ಸಹಕಾರಿಕ್ಷೇತ್ರ ದೇಶದ ಆರ್ಥಿಕ ಪ್ರಗತಿಗೆ ಅಪಾರವಾದ ಕೊಡುಗೆಯನ್ನ ನೀಡಿದೆ :ಸಹಕಾರರತ್ನ ವೀರಭದ್ರಬಾಬು

by | 16/11/23 | ಸುದ್ದಿ


ಹಿರಿಯೂರು :
ಈ ಸಹಕಾರಿ ಚಳುವಳಿಗೆ ಸುಮಾರು 120 ವರ್ಷಗಳ ಇತಿಹಾಸವಿದ್ದು, ಈ ಸಹಕಾರಿ ಕ್ಷೇತ್ರ ದೇಶದ ಆರ್ಥಿಕ ಪ್ರಗತಿಗೆ ಸಾಕಷ್ಟು ಕೊಡುಗೆ ನೀಡಿದೆ, ಈ ದೇಶದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಸಹಕಾರ ಸಂಘಗಳು ಕೆಲಸ ನಿರ್ವಹಿಸುತ್ತಿದ್ದು, ಸುಮಾರು 60-70 ಸಾವಿರ ಕೋಟಿ ರೂಗಳ ಠೇವಣಿ ಹೊಂದಿದೆ, ಅಲ್ಲದೆ ಈ ಸಹಕಾರಿ ಸಂಘಗಳ ಮೂಲಕ ಸಾವಿರಾರು ಜನರಿಗೆ ಉದ್ಯೋಗ ಅವಕಾಶಗಳು ಸೇರಿದಂತೆ ಬಡಜನರಿಗೆ ಆರ್ಥಿಕ ಸಹಾಯ ನೀಡುವ ಮೂಲಕ ನಮ್ಮ ದೇಶ ಆರ್ಥಿಕ ಸಬಲತೆ ಗಳಿಸಲು ಸಾಧ್ಯವಾಗಿದೆ ಎಂಬುದಾಗಿ ಕೆಎಂ.ಎಫ್ ಹಾಗೂ ಡಿಸಿಸಿ ನಿರ್ದೇಶಕರು, ಸಹಕಾರರತ್ನ ಪ್ರಶಸ್ತಿ ಪುರಸ್ಕೃತ ವೀರಭದ್ರಬಾಬು ಹೇಳಿದರು.
ನಗರದ ಗುರುಭವನದಲ್ಲಿ ರಾಜ್ಯ ಸಹಕಾರಿ ಮಹಾಮಂಡಳಿ ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ಚಿತ್ರದುರ್ಗ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಚಿತ್ರದುರ್ಗ, ತಾಲ್ಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಸಹಕಾರಸಂಘ, ತಾಲ್ಲೂಕಿನ ಎಲ್ಲಾ ಪತ್ತಿನ ಸಹಕಾರ ಸಂಘಗಳು, ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳು, ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 70ನೇ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿವರ್ಷ ನವಂಬರ್ 14 ರಿಂದ 20ರವರೆಗೆ ರಾಜ್ಯಾದ್ಯಂತ ಹಾಗೂ ರಾಷ್ಟ್ರಾದ್ಯಂತ ಈ ಸಹಕಾರಿ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸಹಕಾರ ಚಳುವಳಿ ನಡೆದು ಬಂದ ದಾರಿ ಹಾಗೂ ಈ ದಾರಿಯಲ್ಲಿನ ಸಾಧನೆ ಹಾಗೂ ವೈಫಲ್ಯಗಳನ್ನು ಕುರಿತು ಚಿಂತನ-ಮಂಥನ ನಡೆಸಲಾಗುತ್ತದೆ ಎಂಬುದಾಗಿ ಹೇಳಿದರು.
ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಪ್ರತಾಪಸಿಂಹ ಮಾತನಾಡಿ, ಸಹಕಾರಿ ಕ್ಷೇತ್ರ ವಿಶಾಲವಾದ ವ್ಯಾಪ್ತಿಪ್ರದೇಶವನ್ನು ಹೊಂದಿದ್ದು, ಈ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಎಲ್ಲಾ ರೀತಿಯ ಸಾಲಸೌಲಭ್ಯ ದೊರಕಲಿದ್ದು, ಪಶುಸಂಗೋಪನೆಗೆ ಸಹಾಯಧನ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ರೈತರಿಗೆ ರಸಗೊಬ್ಬರಗಳ ರಿಯಾಯಿತಿ ಸೇರಿದಂತೆ ಎಲ್ಲಾರೀತಿಯ ಸೌಲಭ್ಯಗಳು ದೊರಕುತ್ತಿವೆ ಎಂಬುದಾಗಿ ಹೇಳಿದರು.
