ಬ್ಯಾಂಕ್‌ ಖಾತೆಗೆ ಬರುವ ಕೃಷಿ ಉತ್ಪನ್ನ ಮಾರಾಟದ ಹಣ . ಸಾಮಾಜಿಕ ಭದ್ರತಾ ಪಿಂಚಿಣಿ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ಬಲವಂತವಾಗಿ ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಲಾಗುವುದು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಖಡಕ್ ಸೂಚನೆ.

by | 04/11/23 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ನ.4 ಬ್ಯಾಂಕ್‌ ಖಾತೆಗೆ ಬರುವ ಕೃಷಿ ಉತ್ಪನ್ನ ಮಾರಾಟದ ಹಣ . ಸಾಮಾಜಿಕ ಭದ್ರತಾ ಪಿಂಚಿಣಿ ಬೆಳೆ ಪರಿಹಾರದ ಹಣವನ್ನು ಬ್ಯಾಂಕುಗಳು ಬಲವಂತವಾಗಿ ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಲಾಗುವುದು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಖಡಕ್ ಸೂಚನೆ ನೀಡಿದ್ದಾರೆ.

ತಾಲೂಕಿನ ಪರಶುರಾಂಪುರ ಹೋಬಳಿ ವ್ಯಾಪ್ತಿಯ ಸಿದ್ದೇಶ್ವರದುರ್ಗ. ಪಿ.ಮಹದೇವಪುರ ಗ್ರಾಮಪಂಚಾಯಿತಿ ಮಟ್ಟದ ಸಾರ್ವಜನಿಕ ಕುಂದು ಕೊರತೆ ಸಭೆಯ ಲ್ಲಿ ಸಾರ್ಯವ ಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು . ತಾಲೂಕಿನಲ್ಲಿ ಬೇಸಿಗೆ ಮುನ್ನವೇ ಮಳೆಗಾಲವಾದರೂ ಮಳೆ ಬಾರದೆ ಬಿಸಿಲಿನ ತಾಪ ಹೆಚ್ಚಾಗಿದ್ದು ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಮೇವಿನ ಕೊರತೆಯಾಗದಂತೆ ಸರಕಾರದ ಬಂದ ಅನುದಾವನ್ನು ದುರುಪಯೋಗ ಮಾಡದೆ ಸಾರ್ವಜನಿಕರ ಅವಶ್ಯಕತೆಯಿರುವ ಸಮಸ್ಯೆಗಳಿಗೆ ಖರ್ಚು ಮಾಡ ಬೇಕು. ಬರಗಾಲ ವಿರುವುದರಿಂದ ರೈತರಿಗೆ.ಕೂಲಿಕಾರ್ಮಿಕರಿಗೆ ನರೇಗಾ ಯೋಜನೆಯಡಿ ದುಡಿತುವ ಕೈಗಳಿಗೆ ಕೆಲಸ ನೀಡಬೇಕು. ಗ್ರಾಮಗಳಲ್ಲಿ ಚರಂಡಿ.ಬೀದಿ ದೀಪ.ಕುಡಿಯುವ ನೀರು.ಸ್ವಚ್ಚತೆ .ಇ-ಸ್ವತ್ ವಸತಿ. ನಿವೇಶನ. ಶೌಚಾಲಯ. ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿದೆರೆ ಹಾಗೂ ಕಚೇರಿಗೆ ಬಂದ ಸಾರ್ವಜನಿಕರನ್ನು ಸೌಜನ್ಯದಿಂದ ಮಾತನಾಡಿಸಿ ಕಚೇರಿಗೆ ಅಲೆದಾಡಿಸದೆ ಕೆಲಸ ಮಾಡಿಕೊಡುವಂತೆ ಸೂಚನೆ ನೀಡಿದರು. ಮಳೆ ಬೆಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದು ಅವರ ಖಾತೆಗೆ ಬಂದ ಸರಕಾರದ ಹಣವನ್ನು ರೈತರ ಗಮನಕ್ಕೆ ತಾರದೆ ಸಾಲಕ್ಕೆ ಜಮೆ ಹಾಗೂ ಬ್ಯಾಂಕ್ ಖಾತೆಯನ್ನು ಲಾಕ್ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಚಿತ್ರದುರ್ಗ ಜಿಲ್ಲೆಗೆ ಸರ್ಕಾರ 9 ಕೋಟಿ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದು ಶೀಘ್ರದಲ್ಲಿ ರೈತರ ಖಾತೆಗೆ ಜಮೆ ಆಗಲಿದೆ ಯಾವುದೇ ಕಾರಣಕ್ಕೂ ಬ್ಯಾಂಕ್ ಅಧಿಕಾರಿಗಳು ರೈತರ ಮನೆಗಳ ಮುಂದೆ ಹೋಗಿ ಸಾಲ ಕಟ್ಟುವಂತೆ ಒತ್ತಾಯ ಮಾಡಬಾರದು . ಬ್ಯಾಂಕ್ ನಲ್ಲಿ‌ರೈತರ ಬ್ಯಾಂಕ್ ಖಾತೆಯಲ್ಲಿರುವ ಹಣ ಸಾಲಕ್ಕೆ ಜಮ ಮಾಡಿಕೊಳ್ಳದಂತೆ ತಾಕೀತು ಮಾಡಿದರು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೇಹಾನ್ ಪಾಷಾ, ತಾ ಪಂ ಇ ಒ ಶಶಿಧರ್ , ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪುಟ್ಟೀರಮ್ಮ, ಉಪಾಧ್ಯಕ್ಷರಾದ ಲಕ್ಷ್ಮೀದೇವಿ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ಮುಖಂಡರುಗಳಾದ ದೇವರಾಜ್, ಹನುಮಂತರೆಡ್ಡಿ, ಹನುಮಂತರಾಯ, ಶಶಿಕುಮಾರ್, ರಂಗನಾಥ, ರಾಘವೇಂದ್ರ, ಮುಖಂಡರು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page