ನಿಗಧಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮದ್ಯಮಾತಾಟ ಕಡಿವಾಣ ಹಾಕುವಂತೆ ಗ್ರಾಹಕರ ಒತ್ತಾಯ.

by | 10/01/24 | ಸುದ್ದಿ


ಚಳ್ಳಕೆರೆ ಜ.1 ಬಾರ್ ಆಂಡ್ ರೇಸ್ಟೊರೆಂಟ್‌ಗಳಲ್ಲಿ ಎಂಆರ್‌ಪಿ ದರಕ್ಕಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ಮಾಡುವ ಮೂಲಕ ಗ್ರಾಹಕರನ್ನು ಸೂಲಿಗೆ ಮಾಡುವ ಬಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳ ಗಮನ ಸೆಳೆದರೂ ಸಹ ಕ್ರಮ ಕೈಗೊಳ್ಳದೆ ಮೌನ ವಹಿಸಿರುವದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ ಮದ್ಯದಂಗಡಿಯಲ್ಲಿ ಮದ್ಯದ ಪೌಚ್ ಮೇಲಿನ ಎಂ.ಆರ್ ಪಿ ಬೆಲೆಗಿಂದ ಹೆಚ್ಚಿನ ಬೆಲೆ ಪಡೆಯುವ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಾರೆ ಎಂದು ಗ್ರಾಹಕರು ಆರೋಪಿಸಿದ್ದಾರೆ. ತಾಲೂಕಿನ ಕಾಲುವೆಹಳ್ಳಿ.ಯಾದಲಗಟ್ಟೆ ಸೇರಿದಂತೆ ಸುತ್ತ ಮುತ್ತಲ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದ ಕಾರಣ ಮದ್ಯ ಪ್ರಿಯರು ಗ್ರಾಮಗಳಿಗೆ ಸುಮಾರು 3 ಕಿ.ಮೀಟರ್ ದೂರದ ದೊಡ್ಡ ಉಳ್ಳಾರ್ತಿ ಗ್ರಾಮಕ್ಕೆ ಮದ್ಯ ಸೇವನೆಗೆ ಹೋಗುವುದು ಅನಿವಾರ್ಯವಾಗಿದೆ ಇದನ್ನೇ ಬಂಡವಾಳ ಮಾಡಿಕೊಂಡ ಮದ್ಯದ ಅಂಗಡಿ ಮಾಲಿಕರು ನಿಗದಿತ ಬೆಲೆಗಿಂತ ಹೆಚ್ಚುವರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಮದ್ಯಪ್ರಿಯರಿಗೆ ಹೊರೆಯಾಗಿದೆ ಎಂದು ಆರೋಪಿಸಿದ್ದಾರೆ. ನಾವು ಕೂಲಿ ನಾಲಿ ಕೆಲಸಕ್ಕೆ ಹೋಗಿ ಮೈ ಕೈ ನೋವಾಗಿರುತ್ತದೆ ಅನಿವಾರ್ಯ ಕುಡಿಯಲೇ ಬೇಕು ಅದರಲ್ಲೂ ಮದ್ಯದಂಗಡಿಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾರೆ ಈ ಬಗ್ಗೆ ಅಬಕಾರಿ ಇಲಾಖೆಗೆ ತಿಳಿಸಿದರೆ ನಮಗೆ ಸಂಬಂಧವಿಲ್ಲ ಎನ್ನುತ್ತಾರೆ ಇದರಿಂದ ಅಬಕಾರಿ ಇಕಾಖೆ ಮೇಲೆ ಅನುಮಾನಕ್ಕೆ ಎಡೆ ಮಾಡಿದೆ.
ಸರ್ಕಾರ ನಿಗದಿಪಡಿಸಿರುವ ಎಂಆರ್‌ಪಿ ದರದಲ್ಲಿ ಗ್ರಾಹಕರಿಗೆ ಬಾರ್ ಮತ್ತು ರೇಸ್ಟೊರೆಂಟ್‌ಗಳಲ್ಲಿ ಮದ್ಯ ಮಾರಾಟ ಮಾಡಬೇಕು ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆ ಗೆ ಮದ್ಯ ಮಾರಾಟ ಮಾಡಲಾಗುತ್ತಿದೆ ಎನ್ನುವದು ಮದ್ಯ ಪ್ರೀಯರ ಆರೋಪ ಮಾಡುತ್ತಿದ್ದಾರೆ.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಒಂದೊಂದು ಅಂಗಡಿಯಲ್ಲಿ ಒಂದೊಂದು ಬೆಲೆಗೆ ಮಾರಾಟ ಮಾಡುತ್ತಾರೆ ಎಂಬ ಆರೋಪಗಳೂ ಸಹ ಕೇಳಿ ಬರುತ್ತವೆ. ಎಂಸಿ ವೀಕ್ಸಿ, 90m l ಪೌಚ್ ಎಂಆರ್‌ಪಿ ಬೆಲೆ 115 ರೂಪಾಯಿ ಇದೆ ಆದರೆ 140 ರೂಗಳಿಗೆ ದೊಡ್ಡ ಉಳ್ಳಾರ್ತಿ ಮದ್ಯದಂಗಡಿಯಲ್ಲಿ ಮಾರಾಟ ಮಾಡಿದರೆ ಇದೆ ಪೌಚ್ ಮತ್ತೊಂದು ಗ್ರಾಮೀಣ ಭಾಗದ ಮದ್ಯದಂಗಡಿಯಲ್ಲಿ 130 ರೂ, ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಈ ಮದ್ಯದಂಗಡಿ ಮಾಲಿಕರು ಗ್ರಾಹಕರನ್ನು ಸೂಲಿಗೆ ಮಾಡಲಾಗುತ್ತಿದೆ ಈ ಬಗ್ಗೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮೂಲಕ ದೂರು ನೀಡಿದರೆ ನಮಗೆ ಇದು ಸಂಬಂಧವಿಲ್ಲ ಎಂದು ಉತ್ತರ ನೀಡುತ್ತಾರೆ ಎಂದು ಯಾದಲಗಟ್ಟೆ ಗ್ರಾಮದ ಗ್ರಾಹಕರೊಬ್ಬರು ಮಾಹಿತಿ ನೀಡಿದ್ದಾರೆ. ಈಗಲಾದರೂ ಸಂಬಂಧಪಟ್ಟ ಅಧಿಜಾರಿಕರು ಅಧಿಕ ಬೆಲೆಗೆ ಮದ್ಯಮಾರಾಟಕ್ಕೆ ಕಡಿವಾಣ ಹಾಕುವರೇ ಕಾದು ನೋಡಬೇಕಿದೆ.

