ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಶಾಸಕ ಟಿ.ರಘುಮೂರ್ತಿ.

by | 11/01/24 | ಸುದ್ದಿ


ಚಳ್ಳಕೆರೆ ಜನ11. ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಡಿ ಎಂದು ಶಾಸಕ ಟಿ.ರಘುಮೂರ್ತಿ ಯವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದು ವೈರಲ್ ಆಗಿದೆ.

ನಿಗಮ ಮಂಡಳಿ ಪ್ರಕಟಿಸುವ ಮುನ್ನವೇ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಪತ್ರ ಬರೆದಿದ್ದು, ”ನನ್ನನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ. ಕಾಂಗ್ರೆಸ್ ಪಕ್ಷ 3 ಬಾರಿ ಸ್ಪರ್ಧೆಗೆ ಅವಕಾಶ ನೀಡಿದೆ.ವರಿಷ್ಠರಿಗೆ, ಕಾರ್ಯಕರ್ತರಿಗೆ ನಾನು ಋಣಿಯಾಗಿರುವೆ.ನಾನು ಸರಕಾರದಿಂದ ಸಹಕಾರ ನಿರೀಕ್ಷಿಸುವೆ, ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಡಿ.ಯಾವುದೇ ಸಮಯದಲ್ಲಿ ಪಕ್ಷಕ್ಕೆ ಮುಜುಗರ ಆಗದ ರೀತಿ ನಡೆದುಕೊಳ್ಳುವೆ” ಎಂದು ಬರೆದಿರುವ ಪತ್ರ ಈಗ ಮಾಧ್ಯಮದಲ್ಲಿ ವೈರಲ್ ಆಗಿದೆ.

ಒಂದೆಡೆ ಕಾಂಗ್ರೆಸ್ ಶಾಸಕರು ಮತ್ತು ಮುಖಂಡರಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗಾಗಿ ತೀವ್ರ ಲಾಬಿ ನಡೆಯುತ್ತಿರುವ ವೇಳೆಯಲ್ಲಿ ರಘುಮೂರ್ತಿ ನನಗೆ ಬೇಡ ಎಂದು ಪತ್ರ ಬರೆದು ಗಮನಸೆಳೆದಿದ್ದಾರೆ ಮಂತ್ರಿಗಿರಿ ಸಿಗಲಿಲ್ಲ ಎನ್ನುವ ಬೇಸರ ಇಲ್ಲ. ಈ ಆಡಳಿತದಲ್ಲಿ ಉನ್ನತ ಸ್ಥಾನ ದೊರೆಯುವ ನಿರೀಕ್ಷೆ, ವಿಶ್ವಾಸ ಇದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದ್ದಾರೆ.
*ಗೆದ್ದು ಬೀಗಿದಾಗ ಕ್ಷೇತ್ರದ ಜನತೆಯೊಂದಿಗೆ ಹಂಚಿಕೊಂಡ ಮಾತುಗಳು.*
ಮೂರನೇ ಬಾರಿಗೆ ಗೆಲುವು ಸಾಧಿಸಿದ ನನಗೆ ಮಂತ್ರಿಗಿರಿಗಿಂತ ಕ್ಷೇತ್ರದ ಅಭಿವೃದ್ಧಿ ಮುಖ್ಯ. ಕಳೆದ ಅವಧಿಯಲ್ಲಿ 2 ವರ್ಷ ಕರೊನಾ ಸೋಂಕು, ಜತೆಗೆ ಬಿಜೆಪಿ ಸರ್ಕಾರ ನಿರೀಕ್ಷಿತ ಅನುದಾನ ನೀಡದೆ ಅಭಿವೃದ್ಧಿ ಕಾರ್ಯ ಕುಂಠಿತವಾಯಿತು.
ನಗರದಲ್ಲಿ ಯುಜಿಡಿ, ರಾಜಕಾಲುವೆ ದುರಸ್ತಿ ಕಾರ್ಯ, ನಗರಸಭೆ ಕಟ್ಟಡ, ರಸ್ತೆಗಳ ವಿಸ್ತರಣೆ ಕಾರ್ಯ ಸೇರಿ ಕೆಲ ಕೆಲಸಗಳು ಅರ್ಧಕ್ಕೆ ನಿಂತಿದ್ದು, ಅವುಗಳನ್ನು ಪೂರ್ಣಗೊಳಿಸಲು ನಿಗಮ ಮಂಡಳಿ ಬದಲು ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದರೆ ಸಾಕು.

ಚುನಾವಣೆ ಸಮಯದಲ್ಲಿ ವಿರೋಧ ಪಕ್ಷದವರು ಏನೆಲ್ಲ ಆರೋಪ ಮಾಡಿದರೂ, ಮತದಾರರು ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಗೆಲುವು ನೀಡಿದ್ದಾರೆ.

ಜನರ ವಿಶ್ವಾಸದಂತೆ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಮುಂದುವರಿಸಲಾಗುವುದು ಎಂಬ ಮಾತುಗಳು ಯ್ಯಾಟ್ರಿಕ್ ಗೆಲುವು ಸಾಧಿಸಿದಾಗ ಕ್ಷೇತ್ರದ ಕಾರ್ಯಕರ್ತರು.ಮುಖಂಡರು ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನ ಸ್ವೀಕರಿಸಿದಾಗ ಹಂಚಿಕೊಂಡ ನೆನಪುಗಳಿವು. ಇವರ ನಡೆ ಅಧಿಕಾರದ ಹಿಂದೆಯಲ್ಲ ಇವರ ನಡೆ ಕ್ಷೇತ್ರದ ಅಭಿವೃದ್ಧಿಕಡೆ ಎಂಬುದನ್ನು ಸಾಬೀತು ಪಡಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page