ರೈತರಿಗೆ ವರದಾನವಾಗ ಬೇಕಿದ್ದ ನರೇಗಾ ಕೃಷಿಹೊಂಡ ನಿರ್ಮಾಣ ಮಧ್ಯವರ್ತಿಗಳ ಪಾಲಿಗೆ ವರದಾನ.

by | 25/10/23 | ತನಿಖಾ ವರದಿ


ಚಳ್ಳಕೆರೆ ಜನಧ್ವನಿ ವಾರ್ತೆ 25 ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಯೋಜನೆಯಡಿ ಅಂತರ್ಜಲ ಅಭಿವೃದ್ಧಿ ಮಾಡುವುದಕ್ಕೆ ಹಾಗೂ ಮಣ್ಣು ಮತ್ತು ನೀರು ಸಂರಕ್ಷಣೆಯ ಕಾಮಗಾರಿಗಳನ್ನು ಕೈಕೊಳ್ಳಲಾಗಿದೆ.

ರೈತರು ತಮ್ಮ ಹೊಲದಲ್ಲಿ ಬದು ನಿರ್ಮಾಣ ಹಾಗೂ ಕೃಷಿಹೊಂಡ ಮಾಡಿಕೊಂಡು ಮಳೆ ಬಂದಾಗ ನೀರು ಶೇಖರಣೆಯಾಗಿ ಅಂತರ್ಜಲ ಹೆಚ್ಚಳಕ್ಕೆ ಒತ್ತು ನೀಡಲು ನರೇಗಾ ಯೋಜನೆಯಡಿ ರೈತರಿಗೆ ಕೃಷಿಹೊಂಡ ಹಾಗೂ ಬದು ನಿರ್ಮಾಣ ಮಾಡಲು ಅವಕಾಶ ನೀಡಿದೆ ಆದರೆ ಇದನ್ನೇ ಬಂಡವಾಳಿ ಮಾಡಿಕೊಂಡ ಮಧ್ಯವರ್ತಿಗಳು ರೈತರ ಹೆಸರಿನಲ್ಲಿ ಹಣ ಲೂಟಿ ಮಾಡಿ ಜೇಬು ತುಂಬಿಸಿಕೊಳ್ಳುತ್ತಿರುವುದು ಬಯಲಾಗಿದೆ.
ಹೌದು ನಾಯಕನಟ್ಟಿ ಹೋಬಳಿಯ ರೈತ ಸಂಪರ್ಕ ವ್ಯಾಪ್ತಿಯ ಹಾಗೂತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ವ್ತಾಪ್ತಿಯ ವಿವಿಧ ಗ್ರಾಮದ ರೈತರ ಜಮೀನಿನಲ್ಲಿ ಕೃಷಿ ಹೊಂಡ ನಿರ್ನಿಸಲಾಗಿದೆ ಎಂದು ತೋರಿಸಿ ನರೇಗಾ ಅಡಿಯಲ್ಲಿ ಲಕ್ಷ ಲಕ್ಷ ಹಣ ಲೂಟಿ ಮಾಡಿದ್ದಾರಿವುದು ಬೆಳಕಿಗೆ ಬಂದಿದೆ.


ನಾಯಕನಹಟ್ಟಿ ಹೋಬಳಿಯ ಗಿಡ್ಡಪುರ ಗ್ರಾಮದಲ್ಲಿ ರೈತರ ಜಮೀನಿನಲ್ಲಿ ಕೃಷಿ ಹೊಂಡದ ಬದಲು ಸರಕಾರಿ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಿಸಿರುವುದು ರೈತರಿಂದಲೇ ಬಟಾ ಬಯಲಾಗಿದೆ.
ರೈತರನ್ನ ಉದ್ಧಾರ ಮಾಡ್ತೀವಿ ಅನ್ನೋ ಕೃಷಿ ಇಲಾಖೆ ಅಧಿಕಾರಿಗಳೇ ರೈತರ ಹೆಸರಿನಲ್ಲಿ ಮಧ್ಯವರ್ತಿಗಳು ಕೃಷಿ ಹೊಂಡ ನಿರ್ಮಿಸಲಾಗಿದೆ ಎಂದು ಟೋಪಿ ಹಾಕಿದ್ದಾರೆ. ರೈತರ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿದ್ದೀವಿ ಅಂತಾ ರೈತರ ಹೆಸರಿನಲ್ಲಿ ಮಧ್ಯವರ್ತಿಗಳು ಲಕ್ಷ ಲಕ್ಷ ಉಂಡೆನಾಮ ಹಾಕಿರುವುದು ಬೆಳಕಿಗೆ ಬಂದಿದೆ.


