ವರದಕ್ಷಿಣೆ ಕಿರುಕುಳ ಬರೆ ಎಳೆದ ಗಂಡ -ತಳಕು ಠಾಣೆ ಹಾಗೂ ಮಹಿಳಾ ಸಾಂತ್ವಾನ ಕೇಂಮದ್ರದಲ್ಲಿ ದೂರು ದಾಖಲು…

by | 12/01/24 | ಕ್ರೈಂ

ಚಳ್ಳಕೆರೆ ಜ.12. ವರದಕ್ಷಿಣೆ ತರುವಂತೆ ಒತ್ತಾಯಿಸಿ ಪತಿರಾಯನೊಬ್ಬ ಪತ್ನಿಗೆ ಬರೆ .ಗುಂಡುಪಿನ್ ನಿಂದ ಚುಚ್ಚಿ ಚಿತ್ರಹಿಂಸೆ ನೀಡಿದ ಘಟನೆ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ತಾಲೂಕಿನ ತಳಕು ಹೋಬಳಿ ವ್ಯಾಪ್ತಿಯ ದೊಡ್ಡ ಉಳ್ಳಾರ್ತಿ ಗ್ರಾಮದಲ್ಲಿ ಅಮಾನೀಯ ಕೃತ್ಯ ನಡೆದಿರುವ ಘಟನೆ ಬಗ್ಗೆ ತಳಕು ಪೋಲಿಸ್ ಠಾಣೆಯಲ್ಲಿ ನೊಂದ ಗೃಹಿಣಿ ಹಿಂಸೆ ನೀಡಿದ ಗಂಡನ ವಿರುದ್ದ ದೂರು ನೀಡಿದರೂ ಯಾವುದೇ ಕ್ರಮಜರುಗಿಲ್ಲ ಎಂದು ಈಗ ನೊಂದ ಮಹಿಳೆ ಮಹಿಳಾ ಸಾಂತ್ವಾನ ಸಹಾಯ ಕೇಂದ್ರಕ್ಕೆ ದೂರು ನೀಡಿದ್ದಾರೆ.


ಆಂದ್ರ ಮೂಲದ ರಾಯದುರ್ಗ ತಾಕೂಕಿನ ಗೊಲ್ಲಹಳ್ಳಿ ಗೌರಮ್ಮ28 ವರ್ಷ ವಿವಾಹವಾಗಿ ಸುಮಾರು12 ವರ್ಷ ಹಿಂದೆ ದೊಡ್ಡ ಉಳ್ಳಾರ್ತಿ ಗ್ರಾಮದ ರಾಜಣ್ಣ ಎಂಬುವರೊಂದಿಗೆ ವಿವಾಹವಾಗಿದ್ದರು. ಈಗ ದಂಪತಿಗಳಿಗೆ 10 ವರ್ಷದ ಗಂಡು.8 ವರ್ಷದ ಹೆಣ್ಣು.7 ವರ್ಷದ ಗಂಡು. ಮೂರು ಮಕ್ಕಳಿದ್ದಾರೆ. ಸುಮಾರು 7 ವರ್ಷಗಳಿಂದ ಕುಡಿದು ಬಂದು ದಿನ ನಿತ್ಯ ತವರು ಮನೆಯಿಂದ ವರದಕ್ಷಿಣೆ ತರುವಂತೆ ಹಾಗೂ ನೀನು ಸತ್ತರೆ ನಾನು ಮತ್ತೊಂದು ಮದುವೆಯಾಗುತ್ತೇನೆ ಎಂದು ಮಾನಸಿಕವಾಗಿ.ದೈಹಿಕವಾಗಿ ಕಿರುಕುಳ ನೀಡುತ್ತಾನೆ ಎಲ್ಲೆಂದರೆಲ್ಲಿ ಸೀಗರೇಟಿನಿಂದ ಸುಟ್ಟು ಬರೆ ಎಳೆದಿದ್ದಾನೆ. ಪಿನ್ನದಿಂದ ಚುಚ್ಚಿ ಗಾಯಗೊಳಿಸಿದ್ದಾನೆ ಬಲವಂತವಾಗಿ ಬಾಯಿಗೆ ವಿಷ ಕುಡಿಸಿ ಸಾಯಿಸಲು ಮುಂದಾದಗ ನಮ್ಮ ತಂದೆ ತಾಯಿವರು ಊರಿಂದ ಬಂದು ಮೊಳಕಾಲ್ಮೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿದ್ದಾರೆ ಆಸ್ಪತ್ರೆಗೆ ತಳಕು ಪೋಲಿಸರು ಬಂದು ಮಾಹಿತಿ ಪಡೆದಿದ್ದಾರೆ ದಿನಾಂಕ 8/1/2024 ರಂದು ಗಂಡ ರಾಜಣ್ಣ. ಅತ್ತೆ ಪಾಲಕ್ಕ. ಮೈದುನ ವಿಶ್ವನಾಥ ಮೂರು ಜನರ ಮೇಲೆ ಪ್ರಕರಣ ದಾಖಲಾದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಆದರೆ ಸಂತ್ರಸ್ತರಿಗೆ ನ್ಯಾಯಕೊಡಿಸುವ ಬದಲು ಹಿಂಸೆ ನೀಡಿದವರಿಗೆ ಬೆಂಬಲ ನೀಡುತ್ತಿದ್ದಾರೆ ನನ್ನ ಮೂರು ಮಕ್ಕಳನ್ನು ನನ್ನ ಗಂಡನೊಂದಿಗೆ ಸೇರಿ ಕೆಲವರು ಗೌಪ್ಯ ಸ್ಥಳದಲ್ಲಿ ಬಚ್ಚಿಟ್ಟಿದ್ದಾರೆ ನಾನು ಮಕ್ಕಳಿಗಾಗಿ ಬದುಕಿಬಂದಿದ್ದೇನೆ ನನಗೆ ಮಕ್ಕಳು ಬೇಕು ಹಾಗೂ ತಪ್ಪಿತಸ್ಥರ ವಿರುದ್ದ ಕ್ರಮ ಕೈಕೊಳ್ಳುವಂತೆ ನೊಂದ ಗೃಹಿಣಿ ಗೌರಮ್ಮ ಗಂಡ ಹಾಗೂ ಇತರರ ಮೇಲೆ ಚಳ್ಳಕೆರೆ ನಗರದ ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ದೂರು ನೀಡಿದ್ದಾರೆ.