ಆರಂಭದಲ್ಲಿ ಪ್ರಾಸ್ತಾವಿಕನುಡಿಗಳನ್ನಾಡಿದ ವಾಣಿವಿಲಾಸ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಆಲೂರು ಹನುಮಂತರಾಯಪ್ಪ ಮಾತನಾಡಿ, ನಮ್ಮ ಚಿತ್ರದುರ್ಗ ಜಿಲ್ಲೆ ಸಹ ರಾಜ್ಯದ ಸಹಕಾರಿ ಕ್ಷೇತ್ರಕ್ಕೆ ರಾಜ್ಯದ ಸಹಕಾರ ಸಚಿವರಾಗಿದ್ದ ದಿವಂಗತ ಬಿ.ಎಲ್.ಗೌಡ, ಕೆ.ಹೆಚ್.ರಂಗನಾಥ್, ಹೆಚ್.ಏಕಾಂತಯ್ಯ, ಹಾಗೂ ದಿವಂಗತ ವಿ.ಮಸಿಯಪ್ಪ ಇಂತಹ ಮಹನೀಯರನ್ನು ಕೊಡುಗೆಯಾಗಿ ನೀಡಿದ್ದು, ಇವರೆಲ್ಲರ ಕನಸಿನಕೂಸು ಹಾಗೂ ಜಿಲ್ಲೆಯ ರೈತರ ಜೀವನಾಡಿಯಾಗಿದ್ದ ವಾಣಿವಿಲಾಸ ಸಕ್ಕರೆ ಕಾರ್ಖಾನೆಯನ್ನು ರಾಜ್ಯಸರ್ಕಾರ ಪುನರಾರಂಭಿಸಬೇಕು ಎಂಬುದಾಗಿ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಸಹಕಾರಿಗಳನ್ನು ಹಾಗೂ ಉತ್ತಮ ಸಹಕಾರ ಸಂಘಗಳ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ವ್ಯವಸ್ಥಾಪಕರು, ಕಾರ್ಯದರ್ಶಿಗಳನ್ನು ಶಾಲುಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕರು ಹಾಗೂ ಟಿಎಪಿಸಿಎಂಎಸ್ ಅಧ್ಯಕ್ಷರಾದ ಎಸ್.ಜೆ.ಹನುಮಂತರಾಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ರಾಜು, ಸಹಕಾರರತ್ನ ಪುರಸ್ಕೃತರು ಹಾಗೂ ರಾಜ್ಯ ಸಹಕಾರ ಮಹಾಮಂಡಳಿ ನಿರ್ದೇಶಕರಾದ ರಾಮರೆಡ್ಡಿ, ಸಂಪನ್ಮೂಲ ವ್ಯಕ್ತಿ ಐ.ಎಂ.ಚಂದ್ರಶೇಖರಯ್ಯ, ಸಿಮುಲ್ ನಿರ್ದೇಶಕರಾದ ಯಶವಂತರಾಜ್, ಕೃಷಿಕ ಸಮಾಜದ ಅಧ್ಯ್ಕ್ಷ ಹೆಚ್.ಆರ್.ತಿಮ್ಮಯ್ಯ, ಕೆಂಪೇಗೌಡ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಂದಿಕೆರೆ ಜಗದೀಶ್, ಪಿಎಲ್.ಡಿ ಬ್ಯಾಂಕ್ ಅಧ್ಯಕ್ಷರಾದ ಕೀರ್ತಿ ಕುಮಾರಿ, ಪ್ರಭಾರ ಸಹಕಾರ ಸಂಘದ ಉಪನಿರ್ದೇಶಕರಾದ ಟಿ.ಮಧುಶ್ರೀನಿವಾಸ್, ಸಹಕಾರಿ ಸಂಘಗಳ ಲೆಕ್ಕಪರಿಶೋಧ ಉಪನಿರ್ದೇಶಕರಾದ ಕೆ.ಮಹೇಶ್ವರಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಗಳಾದ ಕೆ.ಶಿವಮೂರ್ತಿ, ಜಿಲ್ಲಾ ಸಹಕಾರಿ ಯೂನಿಯನ್ ಸಿಇಓ ನಾಗರಾಜ್ ಪಾಟೀಲ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರಾದ ಸತೀಶ್ ನಾಯ್ಕ, ಮೇಲ್ವಿಚಾರಕರುಗಳಾದ ಶಶಿಧರ್, ಹಾಗೂ ಶ್ರೀರಧರ್, ಟಿಎಪಿಸಿಎಂಎಸ್ ಕಾರ್ಯದರ್ಶಿ ಗುರುಸ್ವಾಮಿ, ತಾಲ್ಲೂಕು ಸಹಕಾರಿ ಸಂಘಗಳ ನೌಕರರ ಒಕ್ಕೂಟದ ಅಧ್ಯಕ್ಷ ಎಸ್.ಎಸ್.ರಂಗಪ್ಪ, ಉಪಾಧ್ಯರಕ್ಷ ರಾಮಚಂದ್ರಯ್ಯ, ಕಾರ್ಯದರ್ಶಿ ಕೆ.ಎಸ್.ರಂಗಸ್ವಾಮಿ, ಖಜಾಂಚಿ ಎಂ.ಜಗದೀಶ್, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page