ರೈತರಿಗೆ ಪರಿವರ್ತಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ :ರೈತಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಆರೋಪ

by | 10/01/24 | ಪ್ರತಿಭಟನೆ


ಹಿರಿಯೂರು :
ತಾಲ್ಲೂಕಿನಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ರೈತರು ಅಕ್ರಮ ಸಕ್ರಮ ಯೋಜನೆಯಲ್ಲಿ ಹಣ ತುಂಬಿ ನಾಲ್ಕು ವರ್ಷ ಕಳೆಯುತ್ತಾ ಬಂದರೂ ರೈತರಿಗೆ ಪರಿವರ್ತಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದಿಲ್ಲ, ಈ ಕುರಿತು ಇಲಾಖೆಯಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ ನಡೆಸಬೇಕು ಎಂಬುದಾಗಿ ರೈತಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ನಗರದ ಬೆಸ್ಕಾಂ ಇಲಾಖೆ ಕಚೇರಿಯ ಮುಂಭಾಗದಲ್ಲಿ ತಾಲ್ಲೂಕು ರೈತಸಂಘದ ವತಿಯಿಂದ ಅಕ್ರಮ ಸಕ್ರಮ ಯೋಜನೆಯಲ್ಲಿ ಪರಿವರ್ತಕ ಅಳವಡಿಸುವುದು ಮತ್ತು ಇಲಾಖೆಯಲ್ಲಿ ನಡೆದಿರುವ ಹಗರಣಗಳ ತನಿಖೆ ನಡೆಸುವಂತೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯ ನಿರ್ವಾಹಕ ಇಂಜಿನಿಯರ್ ಮುಖಾಂತರ ಮುಖ್ಯ ಇಂಜಿನಿಯರ್ ರವರಿಗೆ ಮನವಿಪತ್ರ ಅರ್ಪಿಸಿ ನಂತರ ಅವರು ಮಾತನಾಡಿದರು.
ಕಳೆದ ವರ್ಷ 2023ರಲ್ಲಿ 24 ಕೋಟಿ ಈ ಯೋಜನೆಗೆ ಬಂದಿದ್ದ ಹಣವನ್ನು ಹೊಸ ಸರ್ಕಾರ ಬಂದಾಗ ವಾಪಸ್ ಕೊಡಲಾಗಿತ್ತು, ಈಗ ಈ ಯೋಜನೆಗೆ ಸುಮಾರು 50 ಕೋಟಿ ಅಂದಾಜಿಸಲಾಗಿದೆ ಅಷ್ಟು ಹಣವನ್ನು ಬಿಡುಗಡೆ ಮಾಡಿ ಸ್ಥಳೀಯ ಗುತ್ತಿಗೆದಾರರಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟು ಇನ್ನು ಎರಡು ತಿಂಗಳ ಒಳಗಾಗಿ ಎಲ್ಲಾ ರೈತರಿಗೂ ಪರಿವರ್ತಕವನ್ನು ಅಳವಡಿಸಬೇಕು ಎಂದರಲ್ಲದೆ,
ಅಕ್ರಮ ಸಕ್ರಮ ಯೋಜನೆಯಲ್ಲಿ ಸುಮಾರು 71 ಕಾಮಗಾರಿಗಳಿಗೆ ಕಾರ್ಯಾಧೀಶ ನೀಡದೆ ಕಾಮಗಾರಿ ನಡೆಸಿರುವ ಅಧಿಕಾರಿಗಳ ವಿರುದ್ಧ ನಿಯಮಾನುಸರ ಶಿಸ್ತು ಕ್ರಮ ಕೈಗೊಳ್ಳಬೇಕು ಅಕ್ರಮ ಸಕ್ರಮ ಯೋಜನೆಯೆಲ್ಲಿ ಹಣ ತುಂಬುವುದನ್ನು ನಿಲ್ಲಿಸಿರುವುದನ್ನು ಸರ್ಕಾರ ಕೂಡಲೇ ಪುನಹ ಕಟ್ಟಿ ಸಕ್ರಮಗೊಳಿಸಲು ಅವಕಾಶ ಮಾಡಿಕೊಡಬೇಕು ಎಂದರು.
