10 ಹೂಡಿಕೆ ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ* *-ಸಚಿವ ಎಂ.ಬಿ.ಪಾಟೀಲ್

by | 08/12/23 | ಕರ್ನಾಟಕ


ಬೆಳಗಾವಿ ಸುವರ್ಣ ಸೌಧ,ಡಿ.08 ಬೆಂಗಳೂರಿನ ಇನ್ವೆಸ್ಟ್ ಕರ್ನಾಟಕ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಒಡಂಬಡಿಕೆಗಳ ಪೈಕಿ 10 ಯೋಜನೆಗಳಿಗೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಅನುಮೊದನೆ ನೀಡಲಾಗಿದೆ. ಇದರ ಪ್ರಕಾರ ಕಂಪನಿಗಳಿಗೆ ಉದ್ದಿಮೆ ಸ್ಥಾಪನೆಗೆ ಅಗತ್ಯವಾದ ಭೂಮಿ, ನೀರು, ವಿದ್ಯುತ್ ಪೂರೈಕೆ ಹಾಗೂ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಶುಕ್ರವಾರ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪನವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಬೆಂಗಳೂರಿನಲ್ಲಿ ಜರುಗಿದ ಇನ್ವೆಸ್ಟ್ ಕರ್ನಾಟಕ-2022 ಸಮಾವೇಶದಲ್ಲಿ 57 ಕಂಪನಿಗಳೊಂದಿಗೆ ರೂ.5.41 ಲಕ್ಷ ಕೋಟಿಗಳ ಬಂಡವಾಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಹುಬ್ಬಳ್ಳಿಯಲ್ಲಿ ಜರುಗಿದ ಎಫ್.ಎಂ.ಸಿ.ಜಿ ಬಂಡವಾಳ ಹೂಡಿಕೆದಾರ ಸಮಾವೇಶದಲ್ಲಿ 16 ಕಂಪನಿಗಳೊಂದಿಗೆ ರೂ.1.27 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಯೋಜನೆಗಳು ಬೃಹತ್ ಕೈಗಾರಿಕೆಗಳು ಆಗಿರುವುದರಿಂದ ಕೈಗಾರಿಕೆಗಳ ಸ್ಥಾಪನೆಗೆ ಕನಿಷ್ಠ 3 ರಿಂದ 4 ವರ್ಷ ಕಾಲಾವಕಾಶ ಬೇಕಾಗಿರುತ್ತದೆ. 5.41 ಲಕ್ಷ ಕೋಟಿ ಬಂಡವಾಳ ಹೂಡಿಕೆಯಲ್ಲಿ ವಿದ್ಯುತ್ ಹಾಗೂ ನವೀಕರಿಸಬಹುದಾದ ಇಂಧನಗಳ ಕ್ಷೇತ್ರದಲ್ಲಿ ಶೇ.38 ರಷ್ಟು ಬಂಡವಾಳ ಹೂಡಿಕೆಯಾಗಿದೆ ಎಂದರು.
ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಸುಮಾರು ರೂ.75 ಕೋಟಿ ಹಾಗೂ ಹುಬ್ಬಳ್ಳಿ ಎಫ್.ಎಂ.ಸಿ.ಜಿ ಸಮಾವೇಶಕ್ಕೆ ರೂ.12.23 ಲಕ್ಷ ವೆಚ್ಚವಾಗಿದೆ. ರಾಜ್ಯ ಸರ್ಕಾರದ 2020-25ರ ಕೈಗಾರಿಕಾ ನೀತಿ ಅಡಿ, ಕೈಗಾರಿಕೆ ಸ್ಥಾಪನೆಗೆ ಸರ್ಕಾರದ ಪ್ರೋತ್ಸಾಹ ಮತ್ತು ರಿಯಾಯಿತಿಗಳನ್ನು ಪಡೆಯುವ ಕೈಗಾರಿಕೆಗಳು ಸರೋಜಿನಿ ಮಹಿಷಿ ವರದಿಯಂತೆ ಗ್ರೂಪ್ ಡಿ ವರ್ಗದಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಹಾಗೂ ಒಟ್ಟು ಉದ್ಯೋಗಗಳಲ್ಲಿ ಶೇ.70ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಕಲ್ಪಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.
