ಅಡುಗೆ ಅನಿಲ ಅಕ್ರಮ ಸಂಪರ್ಕಗಳಿಗೆ ಕಡಿವಾಣ ಹಾಕಲು ಇಕೆವೈಸಿ ಕಡ್ಡಾಯಗೊಳಿಸಿದ ಸರಕಾರ ಇಕೆವೈಸಿ ಮಾಡಿಸಲು ಮುಗಿದ್ದ ಫಲಾನುಭವಿಗಳು….

by | 19/12/23 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಡಿ 18. ಅಡುಗೆ ಅನಿಲ ಪಡೆಯಲೂ ಡಿ.31 ರೊಳಗೆ ಇ ಕೆವೈಸಿ ಆಧಾರ್ ಲಿಂಕ್ ಮಾಡಿಸದಿದ್ದರೆ ಸಿಲೆಂಡರ್ ವಿತರಣೆ ನಿಲ್ಲಿಸಲಾಗುವುದು


ಹೌದು ಇದು ಬ್ಯಾಂಕ್ ಖಾತೆ, ಪಡಿತರ ಅಕ್ಕಿ,ಬೆಳೆವಿಮೆ, ಬೆಳೆ ಪರಿಹಾರ ಸೇರಿದಂತೆ ಸರಿಕಾರಿ ಸೌಲಭ್ಯಗಳ ದುರ್ಬಳಕೆ ಕಡಿವಾಣ ಹಾಕಲು ಇ ಕೆವೈಸಿ ಆಧಾರ್ ಲಿಂಕ್ ಕಡ್ಡಾಯ ಈಗ ಅಡುಗೆ ಅನಿಲ ಸಂಪರ್ಕ ಫಲಾನುಭವಿಗಳಿಗೂ ಇ.ಕೆ.ವೈಸಿ ಆಧಾರ್ ಲಿಂಕ್ ಕಡ್ಡಾಯ ಮಾಡಿರುವುದರಿಂದ ಅಡುಗೆ ಅನಿಲ ವಿತರಣೆ ಮಾಡವ ಅಂಗಡಿ ಮಂದೆ ಸರದಿ ಸಾಲಿನಲ್ಲಿ ನಿಂತು ಇಕೆವೈಸಿ ಮಾಡಿಸಲು ಮುಗಿ ಬಿದ್ದಿದ್ದಾರೆ.
ಪಡಿತರ ಅಕ್ಕಿ, ಅಡುಗೆ ಅನಿಲ , ಬೆಳೆ ಪರಿಹಾರ, ಬೆಳೆವಿಮೆ ಸತ್ತ ಫಲಾನುಭವಿಗಳ ಹೆಸರಿನಲ್ಲೂ ಸರಕಾರಿ ಸೌಲಭ್ಯ ಪಡೆಯುತ್ತಿದ್ದವರಿಗೆ ಇಕೆವೈಸಿ ಯಿಂದ ಬ್ರೇಕ್ ಬೀಳಲಿದೆ. ಸರಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ರೂ ನಷ್ಟವನ್ನುಂಟು ಮಾಡುತ್ತಿತ್ತು ಇದರಿಂದ ಸರಕಾರ ಫಲಾನುಭವಿಗಳ ಆಧಾರ್ ಕಾರ್ಡ್ ಹಾಗೂ ಹೆಬ್ಬೆಟ್ಟಿನ ಗುರುತು ಪಡೆಯುವ ಮೂಲಕ ಸರಕಾರಿ ಸೌಲಭ್ಯಗಳಿಗೆ ಕಡ್ಡಾಯವಾಗಿ ಇಕೆವೈಸಿ ಜಾರಿಗೊಳಿಸಿದೆ.
ಬ್ಯಾಂಕ್ ಗ್ರಾಹಕರಿಗೆ ಇ ಕೆ ವೈಸಿ ಕಡ್ಡಾಯ ಎಂಬುದು ಗೊತ್ತು. ಇದೀಗ ಸರ್ಕಾರದ ಸಬ್ಸಿಡಿ ಗ್ಯಾಸ್ ಸಿಲಿಂಡರ್ ಪಡೆಯಲು ಸಹ ಇ ಕೆ ವೈಸಿ ಯನ್ನು ಕಡ್ಡಾಯಗೊಳಿಸಲಾಗಿದೆ. ಒಬ್ಬರಿಗೆ ಒಂದಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಸಂಪರ್ಕ ಗೃಹ ಬಳಕೆ ಸಿಲಿಂಡರ್ ಸಂಪರ್ಕ ದುರ್ಬಳಕೆಯಾಗುವುದನ್ನು ತಪ್ಪಿಸಲು ಗ್ರಾಹಕರ ಇಕೆವೈಸಿ ಅಪ್ಡೇಟ್ ಮಾಡುವಂತೆ ಕೇಂದ್ರಸರಕಾರ ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ ನೀಡಿವೆ.
ಗ್ರಾಹಕರ ಬೆರಳು ಗುರುತು ಮತ್ತು ಮುಖ ಚಹರೆಯನ್ನು ಮಾತ್ರ ಪರಿಗಣಿಸಿ ಇಕೆವೈಸಿ ಅಪ್ಡೇಟ್ ಮಾಡಬೇಕೆಂದು ಕೇಂದ್ರ ಸರಕಾರದ ಪೆಟ್ರೋಲಿಯಂ ಸಚಿವಾಲಯ, ತೈಲ ಕಂಪನಿಗಳಿಗೆ ಎರಡು ವಾರದ ಹಿಂದೆ ಆದೇಶ ಮಾಡಿದ್ದು, ವರ್ಷಾಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದೆ. ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ ಸಂಪರ್ಕ ಪಡೆದಿರುವ ಗ್ರಾಹಕರಿಗೂ ಇಕೆವೈಸಿ ಅನ್ವಯವಾಗಲಿದೆ.

