ಮಕ್ಕಳನ್ನು ದೇವರ ಸಮಾನ ಕಾಣಿ…. ಕಸವನಹಳ್ಳಿ ರಮೇಶ್ ಸಾಮಾಜಿಕ ಕಾರ್ಯಕರ್ತ.

by | 09/12/23 | ಶಿಕ್ಷಣ


ಹಿರಿಯೂರು 9. ಹಿರಿಯೂರು ತಾಲೂಕು ಕಸವನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿವರ್ತನ್ ಇಂಡಿಯಾ ಸಂಸ್ಥೆಯ ಶ್ರೀಮತಿ ರಶ್ಮಿ ಅವರು ಮಕ್ಕಳಿಗೆ ಶಾಲಾ ಬ್ಯಾಗ್, ಜಾಮಿಟ್ರಿ, ಕಂಪಾಸ್, ಪೆನ್ನು ಇತರೆ ಶೈಕ್ಷಣಿಕ ಪರಿಕರಗಳನ್ನು ವಿತರಣೆ ಮಾಡಿ ಮಾತನಾಡುತ್ತಾ “”ಭವಿಷ್ಯದಲ್ಲಿ ಸದೃಢ ಸಮಾಜವನ್ನು ನಿರ್ಮಾಣ ಮಾಡಬೇಕೆಂದರೆ ಪ್ರಜೆಗಳು, ಕುಟುಂಬ, ಹಳ್ಳಿಗಳು, ರಾಜ್ಯ, ದೇಶವನ್ನು ಉದ್ದೇಶವಾಗಿಟ್ಟುಕೊಂಡು ಮಕ್ಕಳನ್ನು ಬೆಳೆಸಬೇಕು ಖಾಸಗಿ ಶಾಲೆಗಳು ಕೊಡಮಾಡುವ ಮಾಹಿತಿ ಗಿಂತ ಸರ್ಕಾರಿ ಶಾಲೆಗಳಲ್ಲಿಅದರಲ್ಲಿಯೂ ಹಳ್ಳಿಗಳಲ್ಲಿ ಸಿಗುವ ಸಾಮಾನ್ಯ ಜ್ಞಾನವನ್ನು ಮಕ್ಕಳಿಗೆ ಹೆಚ್ಚು ಹೆಚ್ಚು ಕಲಿಸುವ ಮೂಲಕ ಸದೃಢ ಸುಸಂಸ್ಕೃತ ಸಮಾಜವನ್ನು, ದೇಶವನ್ನು ನಿರ್ಮಾಣ ಮಾಡಬೇಕು. ಮಕ್ಕಳಿಗಾಗಿ ಆಸ್ತಿ ವಗೈರೆಗಳನ್ನು ಕೂಡಿಡುವ ಬದಲು ಶಿಕ್ಷಣ ,ಸಂಸ್ಕಾರ ಸಾಮಾನ್ಯ ಜ್ಞಾನ, ದಾನ, ಧರ್ಮ ಮಾಡುವಂಥ ಮನಸ್ಥಿತಿಯನ್ನು ಮಕ್ಕಳಲ್ಲಿ ಗಟ್ಟಿಗೊಳಿಸಬೇಕು. ಇಲ್ಲವಾದಲ್ಲಿ ರೋಗಗ್ರಸ್ತ ,,ವ್ಯಸನ ಪೀಡಿತ ಮನಸ್ಥಿತಿಯ ಮಕ್ಕಳು ಬೆಳೆಯುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ನಮ್ಮ ಶಾಲೆಯ ಮಕ್ಕಳಿಗೆ ಪರಿವರ್ತನಾ ಇಂಡಿಯಾ ಫೌಂಡೇಶನ್ ನ ಶ್ರೀಮತಿ ರಶ್ಮಿ ಅವರು ಶೈಕ್ಷಣಿಕ ಪರಿಕರಗಳನ್ನು ಕೊಡ ಮಾಡುತ್ತಿರುವುದು ಅತ್ಯಂತ ಸಂತೋಷದ ಹಾಗೂ ಶ್ಲಾಘನೀಯ ಕೆಲಸ ಇಂಥವರ ಸಂಖ್ಯೆ ಹೆಚ್ಚಾಗಲಿ ಹಾಗೂ ಗ್ರಾಮದ ಶಾಲೆಗೆ ಜಮೀನು ದಾನ ಮಾಡಿದ ಹಾಗೂ ಬೆಂಚು, ಕುರ್ಚಿ, ಮೈಕ್ ಸೆಟ್,ಊಟದ ತಟ್ಟೆ, ಪುಸ್ತಕಗಳು ಎಂದು ನೂರಾರು ವಸ್ತುಗಳನ್ನು ದಾನ ಮಾಡಿದ ಶ್ರೀಯುತ ಕೆಆರ್ ಪ್ರೇಮನಾಥ್, ಕೆ ಆರ್ ಶ್ರೀನಾಥ್, ಎಂ ಓಂಕಾರಪ್ಪ ಇವರು ಪ್ರಾಥಸ್ಮರಣೆಯರು.ಎಂದು ಹೇಳಿದರು. ಶಾಲೆಗೆ ಆಗಮಿಸಿದ್ದ ಶಿಕ್ಷಣ ಸಂಯೋಜಕರಾದ ಶಶಿಧರ್ ಹಾಗೂ ಬಿ ಆರ್ ಪಿ ಪ್ರಸನ್ನ ಮಾತನಾಡಿದರು. ಪರಿವರ್ತನ್ ಇಂಡಿಯಾ ಫೌಂಡೇಶನ್ ನ ಶ್ರೀಮತಿ ರಶ್ಮಿ ಅವರು ಮಾತನಾಡಿ ನಮ್ಮ ಸಂಸ್ಥೆಯಿಂದ ಸೌಲಭ್ಯ ವಂಚಿತ ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರತಿವರ್ಷ ಶೈಕ್ಷಣಿಕ ಪರಿಕರಗಳನ್ನು ಕೂಡ ಮಾಡುತ್ತಿರುವುದರ ಉದ್ದೇಶ ನಾವುಗಳು ಓದುವಾಗ ಇಂತಹ ಎಲ್ಲಾ ಸೌಲಭ್ಯಗಳು ನಮಗೆ ಸಿಗಲಿಲ್ಲ. ಆದ್ದರಿಂದ ಇವತ್ತಿನ ಮಕ್ಕಳಿಗಾದರೂ ಈ ಎಲ್ಲಾ ಸೌಲಭ್ಯಗಳನ್ನು ಒದಗಿಸೋಣ. ಶಿಕ್ಷಣದ ಮಹತ್ವವನ್ನು ಪೋಷಕರು ಅರಿತು ,ಬೆರೆತು, ಮಕ್ಕಳನ್ನು ಬೆಳೆಸಬೇಕು ಎಂದು ಹೇಳಿದರು. ಮುಖ್ಯ ಶಿಕ್ಷಕ ರಂಗನಾಥ್ ಕಾರ್ಯಕ್ರಮ ನಡೆಸಿಕೊಟ್ಟರು. ಸಹ ಶಿಕ್ಷಕ ಬಸವರಾಜ್ ಅವರು ಸ್ವಾಗತಿಸಿದರು. ಶಾಲೆಯ ವತಿಯಿಂದ ಶ್ರೀಮತಿ ರಶ್ಮಿ ಅವರ ತಾಯಿ ಶ್ರೀಮತಿ ಕಲ್ಪನಾ ಅವರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷ ಮಂಜುನಾಥ್ ಗ್ರಾಮದ ಮುಖಂಡರಾದ ಆರ್ ಪ್ರಕಾಶ್. ರಾಮಚಂದ್ರ ಕಸವನಹಳ್ಳಿ, ಆರ್.ರಾಘವೇಂದ್ರ… ಎ.ಶ್ರೀನಿವಾಸ್. ಆರ್ ತಿಮ್ಮಣ್ಣ. ಅಂಗನವಾಡಿ ಶಿಕ್ಷಕಿ ಮಹಾಲಕ್ಷ್ಮಿ ನಂದಿನಿ ಗ್ರಾಮಸ್ಥರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page