ತ್ರೀ ಫೇಸ್ ವಿದ್ಯುತ್ ಸರಬರಾಜಿನಲ್ಲಿ ತುಂಬಾ ಕಳಪೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು ದಿನಕ್ಕೆ 7 ಗಂಟೆ ಸರಾಸರಿ ವಿದ್ಯುತ್ ಪೂರೈಸಬೇಕು. ಪರಿವರ್ತಕಗಳು ಸುಟ್ಟುಹೋದಲ್ಲಿ 74 ಗಂಟೆಯಲ್ಲಿ ಟಿಸಿ ಒದಗಿಸಬೇಕು ಮತ್ತು ನಮ್ಮ ಇಲಾಖೆಯ ವಾಹನದಲ್ಲಿ ರೈತರ ಜಮೀನಿಗೆ ಸಾಗಿಸಬೇಕು ಮತ್ತು ಗುಣಮಟ್ಟ ಪರಿವರ್ತಗಳನ್ನು ಕೊಡಬೇಕು.
ಮಾರ್ಡನ್ ವಿಲೇಜ್ ಕಾಮಗಾರಿಯಲ್ಲಿ ಬಾರಿ ಹಗರಣ ನಡೆದಿದೆ, ಇದರ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿಸುತ್ತ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕು ಎಂಬುದಾಗಿ ತಾಲ್ಲೂಕಿನ ರೈತರ ಪರವಾಗಿ ಅವರು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಕಾರ್ಯಪಾಲಕ ಅಭಿಯಂತರರಾದ ಡಿ.ರಾಮಚಂದ್ರ ಈಗ ಅಕ್ರಮ ಸಕ್ರಮ ಯೋಜನೆಯ ಹಣ ಮುಂಜೂರ್ ಆಗಿದೆ, ಹಂತಹಂತವಾಗಿ ಮೂರು ತಿಂಗಳ ಒಳಗಾಗಿ ಎಲ್ಲಾ ಕೆಲಸಗಳನ್ನು ಮುಗಿಸುವ ಪ್ರಯತ್ನ ಮಾಡುತ್ತೇವೆ ಮುಂದಿನ ವಾರ ಮುಖ್ಯ ಇಂಜಿನಿಯರ್ ಅವರನ್ನು ಕರೆಸಿ ಸಭೆ ನಡೆಸೋಣ ಎಂದು ತಿಳಿಸಿದರು.
ಈ ಪ್ರತಿಭಟನೆಯಲ್ಲಿ ರೈತಸಂಘದ ತಾಲ್ಲೂಕು ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ, ರೈತಮುಖಂಡರುಗಳಾದ ಆಲೂರು ಸಿದ್ದರಾಮಣ್ಣ, ಬಿ.ರಂಗಸ್ವಾಮಿ, ಅರಳಿಕೆರೆ ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ ಬಬ್ಬೂರ್ ಫಾರಂ, ಶಿವಣ್ಣ, ರಂಗಜ್ಜ, ಮೀಸೆ ರಾಮಣ್ಣ, ಗೌಡಪ್ಪ, ಮಂಜುನಾಥ್, ರಾಮಕೃಷ್ಣ, ಶಿವಣ್ಣ, ಜಗನ್ನಾಥ್, ಕೆಂಚಪ್ಪ, ತಿಮ್ಮಯ್ಯ, ತಿಪ್ಪೇಸ್ವಾಮಿ, ವಿರುಪಾಕ್ಷಿ, ಮೆಹಬೂಬ್, ನಾಗರಾಜಪ್ಪ, ಮಾಂತೇಶ ಬಗ್ಗನಾಡು, ಕಾಂತರಾಜ್, ಬಾಲು, ಚಂದ್ರಶೇಖರ್ ಇತರರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page