ಚಳ್ಳಕೆರೆ ತಾಲೂಕು ಬರಗಾಲ ಎಂದು ಘೋಷಣೆ ಮಾಡಿದೆ ಅತಿ ಹೆಚ್ಚು ಕಡಿಮೆ ಮಳೆ ಬೀಳುವ ಪ್ರದೇಶ ಎಂಬ ಹಣೆ ಪಟ್ಟಿಕಟ್ಟಿಕೊಂಡಿರುವ ಬರಪೀಡಿತ ಹಾಗೂ ಬಯಲು ಸೀಮೆಯಲ್ಲಿ ಮಳೆ ನೀರು ಇಂಗಿಸಲು ಹಾಗೂ ರೈತರ ಜೀವನೋಪಾಯಕ್ಕೆ ಸಹಕಾರಿಯಾಗಲೆಂದ ನರೇಗಾ ಯೋಜನೆಯಡಿಯಲ್ಲಿ ರೈತರ ಜಮೀನಲ್ಲಿ ಮಣ್ಣು ಸವಕಳಿ ಹಾಗೂ ನೀರು ಇಂಗಿಸಲು ಕೃಷಿಹೊಂಡ ಬದು ನಿರ್ಮಾಣ ಮಾಡಿಕೊಳ್ಳಲು ಸರಕಾರ ಮುಂದಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಮಧ್ಯವರ್ತಿಗಳು ರೈತರ ಗಮಕ್ಕೂ ತಾರದೆ ರೈತರ ಹೆಸರಿನಲ್ಲಿ ಸರಕಾರಿ ಭೂಮಿಯಲ್ಲಿ ಕೃಷಿಹೊಂಡ ನಿರ್ಮಿಸಿ ಅನ್ನದಾತರ ಹೆಸರಿನಲ್ಲಿ ಹುಂಡೆನಾಮ ಹಾಕಿ ರೈತರಿಗೆ ವರದಾನವಾಗ ಬೇಕಿದ್ದ ನರೇಗಾ ಕೃಷಿಹೊಂಡ ಭಾಗ್ಯ ಮಧ್ಯವರ್ತಿಗಳ ಖಜಾನೆ ಸೇರುವಂತಾಗಿದೆ.
ಸರಿಯಾಗಿ ಮಳೆ ಬಂದರೆ ಬೆಳೆಗೆ ಬೆಲೆಯೇ ಇಲ್ಲ. ಇನ್ನೊಂದೆಡೆ ವರುಣದೇವ ಮುನಿಸಿಕೊಂಡಿರುವ ಭಯಾ. ಆತಂಕ. ಒಟ್ನಲ್ಲಿ ರೈತರು ಅಕ್ಷರಶಃ ನಲುಗಿ ಹೋಗಿದ್ದಾರೆ. ಅದ್ರಲ್ಲೂ ಬರದ ನಾಡಿನ ಬಯಲು ಸೀಮೆಯ ರೈತರಿಗೆ ಕೃಷಿಹೊಂಡ ನಿರ್ಮಾಣದಲ್ಲಿ ಗೋಲ್ ಮಾಲ್ ಮಾಡಿದ್ದಾರೆ ಎಂದು ರೈತರೇ ಆರೋಪಿಸಿದ್ದಾರೆ.


ರೈತರನ್ನ ಉದ್ಧಾರ ಮಾಡ್ತೀವಿ ಅನ್ನೋ ಕೃಷಿ ಇಲಾಖೆ ಅಧಿಕಾರಿಗಳೇ ಅನ್ನದಾತರ ಹೆಸರಿನಲ್ಲಿ ಕೃಷಿಹೊಂಡ ನಿರ್ಮಿಸಿ ಬಿಲ್ ಪಡೆದಿರುವ ಕಾಮಗಾರಿಗಳನ್ನು ತನಿಖೆ ನಡೆಸಿ ಮಧ್ಯವರ್ತಿಗಳ ವಿರುದ್ದ ಕ್ರಮಕೈಗೊಳ್ಳಿ.
ಕೃಷಿಹೊಂಡ ಗೋಲ್​ಮಾಲ್ ಮಾಡಿರೋ ಬಗ್ಗೆ ಈಗಾಗಲೆ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ. ತಾಪಂ ಇ ಒ. ಹಾಗೂ ಕೃಷಿ ಇಲಾಖೆ ಅಧಿಕಾರಿಗಳಿಗೆ ದೂರೂ ಸಹ ನೀಡಲಾಗಿದೆ.

ರೈತರ ಹೆಸರಿನಲ್ಲಿ ಗೋಲ್​ಮಾಲ್?

ಯೆಸ್ ಬೇಸಿಗೆಗಾಲದಲ್ಲಿ ರೈತರಿಗೆ ಅನುಕೂಲ ಆಗಲಿ ಅಂತಾ ಸರ್ಕಾರ ಕೃಷಿ ಹೊಂಡಗಳ ನಿರ್ಮಾಣಕ್ಕೆ ಭಾರಿ ಒತ್ತು ನೀಡುತ್ತಿದೆ. ಇದಕ್ಕಾಗಿ ಸಹಾಯ ಧನವನ್ನೂ ವಿತರಿಸುತ್ತಾ ಬಂದಿದೆ. ಆದ್ರೆ ಇದೆಲ್ಲಾ ಸರಿಯಾಗಿ ಬಳಕೆ ಆಗ್ತಾ ಇದಿಯಾ ಅನ್ನೋ ಪ್ರಶ್ನೆಗೆ ಉತ್ತರ ಮಾತ್ರ ಸಿಕ್ಕಿಲ್ಲ. ಈ ಹೊತ್ತಲ್ಲೇ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿ ರೈತ ಸಂಪರ್ಕ ವಾಪ್ತಿಯಲ್ಲಿ ಕೃಷಿ ಹೊಂಡ ಕಾಮಗಾರಿಗಳ ಗೋಲ್ ಮಾಲ್ ಸದ್ದು ಜೋರಾಗಿದೆ.

ಒಟ್ನಲ್ಲಿ ರೈತರ ಕಲ್ಯಾಣಕ್ಕಾಗಿ ಸರ್ಕಾರವೇನೋ ಸಾವಿರಾರು ಕೋಟಿ ವ್ಯಯ ಮಾಡುತ್ತಿದೆ. ಅದ್ರೆ ಇಲಾಖೆಗಳ ಮುಖ್ಯಸ್ಥರ ಬೇಜವಾಬ್ದಾರಿತನದಿಂದ ಮಧ್ಯವರ್ತಿಗಳ ಪಾಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವರೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page