ಅಬಾಕಾರಿ ಇಲಾಖೆ ಅಧಿಕಾರಿಗಳು ಜ‌ಧ್ವನಿ ಡಿಟಿಟಲ್ ಮೀಡಿಯಾ ದೊಂದಿಗೆ ಮಾತನಾಡಿ ಜ.1 ರಿಂದಲೇ ಮದ್ಯದ ಬೆಲೆ ಹೆಚ್ಚಳವಾಗಿದ್ದು ಮದ್ಯದ ಪೌಚ್ ಮೇಲೆ ಇನ್ನು ಹಳೆ ಬೆಲೆ ಇದೆ ಹೊಸ ಬೆಲೆ ಮುದ್ರಣಗೊಂಡಿಲ್ಲ ಈಗ ಮದ್ಯದಂಗಡಿ ಮಾಲಿಕರು ಖರಿದಿ ಮಾಡಿರುತ್ತಾರೆ ಆದ್ದರಿಂದ ಹಳೆ ಬೆಲೆಗೆ ಮಾರಾಟ ಮಾಡಿದರೆ ಅಂಗಡಿಯವರುಗೆ ನಷ್ಟವಾಗುತ್ತದೆ ಹೊಸ ಬೆಲೆ ಮುದ್ರಣ ಗೊಂಡಾಗ ಹೆಚ್ಚುವರಿ ಬೆಲೆಗೆ ಮಾರಾಟ ಮಾಡಿದರೆ ಅಂತಹ ಅಂಗಡಿಯವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಬ ಭರವಸೆ ನೀಡಿದ್ದಾರೆ

.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page