ತಾತಾ ಮತ್ತಾಂದಿರ ಹೆಸರಿನಲ್ಲಿರುವ ಆಸ್ತಿಗಳನ್ನು ಮೃತರ ಕುಟುಂಬಸ್ಥರ ಹೆಸರಿಗೆ ಪೌತಿ ಖಾತೆಗೆ ಅರ್ಜಿಸಲ್ಲಿಸುವಂತೆ ತಹಶೀಲ್ದಾರ್ ರೇಹಾನ್ ಪಾಷ.

by | 16/10/23 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಅ.16 ತಾತಾ ಮುತ್ತಾಂದುರ ಹೆಸರಿನಲ್ಲಿರು ಜಮೀನುಗಳನ್ನು ಪೌತಿ ಖಾತೆ ಮಾಡಿಸಿಕೊಳ್ಳಲು ಮೃತ ಪ್ರಮಾಣ ಪತ್ರವಿಲ್ಲದಿದ್ದರೆ ಗ್ರಾಮ ಮಹಾಜರ್ ಮಾಡಿ ಕುಟುಂಬಸ್ಥರಿಗೆ ಪೌತೆ ಖಾತೆ ಮಾಡಿಕೊಡಲಾಗುವುದು ಎಂದು ತಹಶೀಲ್ದಾರ್ ರೇಹಾನ್ ಪಾಷಾ ತಿಳಿಸಿದ್ದಾರೆ. ಪೂರ್ವಜರ ಆಸ್ಥಿಗಳಿಗೆ ಅಗತ್ಯ ದಾಖಲೆಗಳಿಲ್ಲದೆ ಸುಮಾರು 70 ವರ್ಷಗಳಿಂದ ಕುಟುಂಬಸ್ಥರ ಹೆಸರಿಗೆ ಪೌತಿ ಖಾತೆಯಾಗದೆ ಸರಕಾರಿ ಸೌಲಭ್ಯಗಳಿಂದ ವಂಚಿತಾಗಿದ್ದರು. ಈಗ ಸರಕಾರ ಇದನ್ನು ಮನಗಂಡು ಕಂದಾಯ ಸಚಿವರ ನಿರ್ಧೆಶನದಂತೆ ಸರ್ಕಾರ ನಿಮಯ ಸಡಿಲಗೊಳಿಸಿ ಪೌತಿ ಖಾತೆ ಆಂದೋಲನ ಮೂಲಕಗ್ರಾಮ ಮಹಜರ್, ಸ್ಥಳ ಪರಿಶೀಲನೆ ನಡೆಸಿ ಮೃತರ ಕುಟುಂಬಸ್ಥರ ಹೆಸರಿಗೆ ಪೌತಿ ಖಾತೆ ಮಾಡಲಾಗುವುದು ಈ ಸುವರ್ಣ ಅವಕಾಶವನ್ನು ರೈತರು ಸದುಪಯೋಗ ಪಡಿಸಿಕೊಳ್ಳಲು ನಿಮ್ಮ ವ್ಯಾಪ್ತಿಯ ಗ್ರಾಮಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದ್ದಾರೆ.

