ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಸಮುದಾಯ ಭವನ ಶಂಕು ಸ್ಥಾಪನೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದೆ: ಶಾಸಕ ಟಿ ರಘುಮೂರ್ತಿ

by | 11/01/24 | Uncategorized, ಸುದ್ದಿ

ಚಳ್ಳಕೆರೆ: ಸರ್ಕಾರದ ಯೋಜನೆಗಳು ಸಮರ್ಪಕವಾದ ರೀತಿಯಲ್ಲಿ ಸಾರ್ವಜನಿಕರಿಗೆ ತಲುಪಬೇಕಾದರೆ ಸರ್ಕಾರಿ ಅಧಿಕಾರಿಗಳ ಹಾಗೂ ನೌಕರರ ಸೇವೆ ಅಗತ್ಯವಾದುದು ಕಾರ್ಯಾಂಗ ಹಾಗೂ ಶಾಸಕಾಂಗ ಜೊತೆಯಾಗಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಿದರೆ ರಾಜ್ಯ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಶಾಸಕ ಟಿ ರಘುಮೂರ್ತಿ ಅಭಿಪ್ರಾಯಪಟ್ಟರು.


ನಗರದ ಸರ್ಕಾರಿ ನೌಕರರ ಭವನದ ಆವರಣದಲ್ಲಿ ಸಂಘದ ಸಮುದಾಯ ಭವನದ ಶಂಕುಸ್ಥಾಪನೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಸರ್ವ ಸದಸ್ಯರ ಸಭೆ ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರಿ ನೌಕರರು ದಿನನಿತ್ಯ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಒತ್ತಡದ ಕೆಲಸವನ್ನು ನಿರ್ವಹಿಸುತ್ತಿರುತ್ತಾರೆ ಇಂತಹ ಸಂದರ್ಭಗಳಲ್ಲಿ ವ್ಯಕ್ತಿ ವಿಕಸನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಾನಸಿಕ ಒತ್ತಡದಿಂದ ಹೊರಬಂದು ಉತ್ತಮ ಸಾರ್ವಜನಿಕ ಸೇವೆ ನೀಡಲು ಅನುಕೂಲವಾಗುತ್ತದೆ ಎಂದರು.


ತಾಲೂಕಿನಲ್ಲಿ ಸರ್ಕಾರಿ ನೌಕರರ ಸಮುದಾಯ ಭವನದ ನಿರ್ಮಾಣ ಬಹು ದಿನಗಳ ಬೇಡಿಕೆಯಾಗಿದ್ದು ಶಾಸಕರ ಅನುದಾನದಲ್ಲಿ ಪೂರ್ಣಗೊಳಿಸಲಾಗುವುದು ಸರ್ಕಾರ ರಾಜ್ಯದ 5.25 ಲಕ್ಷ ರಾಜ್ಯ ಸರ್ಕಾರಿ ನೌಕರರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದ್ದು ಓಪಿಎಸ್ ಸೇರಿದಂತೆ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವರು.

ರಾಜ್ಯ ಸರ್ಕಾರಿ ನೌಕರರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ರಾಜಕಾರಣ ಮಾಡದೆ ಸರ್ಕಾರದ ಸೇವೆ ಮಾಡಬೇಕು ನೌಕರರು ಸೋಮಾರಿತನ ಇಚ್ಛಾಶಕ್ತಿಯ ಕೊರತೆ ತೋರದೆ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸದೆ ಉತ್ತಮ ಸೇವೆ ನೀಡಿದಾಗ ಮಾತ್ರ ಸರ್ಕಾರದ ಆಶಯಗಳು ಈಡೇರಲು ಸಹಕಾರಿಯಾಗುತ್ತದೆ ಈ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ನೌಕರರು ಕಟಿಬದ್ಧವಾಗಿರಬೇಕು ಎಂದು ಕಿವಿಮಾತು ಹೇಳಿದರು‌.

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ಮಾತನಾಡಿ ನೂತನ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ರೀತಿಯಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರಿ ನೌಕರರ ಪಾತ್ರ ಬಹುಮುಖ್ಯವಾಗಿದೆ ಸರ್ಕಾರ ನಮ್ಮ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯನವರು 2013 ರಿಂದ 18ರ ವರೆಗಿನ ಅಧಿಕಾರ ಅವಧಿಯಲ್ಲಿ ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸಿದ್ದರು ಈಗ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು 2006ರಿಂದ ಈಚೆಗೆ ನೇಮಕವಾದ ಸರ್ಕಾರಿ ನೌಕರರಿಗೆ ಓಪಿಎಸ್ ಜಾರಿಗೊಳಿಸಬೇಕು ಆರೋಗ್ಯ ಸಂಜೀವಿನಿ ಯೋಜನೆ ಸೇರಿದಂತೆ ಹಲವು ಬೇಡಿಕೆಗಳಿದ್ದು ಸೂಕ್ತ ರೀತಿಯಲ್ಲಿ ನಿರ್ಧಾರ ಕೈಗೊಂಡು ನೌಕರರ ಹಿತ ಕಾಪಾಡಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ನೌಕರರು ಕಚೇರಿಗಳನ್ನು ಬಹಿಷ್ಕರಿಸಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿಎಲ್ ಲಿಂಗೇಗೌಡ ತಹಸಿಲ್ದಾರ್ ರೆಹಾನ್ ಪಾಷಾ ಬಿಇ ಓ ಕೆ ಎಸ್ ಸುರೇಶ್ ತಾಲೂಕು ಪಂಚಾಯತಿ ಇ ಓ ಶಶಿಧರ್ ರಾಜ್ಯ ಗೌರವಾಧ್ಯಕ್ಷ ಬಿಎಚ್ ವೆಂಕಟೇಶಯ್ಯ ರಾಜ್ಯ ಖಜಾಂಚಿ ಸಿದ್ದರಾಮಯ್ಯ ಶ್ರೀನಿವಾಸ್ ತಿಮ್ಮೇಗೌಡ ಎಂ ವಿ ರುದ್ರಪ್ಪ ಡಿ ವೀರೇಶ್ ಎಸ್ ಕೆ ಮಂಜುನಾಥ್ ಬಾಗೇಶ್ ಉಗ್ರಾಣ ಸೇರಿದಂತೆ ಸರ್ಕಾರಿ ನೌಕರ ಸಂಘದ ತಾಲೂಕು ಸಮಿತಿ ಸದಸ್ಯರು ತಾಲೂಕು ವೃಂದ ಸಂಘಗಳ ಅಧ್ಯಕ್ಷರುಗಳು ಪದಾಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page