ಸಾರ್ವಜನಿಕರ ಹಣ ವ್ಯಯಮಾಡಿ ನಡೆಸುವ ಬಂಡವಾಳ ಹೂಡಿಕೆ ಸಮಾವೇಶಗಳು ವ್ಯರ್ಥ್ಯವಾಗಬಾರದು. ಕೈಗಾರಿಕೆಗಳು ಸ್ಥಾಪನೆ ಆಗಬೇಕು. ಹೀಗೆ ಸ್ಥಾಪಿಸಿದ ಕೈಗಾರಿಕೆಗಳು ಕನ್ನಡಿಗರಿಗೆ ಉದ್ಯೋಗ ಅವಕಾಶ ನೀಡಬೇಕು. ಈ ಹಿಂದೆ 1995ರಲ್ಲಿ ಅಂದಿನ ರಾಜ್ಯ ಸರ್ಕಾರ ಟಯೋಟಾ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಬಿಡಿದಿ ಬಳಿ 450 ಎಕರೆ ಜಮೀನು ನೀಡಿ, ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿತ್ತು. 18 ವರ್ಷಗಳ ತೆರಿಗೆಯನ್ನು ಕಂಪನಿ ಇಟ್ಟುಕೊಂಡು, ಪುನಃ ರಾಜ್ಯ ಸರ್ಕಾರಕ್ಕೆ ಸಂದಾಯ ಮಾಡುವ ಅವಕಾಶವನ್ನು ನೀಡಿತ್ತು. ಆದರೆ ಸರ್ಕಾರ ಕನ್ನಡಿಗರಿಗೆ ಉದ್ಯೋಗ ನೀಡಲು ವಿಧಿಸಿದ ಷರತ್ತನ್ನು ಕಂಪನಿ ಸರಿಯಾಗಿ ಅನುಷ್ಠಾನ ಮಾಡಲಿಲ್ಲ. ಈಗಲೂ ಕಂಪನಿ ರೂ.8 ಸಾವಿರ ಕೋಟಿಗೂ ಅಧಿಕ ತೆರಿಗೆ ಬಾಕಿ ಉಳಿಸಿಕೊಂಡಿದೆ. ರತ್ನಗಂಬಳಿ ಹಾಸಿ ಬೃಹತ್ ಕಂಪನಿಗಳನ್ನು ತಂದು ರಾಜ್ಯದ ಜನರಿಗೆ ಉಪಯೋಗವಾಗದಿದ್ದರೆ ಹೇಗೆ? ಸರ್ಕಾರ ಈ ಕುರಿತು ಸೂಕ್ತ ಕ್ರಮ ವಹಿಸಬೇಕು ಎಂದು ಶಾಸಕ ಎಂ.ಚಂದ್ರಪ್ಪ ಒತ್ತಾಯಿಸಿದರು.
ಟಯೋಟಾ ಕಂಪನಿಯೊಂದಿಗಿನ ಒಪ್ಪಂದ ಕುರಿತು ಸದ್ಯ ಮಾಹಿತಿ ಇಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತೇನೆ. ಇದೆ ಮಾದರಿ ಸವಲತ್ತು ಪಡೆದ ಎಲ್ಲಾ ಕೈಗಾರಿಕೆಗಳು ಸರ್ಕಾರದ ಆದೇಶಗಳನ್ನು ಪಾಲನೆ ಮಾಡುತ್ತಿವೆಯೇ ಎಂಬುದನ್ನು ಪರಿಶೀಲಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಸದನದಲ್ಲಿ ಆಶ್ವಾಸನೆ ನೀಡಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page