ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಸಾಲ ಸೌಲಭ್ಯಗಳು, ತರಬೇತಿಗಳು, ಆರ್ಥಿಕವಾಗಿ ಹಿಂದುಳಿದ ಬಡಜನರು ಈ ಯೋಜನೆಯನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೆನಾರಾ ಬ್ಯಾಂಕ್ ವ್ಯವಸ್ಥಾಪಕ ಜಿ, ರಾಮ್ ಮೋಹನ್.

by | 20/12/23 | ಆರ್ಥಿಕ

ನಾಯಕನಹಟ್ಟಿ 20
ನಾಯಕನಹಟ್ಟಿ ಪಟ್ಟಣದ ಕಾರ್ಯಲಯದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಪಟ್ಟಣ ಪಂಚಾಯಿತಿ ನಾಯಕನಹಟ್ಟಿ ಇವರ ಸಹಯೋಗದೊಂದಿಗೆ ಬೀದಿ ಬದಿ ವ್ಯಾಪಾರ ಮಾಡುತ್ತಿರುವ ನಗರ ಬಡಜನರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಅರಿವು ಮೂಡಿಸಲು ಕಾರ್ಯಕ್ರಮ ಮಾಡಲಾಯಿತು. ಈ ಸಂದರ್ಭದಲ್ಲಿ ನಾಯಕನಹಟ್ಟಿ ಪಟ್ಟಣದ ಬೀದಿ ಬದಿಯಲ್ಲಿ ಉದ್ಯಮೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಶ್ರಮಯೋಗಿ ಮನ್ ಧನ್ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ, ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಒ ಸಿ ಡಬ್ಲೂ ಅಡಿಯಲ್ಲಿ ನೋಂದಣ , ಪ್ರಧಾನ ಮಂತ್ರಿ ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಇವುಗಳ ಜೊತೆಗೆ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಿಂದ ದೇಶದ ಆರ್ಥಿಕವಾಗಿ ಹಿಂದುಳಿದ ಬಡಜನರಿಗೆ ಕೇಂದ್ರ ಸರ್ಕಾರದಿಂದ ಹಣ್ಣು, ತರಕಾರಿ, ಎಲೆ-ಅಡಿಕೆ, ತೆಂಗಿನಕಾಯಿ, ಬಳೆ, ಬಟ್ಟೆ ಮಾರುವವರು, ಚರ್ಮಕಾರರು, ಕ್ಷೌರಿಕರು, ಹೂವು ಮಾರುವರು, ಟೀ ಅಂಗಡಿದವರು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಜೀವನವನ್ನು ರೊಪಿಸಿಕೊಳ್ಳಲು ಸೂಕ್ತವಾದ ಯೋಜನೆಯಾಗಿದೆ ಎಂದು ಪಟ್ಟಣ ಪಂಚಾಯ್ತಿ ಸಮುದಾಯ ಸಂಘಟಕರಾದ ಶ್ರೀಮತಿ ನಾಗರತ್ನಮ್ಮ ಹೇಳಿದರು.


ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಿಂದ ಬೀದಿ ಬದಿ ವ್ಯಾಪರಸ್ಥರು ದಿನನಿತ್ಯದ ಸಂಭಾವನೆಯಿಂದ ಕುಟುಂಬವನ್ನು ನಡೆಸಿಕೊಂಡು ಹೋಗುವ ಬಗ್ಗೆ, ಸಣ್ಣ ಉದ್ಯೂಗ ಇಲ್ಲಂದರೆ ಕುಟುಂಬ ನಿರ್ವಹಣೆ ಪ್ರತಿದಿನ ಮನೆಗಳಲ್ಲಿ ಅನುನೂಕಲಗಳ ಬಗ್ಗೆ, ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಜನರಿಗೆ ಸಿಗುವಂತಹ ಸೌಲಭ್ಯಗಳ ಬಗ್ಗೆ ಎಸ್ ಓ ಕೆಂಚಪ್ಪ ಲೆಕ್ಕ ಪರಿಶೋದನೆ ಅಧಿಕಾರಿಗಳು ಹೇಳಿದರು.

ಪಟ್ಟಣದ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪರಸ್ಥರು ಪಟ್ಟಣ ಪಂಚಾಯ್ತಿ ಕಾರ್ಯಾಲಯ ಬೇಟಿ ನೀಡಿ ಈ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಸಾಲ ಸೌಲಭ್ಯಗಳು, ತರಬೇತಿಗಳು, ಆರ್ಥಿಕವಾಗಿ ಹಿಂದುಳಿದ ಬಡಜನರು ಈ ಯೋಜನೆಯನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೆನಾರಾ ಬ್ಯಾಂಕ್ ವ್ಯವಸ್ಥಾಪಕ ಜಿ, ರಾಮ್ ಮೋಹನ್ ಹೇಳಿದರು.


