರಿ ಲಸಿಕ
ಹಾಕುವುದು ಅತ್ಯಗತ್ಯ. ಅದುದರಿಂದ, ಹಿಂದೆ ಎಷ್ಟೇ ಬಾರಿ ಲಸಿಕ ಹಾಕಿಸಿದ್ದರೂ ಸಹ,
ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ
ಲಸಿಕಾಕಾರ್ಯಕ್ರಮದಲ್ಲಿ, ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ರೈತರಿಗೆ ಮಾಹಿತಿ ನೀಡಿದರು.

ನಿಮ್ಮ ಗ್ರಾಮಗಳಿಗೆ ಪಶುವೈದ್ಯಾಧಿಕಾರಿಗಳು ಲಸಿಕೆ ಹಾಕಲು ಬಂದಾಗ ಕೆಲಸಗಳನ್ನು ಬದಿಗೊತ್ತಿ ರಾಸುಗಳಿಗೆ ಲಸಿಕೆ ಹಾಕಿಸಬೇಕು. ಲಸಿಕೆ ಹಾಕಿರುವ ಬಗ್ಗೆ ತಂಡಕ್ಕೆ ಸರಿಯಾದ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಮನವಿ ಮಾಡಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page