ದಾರಿ ಕಾಣದ ಯುವತಿ ಇಂದು ಗಂಡನ ಮೇಲೆ ಸೂಕ್ತ ಕ್ರಮ ಕೈಗೊಳ್ಳವಂತೆ ತಳಕು ಠಾಣೆಯಲ್ಲಿ ದೂರು ನೀಡಿದರೂ ಯಾವುದೇ ನ್ಯಾಯ ಸಿಗದೆ ಇರುವುದರಿಂದ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ದೂರು ನೀಡಿ ಒತ್ತಾಯಿಸಿದ್ದಾರೆ.ಮಹಿಳಾ ಸಾಂತ್ವಾನ ಕೇಂದ್ರದ ಬೋರಣ್ಣ ಮಾತನಾಡಿ ದೊಡ್ಡ ಉಳ್ಳಾರ್ತಿ ಗ್ರಾಮದ ಗೃಹಿಣಿ ಗೌರಮ್ಮ ರಕ್ಷಣೆಕೋರಿ ನಮ್ಮಲ್ಲಿ ದೂರು ನೀಡಿದ್ದಾರೆ ನಮ್ಮ ಕೇಂದ್ರದ ಮಹಿಳೆಯರು ಪರಿಶೀಲನೆ ಮಾಡಿದಾಗ ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದ್ದು ಗೌಪ್ಯ ಸ್ಥಳ ಸೇರಿದಂತೆ ವಿವಿಧ ಕಡೆ ಬರೆ ಎಳೆದಿರುವುದು.ಸೀಗರೇಟಿನಿಂದ ಸುಟ್ಟಿರುವುದು ಗುಂಡುಪಿನ್ ನಿಂದ ಚುಚ್ಚಿರುವ ದೃಶ ಕಂಡು ಬಂದಿದ್ದು ಮಹಿಳ ಮಕ್ಕಳ ಕಲ್ಯಾಣ ಹಾಗೂ ಶಿಶು ಅಭಿವೃದ್ಧಿ ಸಹಾಯಕ ನಿರ್ಧೇಶಕ ಹರಿಪ್ರಸಾದ್ ಇವರಿಗೆ ಮಾಹಿತಿ ನೀಡಿದ್ದು ನೊಂದ ಮಹಿಳೆಯ ರಕ್ಷಣೆ ಹಾಗೂ ನ್ಯಾಯಕೊಡಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಸದಸ್ಯ ನೊಂದ ಮಹಿಳೆಗೆ ಜಿಲ್ಲಾ ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page