ಗ್ರಾಮಪಂಚಾಯತಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸುವಂತೆ ರೈತಸಂಘದಿಂದ ಒತ್ತಾಯ

by | 04/12/23 | ಪ್ರತಿಭಟನೆ


ಹಿರಿಯೂರು :
ತಾಲೂಕಿನ ಯಾವ ಗ್ರಾಮ ಪಂಚಾಯತಿಯಲ್ಲೂ ಈ ಸ್ವತ್ತು ಖಾತೆ ಮಾಡುತ್ತಿಲ್ಲ, ಖಾಸಗಿ ಕಂಪ್ಯೂಟರ್ ಸೆಂಟರ್ ಗಳಲ್ಲಿ ಮಾಡಲಾಗುತ್ತಿದ್ದು, ಈ ಸ್ವತ್ತು ಖಾತೆಗೆ 1,50,000 ದಿಂದ ಕನಿಷ್ಠ 10,000 ದವರೆಗೆ ಹಣ ಪಡೆಯುತ್ತಿದ್ದಾರೆ ಎಂಬುದಾಗಿ ರೈತಸಂಘದ ತಾಲ್ಲೂಕು ಅಧ್ಯರಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಆಪಾದಿಸಿದ್ದಾರೆ.
ನಗರದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಬಗ್ಗೆ ಮನವಿಪತ್ರ ಸಲ್ಲಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಕಾಯ್ದೆ ಕಾನೂನುಗಳನ್ನು ಉಲ್ಲಂಘನೆ ಮಾಡಿ, ಅಕ್ರಮವಾಗಿ, ಕಾನೂನುಬಾಹಿರವಾಗಿ, ನಡೆಯುತ್ತಿರುವ ಅವ್ಯವಹಾರಗಳ ಕುರಿತು ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ತ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮಕೈಗೊಳ್ಳುವಂತೆ ಅವರು ಒತ್ತಾಯಿಸಿದರು
ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ರಾಜ ಪ್ರಮುಖರು, ರಾಜ್ಯಪಾಲರ ಹೆಸರಿನಲ್ಲಿ ಮತ್ತು ಶಿಕ್ಷಣಕ್ಕೆ ಮೀಸಲಿರಿಸಿದ ಸ್ಥಳ, ಸರ್ಕಾರಿ ಜಾಗ, ಗುಂಡು ತೋಪು, ಗ್ರಾಮ ಠಾಣಾ ಜಾಗಗಳಲ್ಲಿ ಈ ಸ್ವತ್ತು ಖಾತೆ ಮಾಡಲಾಗಿರುತ್ತಿದೆ ಹಣ ಕೊಡದೆ ಇದ್ದಲ್ಲಿ 2/3 ವರ್ಷ ಕಳೆದರೂ ಈ ಸ್ವತ್ತು ಖಾತೆ ಮಾಡಿಕೊಡುವುದಿಲ್ಲ.
ಅಲ್ಲದೆ ನಗರ ಹಾಗೂ ಗ್ರಾಮ ಸಭೆ ನಡೆಸದೆ ವಸತಿ ಯೋಜನೆ ಫಲಾನುಭವಿಗಳನ್ನು ಪಂಚಾಯತಿಯಲ್ಲಿ ಆಯ್ಕೆಮಾಡಲಾಗುತ್ತಿದ್ದು, ತಾಲೂಕಿನಲ್ಲಿ ವಿವಿಧ ವಸತಿ ಯೋಜನೆಗಳಲ್ಲಿ ಸುಮಾರು 5000ಕ್ಕೂ ಹೆಚ್ಚು ಮನೆಗಳು ಬೋಗಸ್ಸಾಗಿವೆ ಅನೇಕ ಬಾರಿ ಮನವಿ ಮಾಡಿದರು ಇದುವರೆಗೂ ತನಿಖೆ ನಡೆಸಿ ಕ್ರಮಕೈಗೊಂಡಿಲ್ಲ.
ಉದ್ಯೋಗ ಖಾತರಿ ಯೋಜನೆಯಲ್ಲಿ ಹಲವಾರು ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿ ನಡೆಸದೆ ಬಿಲ್ ಪಡೆದಿರುತ್ತಾರೆ ಮತ್ತು ರೈತರ ಕಾಮಗಾರಿಗಳಿಗೆ ಎನ್ ಎಂ ಆರ್ ಹಾಕದೆ ಅನೇಕ ಬಾರಿ ಜೋರು ಮಾಡುತ್ತಾರೆ ಮತ್ತು ರೈತರ ಕಾಮಗಾರಿಗಳಿಗೆ ಇದುವರೆಗೂ ಸಪ್ಲೇ ಬಿಲ್ ಕೊಟ್ಟಿರುವುದಿಲ್ಲ.