ವರ್ಗಾವಣೆಗೆ ಅವಕಾಶ
ಒಂದ ವೇಳೆ ಈಗಾಗಲೆ ಅಡುಗೆ ಅನಿಲ ಫಲಾನುಭವಿ ಮೃತಪಟ್ಟಿದ್ದರೆ.
ಯಾರದೋ ಹೆಸರಿನಲ್ಲಿ ಅನಿಲ ಸಂಪರ್ಕವಿದ್ದು, ಮತ್ತೊಬ್ಬರು ಬಳಕೆ ಮಾಡುತ್ತಿದ್ದರೆ ಅವರಿಗೆ ಇಕೆವೈಸಿ ಆಗುವುದಿಲ್ಲ. ಕುಟುಂಬದ ಬೇರೆ ಸದಸ್ಯರು ಬಳಕೆ ಮಾಡುತ್ತಿದ್ದರೆ ಸಂಪರ್ಕವನ್ನು ಅಡುಗೆ ಅನಿಲ ವಿತರಕರಿಗೆದ ಅಗತ್ಯ ದಾಖಲಿಗಳನ್ನು ನೀಡಿ ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಬಹುದು. ನಿಜವಾದ ಗ್ರಾಹಕರಿಗೆ ಮಾತ್ರ ಸಬ್ಸಿಡಿ ಸಿಲಿಂಡರ್ ಸಿಗಬೇಕು ಎನ್ನುವುದು ಇಕೆವೈಸಿ ಉದ್ದೇಶ ಎನ್ನುತ್ತಾರೆ ಗ್ಯಾಸ್ ಏಜೆನ್ಸಿಯ ಮಾಲೀಕರೋಬ್ಬರು.

ಗ್ಯಾಸ್ ಸಿಲಿಂಡರಿಗೆ ಇಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಘೋಷಿಸಿದೆ. ಇಕೆವೈಸಿ ಮಾಡಿಸದಿದ್ದರೆ ಸದ್ಯ ದೊರೆಯುತ್ತಿರುವ ಸಬ್ಸಿಡಿ ನಿಲ್ಲುತ್ತದೆ. ಸರ್ಕಾರವು ಇಕೆವೈಸಿ ಮಾಡಿಸಲು ಈಗಾಗಲೇ ನವಂಬರ್ 25 ರಿಂದ ಅವಕಾಶವನ್ನು ನೀಡಿದೆ. ಇ – ಕೆವೈಸಿಯನ್ನು ಮಾಡಿಸಲು ಡಿಸೆಂಬರ್ 31ರವರೆಗೂ ಅವಕಾಶವಿದೆ, 31ನೇ ಡಿಸೆಂಬರ್ ಒಳಗೆ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಇಕೆವೈಸಿ ಮಾಡಿಕೊಡಲಾಗುವುದು ಇ-ಕೆವೈಸಿ ಮಾಡಿಸದಿದ್ದರೆ ನಿಮಗೆ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ವಿತರಣೆ ಹಾಗೂ ಸಬ್ಸಿಡಿಯು ಕಡಿತಗೊಳ್ಳುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ತಿಳಿಸಿದೆ


Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page