ತಾಯಿ, ಶಿಶು ಮರಣ ಪ್ರಮಾಣ ತಗ್ಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ

by | 17/11/23 | ಆರೋಗ್ಯ


ಬಳ್ಳಾರಿ,ನ.17
ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವ ಗರ್ಭಿಣಿ ಮಹಿಳೆಯರಿಗೆ ಅಗತ್ಯ ಪರೀಕ್ಷೆ ನಡೆಸಿ, ಕಾಲ ಕಾಲಕ್ಕೆ ಸೂಕ್ತ ಲಸಿಕೆ ನೀಡಬೇಕು. ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಅವರು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಅಭಿಯಾನದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಯಂದಿರ ಮರಣವನ್ನು ತಡೆಯುವುದು, ಅನಗತ್ಯ ಗರ್ಭಧಾರಣೆಯನ್ನು ತಡೆಯುವುದು ಅತ್ಯಗತ್ಯವಾಗಿದೆ. ಗರ್ಭಪಾತ ಮತ್ತು ಅಪೂರ್ಣ ಗರ್ಭಪಾತಕ್ಕೆ ಸಂಬಂಧಿಸಿದ ಸಂಭವನೀಯ ತೊಡಕುಗಳ ಬಗ್ಗೆ ಆರೋಗ್ಯ ಸಮುದಾಯವು ತಿಳಿಯಬೇಕು ಎಂದರು.
ಪ್ರಮುಖವಾಗಿ ಗರ್ಭಿಣಿ ತಾಯಿಯ ಸಾವುಗಳು ತೀವ್ರ ರಕ್ತಸ್ರಾವ, ಸೋಂಕುಗಳು, ಅಸುರಕ್ಷಿತ ಗರ್ಭಪಾತ, ಗರ್ಭಾವಸ್ಥೆಯಲ್ಲಿ ಅಧಿಕ ರಕ್ತದೊತ್ತಡ ಮತ್ತು ಅಸಮರ್ಪಕ ಹೆರಿಗೆಯಿಂದ ಉಂಟಾಗಲಿದ್ದು, ಇದಕ್ಕೆ ವೈದ್ಯಾಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು.
ಗರ್ಭಿಣಿ ಮಹಿಳೆಯರಿಗೆ, ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೌಲಭ್ಯಗಳು ದೂರವಾಗಿದ್ದು, ಕೆಲವು ಅಸಮರ್ಪಕ ಮತ್ತು ಕಳಪೆ ಗುಣಮಟ್ಟದ ಪ್ರಸವಪೂರ್ವ ಸೇವೆಗಳು ತಾಯಿಯ ಆರೋಗ್ಯ ಫಲಿತಾಂಶಗಳ ಮೇಲೆ ಪ್ರಭಾವ ಬೀರುತ್ತವೆ. ಇವುಗಳನ್ನು ತಪ್ಪಿಸಲು ಜಾಗೃತಿ ಮತ್ತು ಅಗತ್ಯ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಕಾಲ ಕಾಲಕ್ಕೆ ಅಗತ್ಯವಾದ ಲಸಿಕೆ ನೀಡಬೇಕು, ಯಾವುದೇ ಗರ್ಭಿಣಿ ಮತ್ತು ಶಿಶುಗಳು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಆಶಾ ಕಾರ್ಯಕರ್ತೆಯರಿಗೆ ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಹೆರಿಗೆಗಳು ಸಂಭವಿಸಿದಾಗ ಅಲ್ಲಿನ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತುರ್ತಾಗಿ ಆಸ್ಪತ್ರೆಗೆ ದಾಖಲಿಸಿಕೊಳ್ಳಬೇಕು. ಬದಲಾಗಿ ದೂರದ ನಗರದ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡುವಂತಿಲ್ಲ, ಅತ್ಯಂತ ಕಠಿಣ ಪರಿಸ್ಥಿಯಲ್ಲಿ ಮಾತ್ರ ವಿಮ್ಸ್ ಅಥವಾ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಬೇಕು. ಅಲ್ಲಿನ ವೈದ್ಯಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಉಳಿದುಕೊಂಡು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಬಾಣಂತಿಯರಿಗೆ ಪೌಷ್ಟಿಕ ಆಹಾರದ ಸೇವನೆಯ ಮಹತ್ವ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಅಶಾಕಾರ್ಯಕರ್ತೆಯರು ಬಾಣಂತಿಯರ ಕಾಳಜಿ ವಹಿಸಬೇಕು. ಇದರಿಂದ ಬಾಲ್ಯದಲ್ಲಿಯೇ ಶಿಶು ಮರಣ ಸಂಭವಿಸುವ ಸಾಧ್ಯತೆ ಕಡಿಮೆಯಾಗಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು, ಜಿಲ್ಲೆಯಲ್ಲಿ ಸಂಭವಿಸಿದ ತಾಯಿ ಮತ್ತು ಶಿಶು ಮರಣ ಪ್ರಕರಣಗಳ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅನೀಲ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಟಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ವಿಮ್ಸ್ ಪ್ರಸೂತಿ ತಜ್ಞ ಡಾ.ವೀರೆಂದ್ರಕುಮಾರ, ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಆಯುಷ್ ಅಧಿಕಾರಿ ಡಾ,ಸುಜಾತ ಪಾಟೀಲ. ಸೇರಿದಂತೆ ಖಾಸಗಿ ಆಸ್ಪತ್ರೆ ವೈದ್ಯಾಧಿಕಾರಿಗಳು, ಶುಶೂಷ್ರಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page