ಉದ್ಯೋಗ ಖಾತರಿ ಇಂಜಿನಿಯರ್ ಸರಿಯಾಗಿ ಕಾರ್ಯನಿರ್ವಹಿಸದೆ ಫಲಾನುಭವಿಗಳಿಗೆ ಎಂ ಬಿ ಬರೆಯಲು ಕೊಡುತ್ತಾರೆ. ಕಂಪ್ಯೂಟರ್ ಆಪರೇಟರ್ ಕೆಲವು ಅವರ ಪರಿಚಯಸ್ತರ ಅಕೌಂಟ್ ಗೆ ಹಣ ಹಾಕಿಕೊಳ್ಳುತ್ತಾರೆ ಮತ್ತು ಪಂಚಾಯತಿಯಲ್ಲಿ ಗ್ರಾಮಸ್ಥರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ.
ಜಲಜೀವನ್ ಯೋಜನೆ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದೆ, ಗ್ರಾಮಗಳಲ್ಲಿ ಐ ಮಾಕ್ಸ್ ಅಳವಡಿಸುವಲ್ಲಿ ಬಾರಿ ಅವ್ಯವಾರ ನಡೆದಿದೆ, ಗ್ರಾಮ ನೈರ್ಮಲ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು ಪೆನಾಯಿಲ್, ಬ್ಲಿಚಿಂಗ್ ಪೌಡರ್ ಬಳಸುತ್ತಿಲ್ಲ, ಇವುಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದರಲ್ಲದೆ,
ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ಕೈಗಾರಿಕೆಗಳು ಮತ್ತು ವಾಣಿಜ್ಯ ಕಂಪನಿಗಳಲ್ಲಿ ಉತ್ಪಾದನೆಗೆ ಅನುಗುಣವಾಗಿ ತೆರಿಗೆ ವಸೂಲಾತಿ ಮಾಡದೆ ಅಧಿಕಾರಿಗಳು ಕಂಪನಿಯ ಮಾಲೀಕರೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ವಸೂಲಾತಿ ಆಗುತ್ತಿಲ್ಲ. ಅನೇಕ ಕೈಗಾರಿಕೆ ಮತ್ತು ವಾಣಿಜ್ಯ ಕಂಪನಿಗಳ ವಿರುದ್ಧ ಸಾರ್ವಜನಿಕರು ದೂರು ನೀಡಿದರೂ ಯಾವುದೇ ಕ್ರಮವಹಿಸುತ್ತಿಲ್ಲ ಎಂದು ದೂರಿದರು.
ಗ್ರಾಮ ಪಂಚಾಯತಿಗಳಲ್ಲಿ ಸರ್ಕಾರಿ ದಾಖಲೆಗಳನ್ನು ಸಾರ್ವಜನಿಕ ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿಯಲ್ಲಿ ಅರ್ಜಿ ಸಲ್ಲಿಸಿದರು ಮಾಹಿತಿ ಕೊಡುತ್ತಿಲ್ಲ.ತಾಲೂಕು ಪಂಚಾಯಿತಿ ಆಡಳಿತ ಅವಧಿ ಮುಗಿದಾಗಿನಿಂದ ಇಂದಿನವರೆಗೆ ಎಲ್ಲಾ ಅನುದಾನಗಳ ಕಾಮಗಾರಿಗಳ ತನಿಖೆ ನಡೆಸಬೇಕು ಎಂದರಲ್ಲದೆ,
ಈ ಎಲ್ಲಾ ವಿಷಯಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಅಭಿವೃದ್ಧಿ ಅಧಿಕಾರಿಗಳು ಮತ್ತು ರೈತ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಎಲ್ಲಾ ದಾಖಲೆಗಳನ್ನು ಸಭೆಗೆ ಒಪ್ಪಿಸುತ್ತೇವೆ. ಆದ್ದರಿಂದ ತಾವುಗಳು ಸಮಗ್ರ ತನಿಖೆ ನಡೆಸಲು ಜಿಲ್ಲಾ ಮಟ್ಟದ ವಿಶೇಷ ತಂಡ ರಚಿಸಿ ತನಿಖೆ ನಡೆಸಿ ತಪ್ಪಿತಸ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಆಲೂರು ಸಿದ್ದರಾಮಣ್ಣ, ಶಿವಣ್ಣ ತಿಮ್ಮಾರೆಡ್ಡಿ, ರಂಗಸ್ವಾಮಿ, ಅರಳಿಕೆರೆ ತಿಪ್ಪೇಸ್ವಾಮಿ, ಜಗನ್ನಾಥ್, ಜಯಣ್ಣ, ದೇವೇಂದ್ರಪ್ಪ, ರಾಮಣ್ಣ, ಗೌಡಪ್ಪ, ನಾರಾಯಣಪ್ಪ, ಕೆಂಚಪ್ಪ, ರಾಜಪ್ಪ, ದೊರೆಸ್ವಾಮಿ, ಈಶ್ವರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page