ವಿದ್ಯಾರ್ಥಿಗಳಲ್ಲಿರುವ ಕಲಿಕಾ ಕೊರತೆಯನ್ನು ನೀಗಿಸುವ ಪ್ರಕ್ರಿಯೆಯೇ ಪೂರಕ ಬೋಧನೆ ಅಥವಾ ಪರಿಹಾರ ಬೋಧನೆ ಎಂದು ಜೆಸಿಹಳ್ಳಿಗೊಲ್ಲರಹಟ್ಟಿ ಗ್ರಾಮದ ಸಹಿಪ್ರಾ ಶಾಲಾ ಮುಖ್ಯಶಿಕ್ಷಕ ಓ ಚಿತ್ತಯ್ಯ.

by | 01/01/24 | ಶಿಕ್ಷಣ


ಚಳ್ಳಕೆರೆ
ವಿದ್ಯಾರ್ಥಿಗಳಲ್ಲಿರುವ ಕಲಿಕಾ ಕೊರತೆಯನ್ನು ನೀಗಿಸುವ ಪ್ರಕ್ರಿಯೆಯೇ ಪೂರಕ ಬೋಧನೆ ಅಥವಾ ಪರಿಹಾರ ಬೋಧನೆ ಎಂದು ಜೆಸಿಹಳ್ಳಿಗೊಲ್ಲರಹಟ್ಟಿ ಗ್ರಾಮದ ಸಹಿಪ್ರಾ ಶಾಲಾ ಮುಖ್ಯಶಿಕ್ಷಕ ಓ ಚಿತ್ತಯ್ಯ ಹೇಳಿದರು
ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯಲ್ಲಿನ ಗ್ರಾಮ ಸಂಸ್ಥೆಯ ಸಭಾಭವನದಲ್ಲಿ ಬುಧವಾರ ಟಾಟಾ ಪವರ್, ಹೆಲ್ಪ್ ಸಂಸ್ಥೆ ಹಾಗೂ ಗ್ರಾಮ ಸಂಸ್ಥೆಯ ವತಿಯಿಂದ ಅತಿಥಿ ಶಿಕ್ಷಕರಿಗೆ ಆಯೋಜಿಸಿದ್ದ ಪರಿಹಾರ ಬೋಧನೆ ಕುರಿತ ಶೈಕ್ಷಣಿಕ ಜಾಗೃತಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದರು
ಆಂಧ್ರ-ಕರ್ನಾಟಕ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿರುವ ಕಡೆಗಳಲ್ಲಿ ಟಾಟಾಪವರ್ ಮತ್ತು ಹೆಲ್ಪ್ ಸಂಸ್ಥೆಯು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಆಯಾ ಶಾಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪರಿಹಾರ ಶಿಕ್ಷಣ ನೀಡುವ ಮುಖೇನ ದಲಿತ ಮತ್ತು ಶೋಷಿತ ಸಮುದಾಯಗಳ ಕಲಿಕಾ ನ್ಯೂನತೆಯಿರುವ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆ ಮಾಡಿ ಅವರಲ್ಲಿ ಕನಿಷ್ಟ ಕಲಿಕಾ ಸಾಮರ್ಥ್ಯಗಳನ್ನು ವೃಧ್ದಿಸುವಂತೆ ಮಾಡುತ್ತಿರುವುದು ಉತ್ತಮವಾದ ಕಾರ್ಯ ಎಂದು ಪೂರ್ವ ಪರೀಕ್ಷೆ, ಸಾಫಲ್ಯ ಪರೀಕ್ಷೆ, ಪೂರಕ ಬೋಧನೆ, ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ಕಲಿಕೆ ಉತ್ತಮಪಡಿಸುವ ಕುರಿತು ಉಪನ್ಯಾಸ ನೀಡಿದರು
ಹೆಲ್ಪ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಆರ್ ವೈ ಸ್ವಾಮಿ ನಾಯಕ್ ಪ್ರಾಸ್ತಾವಿಕ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶಾಲಾ ಅವಧಿಯನ್ನು ಹೊರತುಪಡಿಸಿ ಪರಿಹಾರ ಶಿಕ್ಷಣವನ್ನು ನೀಡುತ್ತಿದೆ ಈ ಅತಿಥಿ ಶಿಕ್ಷಕರಿಗೆ ವೃತ್ತಿ ತರಬೇತಿ ನೀಡುವ ಮೂಲಕ ಅವರ ವೃತ್ತಿದಕ್ಷತೆಯನ್ನು ಹೆಚ್ಚಿಸಲು ಅನುವು ಮಾಡಿಕೊಡಲಾಗುತ್ತಿದೆ ಎಂದರು
ಸಂಯೋಜಕಿ ಲಕ್ಷಿö್ಮÃದೇವಿ ಮಾತನಾಡಿ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಬಂಜಗೆರೆ ಗ್ರಾಮವೂ ಸೇರಿದಂತೆ ವಿವಿಧ ಗ್ರಾಮಗಳ ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ಸಂಸ್ಥೆಯ ವತಿಯಿಂದ ಆಟಿಕೆಗಳು, ಕ್ರೀಡಾ ಸಾಮಗ್ರಿಗಳು ಶಾಲೆಯ ಅಗತ್ಯತೆಗಳನ್ನು ಪೂರೈಸಿ ಶಾಲಾ ಮಕ್ಕಳು ಯಾವುದೇ ಕೊರತೆಯಿಂದ ಕೊರಗಬಾರದು ಎಂಬುದಾಗಿದೆ ಎಂದರು
ಇದೇ ವೇಳೆ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಓ ಚಿತ್ತಯ್ಯ ಅತಿಥಿ ಶಿಕ್ಷಕರಿಗೆ ಶಾಲೆಗಳಲ್ಲಿ ದಿನ ನಿತ್ಯ ಬೋಧನೆಯ ವೇಳೆ ಎದುರಾಗುವ ಸಮಸ್ಯೆಗಳ ಕುರಿತು ತಿಳಿವಳಿಕೆ ನೀಡಿ ಪರಿಹಾರ ಬೋಧನೆ ಕ್ರಮಗಳನ್ನು ತಿಳಿಸಿದರು
ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಆರ್ ವೈ ಸ್ವಾಮಿನಾಯ್ಕ, ಸಂಯೋಜಕಿ ಲಕ್ಷಿö್ಮದೇವಿ, ಶಿಕ್ಷಕರಾದ ಲಕ್ಷಿö್ಮÃದೇವಿ, ಮಹಾಲಿಂಗಪ್ಪ, ವೆಂಕಟೇಶ, ಮಂಜುನಾಥ, ಶಿವಣ್ಣ, ರಾಜು, ಲಕ್ಷಿö್ಮದೇವಿ, ವೃಂದಾ, ರಮ್ಯಾ, ಮಹಾಲಕ್ಷಿö್ಮÃ, ರಾಮಲಕ್ಷಿö್ಮÃ, ಸುವರ್ಣ, ಪ್ರಮಿಳಾ ಆಂಧ್ರ ಕರ್ನಾಟಕ ರಾಜ್ಯಗಳ ವಿವಿಧ ಗಡಿಪ್ರದೇಶಗಳ ಕನ್ನಡ ಮಾಧ್ಯಮ ಶಾಲೆಗಳ ಶಿಕ್ಷಕರು ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page