ಪೌತಿ ಖಾತೆ ಏಕೆ ಬೇಕು? ಜಮೀನು ವರ್ಗಾವಣೆ ಇದರ ಅಗತ್ಯವೇನು ಗೊತ್ತಾ?.
ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡಿಕೊಳ್ಳುವುದು ಹೇಗೆ? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಆಸ್ತಿ ಮಾಲೀಕರು ಅಕಾಲಿಕ ನಿಧನ ಹೊಂದಿದ ನಂತರ ಅವರ ವಾರಸುದಾರರು ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವುದು ಸಾಮಾನ್ಯ. ಆದರೆ, ಬಹುತೇಕ ವಾರಸುದಾರರು ಯಾವಾಗಲಾದರೂ ಮಾಡಿಸಿಕೊಂಡರೆ ಆಯಿತು ಎಂಬ ನಿರ್ಲಕ್ಷ್ಯ ತೋರುತ್ತಾರೆ. ನೆನಪಿರಲಿ, ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡಿಕೊಳ್ಳದಿದ್ದರೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಆಸ್ತಿ ಮಾಲೀಕರು ನಿಧನ ಹೊಂದಿದ ಬಳಿಕ ಪೌತಿ ಖಾತೆಯಡಿ ಜಮೀನು ವರ್ಗಾವಣೆ ಮಾಡಿಕೊಳ್ಳದಿದ್ದರೆ ಜಮೀನುಗಳ ಸ್ವಾಧೀನ ಹೊಂದಿದ್ದರೂ ಉಪಯೋಗವಿಲ್ಲದಂತೆ ಆಗುತ್ತದೆ. ಪ್ರಕೃತಿ ವಿಕೋಪದಿಂದಾಗಿ ಬೆಳೆ ನಷ್ಟವಾದರೆ ಬೆಳೆ ವಿಮೆಯಾಗಲಿ ಅಥವಾ ಬೆಳೆ ನಷ್ಟ ಪರಿಹಾರ ಪಡೆಯುವುದಕ್ಕೆ ಆಗಲಿ ಆಗುವುದಿಲ್ಲ. ಇನ್ನು ಬ್ಯಾಂಕ್​ಗಳಿಂದ ಸಾಲ – ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಅದರ ಜೊತೆಗೆ ಮುಂದೆ ಹೊಸ ಹೊಸ ಕಾನೂನುಗಳು ಬಂದು ಕಚೇರಿಗಳಿಗೆ ಹಲವು ಬಾರಿ ಅಲೆದಾಡುವ ಸಂದರ್ಭಗಳು ಬರಬಹುದು. ಹಾಗಾಗಿ ಆಸ್ತಿಯನ್ನು ಪೌತಿ ಖಾತೆಯಡಿ ಬದಲಾವಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ .ಇನ್ನು ವಾರಸುದಾರರು ಪಿತ್ರಾರ್ಜಿತ ಆಸ್ತಿಯನ್ನು ತಮ್ಮ ಹೆಸರಿಗೆ ಬಹಳಷ್ಟು ರೈತರು ಬದಲಾವಣೆ ಮಾಡಿಕೊಂಡಿಲ್ಲ. ಆಸ್ತಿ ಮಾಲೀಕರ ಮರಣ ಪ್ರಮಾಣ ಪತ್ರ ಇಲ್ಲದೇ ಜಮೀನಿನ ಖಾತೆ ವರ್ಗಾವಣೆ ಸಾಧ್ಯವಾಗುತ್ತಿಲ್ಲ. ಪೂರ್ವಿಕರ ಮರಣ ಪ್ರಮಾಣ ಪತ್ರಗಳನ್ನು ಕಾನೂನಾತ್ಮಕವಾಗಿ ಪಡೆಯಲು ಮಾಹಿತಿ ಕೊರತೆ ಇರುವ ಕಾರಣ ಕೆಲವು ರೈತರು ತಮ್ಮ ಹೆಸರಿನಲ್ಲಿ ವರ್ಗಾವಣೆ ಮಾಡಿಕೊಂಡಿಲ್ಲ.
ನಿಯಮದ ಪ್ರಕಾರ ಹೇಳುವುದಾದರೆ, ಗ್ರಾಮಗಳಲ್ಲಿ ವ್ಯಕ್ತಿ ನಿಧನರಾದ 28 ದಿನದೊಳಗೆ ಸಂಬಂಧಪಟ್ಟ ಗ್ರಾಮ ಲೆಕ್ಕಿಗರೇ ಮರಣ ಪ್ರಮಾಣ ಪತ್ರ ನೀಡಬೇಕು. ಒಂದು ವರ್ಷದೊಳಗಿದ್ದರೆ ತಹಶೀಲ್ದಾರರು ನೀಡಬಹುದು. ಒಂದು ವರ್ಷ ಮೇಲ್ಪಟ್ಟ ಪ್ರಕರಣಗಳಿದ್ದರೆ ಜೆಎಂಎಫ್ ನ್ಯಾಯಾಲಯದ ಮೂಲಕವೇ ದಾವೆ ಹೂಡಿ ಮರಣ ಪ್ರಮಾಣ ಪತ್ರ ಪಡೆದು ಪೌತಿ ಖಾತೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ನಿಮ್ಮ ಜಮೀನು ನಿಮ್ಮ ಹೆಸರಿಗೆ ಆಗಿಲ್ಲವೆಂದರೆ ಚಿಂತಿಸುವ ಅಗತ್ಯವಿಲ್ಲ. ಕುಟುಂಬದ ಮುಖ್ಯಸ್ಥರು ನಿಧನರಾದ ಆನೇಕ ವರ್ಷಗಳಾದರೂ ಸಹ ಜಮೀನು ನಿಮ್ಮ ಹೆಸರಿಗೆ ವರ್ಗಾವಣೆ ಆಗದಿದ್ದರೆ ಚಿಂತಿಸುವ ಅವಶ್ಯಕತೆ ಇಲ್ಲ. ಪೌತಿ ಖಾತೆಯ ಮೂಲಕ ಸುಲಭವಾಗಿ ನಿಮ್ಮ ಜಮೀನು ಅಥವಾ ಆಸ್ತಿ ವರ್ಗಾವಣೆ ಮಾಡಿಕೊಳ್ಳಲು ಈಗ ಸರಕಾರ ದಾಖಲೆಗಳಿಗೆ ರಿಯಾಯಿತಿ ನೀಡಿದೆ ನಿಮ್ಮ ತಾತಾ ಮುತ್ತಾತಂದಿರ ಮರಣ ಪ್ರಮಾಣ ಪತ್ರವಿಲ್ಲ ಎಂಬ ಚಿಂತೆ ಬಿಡಿ ಕೂಡಲೆ ನಿಮ್ಮ ತಾತಾ ಮುತ್ತಾಂದಿರ ಹಾಗೂ ಕುಟುಂಬ ಆಸ್ತಿ ಹೊಂದಿದವರು ಮರಣ ಪತ್ರ ಇಲ್ಲದಿದ್ದರೂ ನೀವು ಪೌತಿ ಖಾತೆಗೆ ಅರ್ಜಿ ಸಲ್ಲಿಸಿದರೆ ಸಂಬಂಧ ಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ನಿಮ್ಮ ಜಮೀನು ಹಾಗೂ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಮಹಾಜರ್ ಮಾಡಿ ಜಮೀನು ಖಾತೆ ಹೊಂದಿದ ಮೃತನ ಕುಟುಂಬಸ್ಥರ ಹೆಸರಿಗೆ ಖಾತೆ ಮಾಡಿಕೊಡಲಾಗುವುದು. ಬಹಳ ವರ್ಷಗಳಿಂದ ಪೌತಿ ಖಾತೆ ಮಾಡಿಸಿಕೊಳ್ಳಲು ದಾಖಲೆಗಳ ಲಭ್ಯವಿಲ್ಲದೆ ತಾಲೂಕು ಕಚೇರಿಗೆ ಅಲೆದು ಸುಸ್ತಾದವರಿಗೆ ಈಗ ಪೌತಿ ಖಾತೆ ಮಾಡಿಸಿಕೊಳ್ಳಲು ಸುವರ್ಣ ಅವಕಾಶ ಸರಕಾರ ನೀಡಿದೆ .

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page