ಈ ಸಂದರ್ಭದಲ್ಲಿ ಪಟ್ಟಟ ಪಂಚಾಯ್ತಿ ಪ್ರಭಾರ ಮುಖ್ಯಾಧಿಕಾರಿ ಶಿವಕುಮಾರ್, ಸಮುದಾಯ ಸಂಘಟಕರಾದ ಶ್ರೀಮತಿ ನಾಗರತ್ನಮ್ಮ, ಕೆನಾರಾ ಬ್ಯಾಂಕ್ ವ್ಯವಸ್ಥಾಪಕ ಜಿ, ರಾಮ್ ಮೋಹನ್, ಎಸ್ ಓ ಕೆಂಚಪ್ಪ ಲೆಕ್ಕ ಪರಿಶೋದನೆ ಅಧಿಕಾರಿಗಳು, ಸುನೀತ ಲೆಕ್ಕ ಪರಿಶೋದನೆ ಅಧಿಕಾರಿಗಳು, ತಿಪ್ಪೇಸ್ವಾಮಿ, ಸುರೇಶ, ಸಂದೀಪ್, ದಯಾನಂದ, ಅಭಿ, ರೇಣುಕಮ್ಮ, ಬೀದಿ ಬದಿಯ ವ್ಯಾಪರಸ್ಥರು ಹಾಗೂ ಇತತರು ಇದ್ದರು.

ಸದರಿ ಯೋಜನೆಯಡಿಯಲ್ಲಿ ಈ ಕೆಳಕಂಡಂತೆ ವ್ಯಾಪರಸ್ಥರಿಗೆ ಸಾಲ ನೀಡಲಾಗುತ್ತದೆ

ಮೊದಲನೇ ಹಂತದಲ್ಲಿ ಪಟ್ಟಣ ಪಂಚಾಯಿತಿಯಿಂದ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ಪಡೆದಿರುವ ಮತ್ತು ಸಾಮಾನ್ಯ ಜನರಿಗೆ ಸೇವೆಯನ್ನು ಒದಗಿಸುತ್ತಿರುವ ವಿವಿಧ ಕ್ಷೇತ್ರಗಳಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಬ್ಯಾಂಕ್ ಮೂಲಕ 10 ಸಾವಿರ ರೂ ಸಾಲ ನೀಡಲಾಗುವುದು.

ಎರಡನೇಯ ಹಂತದಲ್ಲಿ 20 ಸಾವಿರ ರೂ- ಸಾಲ ನೀಡಲಾಗುತ್ತದೆ.
ಮೊದಲನೇ ಹಂತದಲ್ಲಿ ರೂ, 10 ಸಾವಿರ ರೂ- ಸಾಲ ಪಡೆದು ಬ್ಯಾಂಕಿಗೆ ನಿಗಿದಿತ ಸಮಯದಲ್ಲಿ ಪ್ರತಿ ತಿಂಗಳು ಸಾಲವನ್ನು ಮರುಪಾತಿ ಮಾಡಿದ ವ್ಯಾಪರಸ್ಥರಿಗೆ ಎನ್.ಒ.ಸಿ ಪ್ರತಿಯನ್ನು ಮೂಲಕ 20 ಸಾವಿರ ರೂ ಸಾಲವನ್ನು ಬ್ಯಾಂಕಿನಿಂದ ಸಾಲ ನೀಡಲಾಗುತ್ತದೆ.

ಮೂರನೇ ಹಂತದಲ್ಲಿ 50 ಸಾವಿರ ರೂ- ಸಾಲ ನೀಡಲಾಗುತ್ತದೆ.
ಎರಡನೇ ಹಂತದಲ್ಲಿ .20 ಸಾವಿರ ರೂ ಸಾಲವನ್ನು ಪಡೆದು ಬ್ಯಾಂಕಿಗೆ ನಿಗಧಿತ ಸಮಯದಲ್ಲಿ ಪ್ರತಿ ತಿಂಗಳು ಸಾಲವನ್ನು ಮರುಪಾವತಿ ಮಾಡಿ ಎನ್.ಒ.ಸಿ ಪ್ರತಿಯನ್ನು ಬ್ಯಾಂಕಿನಿಂದ ಪಡೆದು ಪಟ್ಟಣ ಪಂಚಾಯಿತಿಯ ಡೇ ನಲ್ಮ್ ವಿಭಾಗಕ್ಕೆ ಸಲ್ಲಿಸಿದರೆ ಅಂತಹ ಅರ್ಹ ಫಲಾನುಭವಿಗೆ ರೂ. ೫೦.೦೦೦/- ಸಾಲವನ್ನು ಬ್ಯಾಂಕಿನಿAದ ನೀಡಲಾಗುತ್ತಿದೆ.

ಈ ಯೋಜನೆಯಡಿ ಅರ್ಜಿಸಲ್ಲಿಸಲು ಬೇಕಾದ ದಾಖಲೆಗಳು :
ಆಧಾರ್ ಕಾರ್ಡ್, ಬಿ.ಪಿ.ಎಲ್. ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಉಳಿತಾಯ ಖಾತೆ ಪುಸ್ತಕ, ವ್ಯಾಪಾರದ ಪೋಟೋ, ಅರ್ಜಿದಾರರ ಭಾವ ಚಿತ್ರ 2 (ಪಾಸ್ ಪೋಟೋ), ಬೀದಿ ಬದಿ ವ್ಯಾಪರಸ್ಥರ ಗುರುತಿನ ಚೀಟಿ ಈ ಎಲ್ಲಾ ದಾಖಲಾತಿಗಳನ್ನು ತಗೆದುಕೊಂಡು ನಾಯಕನಹಟ್ಟಿ ಪಟ್ಟಣ ಪಂಚಾಯ್ತಿ ಕಾರ್ಯಾಲಯ ಡೇ-ನಲ್ಮ್ ವಿಭಾಗದ ಸಿಬ್ಬಂದಿಯನ್ನು ಹೆಚ್ಚಿನ ಮಾಹಿತಿಗಾಗಿ ಸಂರ್ಪಕಿಸಬಹುದು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page